Thursday, May 16, 2024
Google search engine
Homeಶಿಕ್ಷಣಉದ್ಯೋಗಸಾಲದ ಅಸಲು ಕಟ್ಟಿದ್ದರೆ ರೈತರ 'ಸಂಪೂರ್ಣ ಬಡ್ಡಿ' ಮನ್ನಾ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ !

ಸಾಲದ ಅಸಲು ಕಟ್ಟಿದ್ದರೆ ರೈತರ ‘ಸಂಪೂರ್ಣ ಬಡ್ಡಿ’ ಮನ್ನಾ: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ !

ಬೆಂಗಳೂರು: ಸಹಕಾರ ಬ್ಯಾಂಕು’ಗಳ ಸಾಲದ ಅಸಲು ಕಟ್ಟಿದ್ದರೇ ‘ಸಂಪೂರ್ಣ ಬಡ್ಡಿ’ ಮನ್ನಾ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಕೆಲ ದಿನಗಳ ಹಿಂದೆ ಘೋಷಿಸಿದ್ದರು. ರಾಜ್ಯದ ರೈತರು ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು.ರಾಜ್ಯದ ರೈತರು ಸಹಕಾರಿ ಬ್ಯಾಂಕುಗಳಲ್ಲಿ ಮಾಡಿರುವಂತ ಸಾಲದ ಅಸಲು ಕಟ್ಟಿದರೆ , ಅದರ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದರು.

ಈಗ ಬಗ್ಗೆ ರಾಜ್ಯ ಸರ್ಕಾರದಿಂದ ಅಂತಿಮ ಆದೇಶವನ್ನು ಹೊರಡಿಸಿದ್ದರು, ಅದರಲ್ಲಿ ಈ ಕೆಳಕಂಡತೆ ಉಲ್ಲೇಖ ಮಾಡಲಾಗಿದೆ.

ಸರ್ಕಾರದ ಆದೇಶದಲ್ಲಿ ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಉದ್ಭವಿಸಿರುವ ಅನಾವೃಷ್ಟಿಗಳ ಹಿನ್ನೆಲೆಯಲ್ಲಿ ರಾಜ್ಯದ ರೈತರು ಸಹಕಾರ ಸಂಸ್ಥೆಗಳಿಂದ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಸಾಲ ಪಡೆದು ಸಾಲ ಮರುಪಾವತಿಸಲು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದನ್ನು ಮತ್ತು ಇದರಿಂದ ಸಹಕಾರ ಸಂಸ್ಥೆಗಳು ನಬಾರ್ಡ್ ನಿಂದ ಪಡೆದ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೇ ಪುನಃ ರೈತರಿಗೆ ಸಾಲ ನೀಡಲು ತೊಂದರೆಯಾಗುತ್ತಿರುವುದನ್ನು ಮನಗಂಡು ಇಂತಹ ಸುಸ್ತಿದಾರರಾದ ರೈತರನ್ನು ಋಣಮುಕ್ತರನ್ನಾಗಿ ಮಾಡಿ ಮುಂದಿನ ತಮ್ಮ ಕೃಷಿ ಚಟುವಟಿಕೆಗಳಿಗೆ ಸಾಲ ಪಡೆದು ಅರ್ಹತೆ ಗಳಿಸಲು ಸರ್ಕಾರವು ಯೋಜನೆ ರೂಪಿಸುವುದು ಅತ್ಯವಶ್ಯಕವಾಗಿರುತ್ತದೆ.

ಮೇಲೆ ಓದಲಾದ (2) ರ ಸಹಕಾರ ಸಂಘಗಳ ನಿಬಂಧಕರ ಪತ್ರದಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲಗಳನ್ನು ಪಡೆದು ದಿನಾಂಕ:31.12.2023ರ ಅಂತ್ಯಕ್ಕೆ ಸಹಕಾರ ಸಂಸ್ಥೆಗಳಿಗೆ 56,879 ರೈತರಿಂದ ರೂ. 58,515.96 ಲಕ್ಷಗಳ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸಾಲಗಳು ಸುಸ್ತಿಯಾಗಿದ್ದು, ಇದರ ಮೇಲಿನ ಬಡ್ತಿ ಬಾಬು ರೂ. 44,020.50 ಲಕ್ಷಗಳಾಗಿರುತ್ತವೆ. ಎಂದು ತಿಳಿಸಿರುತ್ತಾರೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಸಹಕಾರ ಸಂಸ್ಥೆಗಳ ಮೂಲಕ ಸಾಲ ಪಡೆದು ದಿನಾಂಕ:31.12.2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮೇಲಿನ ಅಸಲನ್ನು ಪಾವತಿಸದ ರೈತರಿಗೆ ಬಡ್ಡಿಯನ್ನು ಮನ್ನಾ ಮಾಡಲು ಸರ್ಕಾರವು ತೀರ್ಮಾನಿಸಿ ಅದರಂತೆ ಕೆಳಕಂಡ ಆದೇಶ ಹೊರಡಿಸಿದೆ. ಸರ್ಕಾರದ ಆದೇಶ ಸಂಖ್ಯೆ: ಸಿಒ 291 ಸಿಎಲ್‌ಎಸ್ 2023, ಬೆಂಗಳೂರು, ದಿನಾಂಕ: 20.01.2024

