ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರ ಮಠ ಇಂದು ಬ್ಯಾಡಗಿ ವಿಧಾನ ಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಮಾಡಿದರು. ತೆರೆದ ವಾಹನದಲ್ಲಿ ಮೋಟೆಬೆನ್ನೂರು,
ಕದರಂಮಡಲಗಿ,ಹಾಗು ಬ್ಯಾಡಗಿಯಲ್ಲಿ ರೋಡ್ ಶೋ ನಡೆಸಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಜನರಲ್ಲಿ ಮತಯಾಚನೆ ಮಾಡಿದರು.ಇನ್ನೂ ಅಭ್ಯರ್ಥಿ ಆನಂದಸ್ವಾಮಿಗೆ ಬ್ಯಾಡಗಿ ಕ್ಷೇತ್ರದ ಶಾಸಕ ಬಸವರಾಜು, ಸ್ಥಳಿಯ ಮುಖಂಡರು ಸಾಥ್ ನೀಡಿದರು..