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರೈತರು ರಾಜ್ಯದ ಸಹಕಾರ ಸಂಘಗಳು ಅಂದರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು ದಿನಾಂಕ:31.12.2023 ಕ್ಕೆ ಸುಸ್ತಿಯಾಗಿರುವ, ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಕಂತುಗಳ ಅಸಲನ್ನು ದಿನಾಂಕ:29.02.2024 ರೊಳಗೆ ಸಂಬಂಧಪಟ್ಟ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಗೆ ಪೂರ್ತಿಯಾಗಿ ಮರುಪಾವತಿಸಿದಲ್ಲಿ ಈ ಮೊತ್ತಕ್ಕೆ ಬಾಕಿ ಇರುವ ಬಡ್ಡಿಯನ್ನು ಮನ್ನಾ ಮಾಡಲು ಮತ್ತು ಈ ರೀತಿ ಮನ್ನಾ ಮಾಡಿದ ಬಡ್ತಿ ಮೊಬಲಗನ್ನು ಸಹಕಾರ ಸಂಘಗಳಿಗೆ ಸರ್ಕಾರವು ಭರ್ತಿ ಮಾಡಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಮಂಜೂರಾತಿ ನೀಡಲಾಗಿದೆ.

ಷರತ್ತುಗಳು :

1. ಈ ಸೌಲಭ್ಯವು ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳಿಂದ ಸಾಲ ಪಡೆದು ದಿನಾಂಕ:31.12.2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.

2, ಈ ಯೋಜನೆ ಕೃಷಿಯೇತರ ಸಾಲಗಳಿಗೆ ಅನ್ವಯವಾಗುವುದಿಲ್ಲ ಮತ್ತು ಮೇಲೆ ತಿಳಿಸಿರುವ ಸಂಸ್ಥೆಗಳನ್ನು ಹೊರತುಪಡಿಸಿ ಇತರ ಸಹಕಾರ ಸಂಸ್ಥೆಗಳಲ್ಲಿ ಪಡೆದ ಸಾಲಗಳಿಗೆ ಅನ್ವಯಿಸುವುದಿಲ್ಲ. ನಬಾರ್ಡ್‌ ಗುರುತಿಸಿದ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಅಂದರೆ ಲಘು ನೀರಾವರಿ, ಭೂ ಅಭಿವೃದ್ಧಿ, ಸಾವಯವ ಕೃಷಿ, ಪಶುಸಂಗೋಪನೆ ಹಾಗೂ ಹೈನುಗಾರಿಕೆ, ಮೀನು ಕೃಷಿ, ರೇಷ್ಮೆ ಕೃಷಿ, ಕೃಷಿ ಯಾಂತ್ರೀಕರಣ, ಪ್ಲಾಂಟೇಷನ್ ಹಾಗೂ ತೋಟಗಾರಿಕೆ ಅಭಿವೃದ್ಧಿ ಉದ್ದೇಶಗಳಿಗೆ ಮಾತ್ರ ಈ ಯೋಜನೆ ಅನ್ವಯವಾಗುತ್ತದೆ. ಮುಂದುವರೆದು, ರಾಜ್ಯ ಸರ್ಕಾರದ ಬಡ್ಡಿ ರಿಯಾಯತಿ ಬದ್ಧತೆಯಡಿ ವಿತರಿಸಿರುವ ಕೃಷಿ / ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ.

3. ಕೃಷಿ ಪತ್ತಿನ ಸಹಕಾರ ಸಂಘ/ಬ್ಯಾಂಕುಗಳಿಂದ ಪಡೆದು ದಿನಾಂಕ:31.12.2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲನ್ನು ದಿನಾಂಕ:29.02.2024 ರೊಳಗೆ ಸಂಬಂಧಪಟ್ಟ ಸಂಸ್ಥೆಗಳಿಗೆ ಸಾಲ ಪಡೆದ ರೈತರು ಮರುಪಾವತಿ ಮಾಡಿದಲ್ಲಿ ಸದರಿ ಸಾಲಗಳ ಮೇಲಿನ ಮರುಪಾವತಿ ದಿನಾಂಕದವರೆಗಿನ ಬಡ್ಡಿಯನ್ನು ಮನ್ನಾ ಮಾಡಿ ಸಂಬಂಧಪಟ್ಟ ಸಹಕಾರಿ ಸಂಸ್ಥೆಗಳಿಗೆ ಸರ್ಕಾರ ಭರಣ ಮಾಡುವುದು. ಈ ಯೋಜನೆಯು ಮಾರಿಟೋರಿಯಂ ಅವಧಿಯಲ್ಲಿ ಸುಸ್ತಿಯಾಗಿರುವ ಬಡ್ಡಿಗೂ ಸಹ ಅನ್ವಯವಾಗುತ್ತದೆ.

 

ಈ ಯೋಜನೆಯಡಿಯಲ್ಲಿ ಪ್ರಾಥಮಿಕ ಸಹಕಾರ ಸಂಘಗಳು, ಲ್ಯಾಂಪ್ಸ್ ಸಹಕಾರ ಸಂಘಗಳು, ಡಿಸಿಸಿ ಬ್ಯಾಂಕುಗಳು ಮತ್ತು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕು (ಪಿಕಾರ್ಡ್‌) ಗಳಿಗೆ ರೈತರು ಮರುಪಾವತಿಸುವ ಸುಸ್ತಿ ಸಾಲದ ಅಸಲು ದಿನಾಂಕ:01.04.2004 ಕ್ಕಿಂತ ಹಿಂದಿನ ಅವಧಿಯ ಸಾಲವಾಗಿದ್ದರೆ, ಬಡ್ಡಿ ಪಾವತಿಸಲು ಬಾಕಿ ಇದ್ದ ದಿನಾಂಕದಿಂದ ಸಾಲ ಮರುಪಾವತಿ ದಿನಾಂಕದವರೆಗೆ ಸಾಲಗಳಿಗೆ ನಿಗದಿಮಾಡಲಾಗಿರುವ ಬಡ್ತಿ, ದರ ಅಥವಾ ಶೇ.12 ರ ಬಡ್ಡಿದರ ಇದರಲ್ಲಿ ಯಾವುದು ಕಡಿಮೆಯೋ ಅಂತಹ ಬನ್ನಿ ಆಧಾರದಲ್ಲಿ ಸಹಕಾರ ಸಂಘಗಳಿಗೆ ಸರ್ಕಾರದ ವತಿಯಿಂದ ಬಡ್ಡಿ ಸಹಾಯಧನವನ್ನು ಭರಿಸಲಾಗುವುದು.

5. ದಿನಾಂಕ:01.04.2004ರ ನಂತರದಲ್ಲಿನ ಸಾಲಗಳಿಗೆ ಆಯಾ ವರ್ಷದಲ್ಲಿ ರೈತರು ಪಾವತಿಸಬೇಕಾದ ಬನ್ನಿ ಮತ್ತು ಸರ್ಕಾರ ಪಾವತಿಸಬೇಕಾದ ಬಡ್ಡಿ ಸಹಾಯಧನದ ಒಟ್ಟು ಬಡ್ಡಿ ಅಥವಾ ಗರಿಷ್ಟ ಶೇ.12 ಇದರಲ್ಲಿ ಯಾವುದು ಕಡಿಮೆಯೋ ಆ ಬಡ್ಡಿಯನ್ನು ಸಂಬಂಧಿಸಿದ ಸಹಕಾರ ಸಂಸ್ಥೆಗಳಿಗೆ ಸರ್ಕಾರದಿಂದ ಭರಿಸಲಾಗುವುದು. ರೂ.10.00 ಲಕ್ಷಕ್ಕಿಂತ ಹೆಚ್ಚಿನ ಸಾಲವನ್ನು ಸಾಮಾನ್ಯ ಬಡ್ಡಿ ದರದಲ್ಲಿ ವಿತರಿಸಿದ್ದರೂ ಸಹ ಆಯಾ ವರ್ಷದಲ್ಲಿ ರೂ.10.00 ಲಕ್ಷಗಳವರೆಗೆ ನಿಗದಿಪಡಿಸಿದ ಬಡ್ಡಿ ದರದನ್ವಯ ಬಡ್ಡಿ ಮನ್ನಾ ಮೊತ್ತ ಕ್ಷೇಮು ಮಾಡತಕ್ಕದ್ದು.

6. ಈ ಯೋಜನೆಯಲ್ಲಿ ಮರುಪಾವತಿಸುವ ಸಾಲಗಳಿಗೆ ಯಾವುದೇ ಸುಸ್ತಿ ಬಡ್ಡಿ, ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬಡ್ಡಿ, ವಸೂಲಿ ವೆಚ್ಚ (Recovery Charges) ಹಾಗೂ ಇತರೆ ವೆಚ್ಚಗಳನ್ನು ಸಹಕಾರ ಸಂಸ್ಥೆಗಳು ಕ್ಷೇಮು ಮಾಡತಕ್ಕದ್ದಲ್ಲ.

7. ಈ ಯೋಜನೆಯಲ್ಲಿ ತಗಲುವ ವೆಚ್ಚವನ್ನು ಸಹಕಾರ ಇಲಾಖೆಗೆ ಒದಗಿಸಿರುವ ಆಯವ್ಯಯದ ಸಾಮಾನ್ಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯ ಲೆಕ್ಕಶೀರ್ಷಿಕೆಯಲ್ಲಿ ಭರಿಸತಕ್ಕದ್ದು.

8. ಈ ಯೋಜನೆಯಡಿ ಕ್ಷೇಮ್ ಬಿಲ್ಲುಗಳನ್ನು ಸಹಕಾರ ಸಂಘಗಳು ವಸೂಲಾತಿ ಅಂತಿಮ ದಿನಾಂಕದಿಂದ 45 ದಿನಗಳೊಳಗಾಗಿ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸತಕ್ಕದ್ದು, ರೈತರು ಸುಸ್ತಿ ಅಸಲು ಮೊತ್ತವನ್ನು ಮರುಪಾವತಿಸುವ ದಿನಾಂಕದವರೆಗೆ ಮಾತ್ರ ಬಡ್ಡಿ ಕ್ಷೇಮುಗಳಿಗೆ ಅವಕಾಶವಿರುತ್ತದೆ. ಯಾವುದೇ ಕಾರಣದಿಂದಾಗಿ ಕ್ಷೇಮು ಮೊತ್ತ ಬಿಡುಗಡೆಗೆ ಆಗುವ ವಿಳಂಬದ ಅವಧಿಗೆ ಯಾವುದೇ ಕ್ಷೇಮುಗಳಿಗೆ ಅವಕಾಶವಿರುವುದಿಲ್ಲ.

9. ಪ್ಯಾಕ್ಸ್/ಲ್ಯಾಂಪ್ಸ್ ಸಹಕಾರ ಸಂಘಗಳು ಹಾಗೂ ಡಿಸಿಸಿ ಬ್ಯಾಂಕುಗಳ ಬಿಲ್ಲುಗಳನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಯಾರಿಸಿ ಸಹಕಾರ ಸಂಘಗಳ ಲೆಕ್ಕಪರಿಶೋಧನ ಜಂಟಿ / ಉಪ ನಿರ್ದೇಶಕರು ಮತ್ತು ಸಹಕಾರ ಸಂಘಗಳ ಉಪನಿಬಂಧಕರು ಇವರುಗಳ ಜಂಟಿ ದೃಢೀಕರಣದೊಂದಿಗೆ ಬಿಲ್ಲುಗಳನ್ನು ಬಿಡುಗಡೆಗೆ ವ್ಯವಸ್ಥಾಪಕ ನಿರ್ದೇಶಕರು, ಅಪೆಕ್ಸ್ ಬ್ಯಾಂಕ್ ಇವರ ಮೂಲಕ ಸಹಕಾರ ಸಂಘಗಳ ನಿಬಂಧಕರಿಗೆ ಸಲ್ಲಿಸತಕ್ಕದ್ದು.

10. ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕು (ಪಿಕಾರ್ಡ್‌)ಗಳ ಬಿಲ್ಲುಗಳನ್ನು ಜಿಲ್ಲಾ ವ್ಯವಸ್ಥಾಪಕರು ತಯಾರಿಸಿ ಸಹಕಾರ ಸಂಘಗಳ ಲೆಕ್ಕಪರಿಶೋಧನ ಜಂಟಿ / ಉಪ ನಿರ್ದೇಶಕರು ಮತ್ತು ಸಹಕಾರ ಸಂಘಗಳ ಉಪನಿಬಂಧಕರು ಇವರುಗಳ ಜಂಟಿ ದೃಢೀಕರಣದೊಂದಿಗೆ ಅಂತ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments