ಗದಗ:- ಬಾಗಲಕೋಟ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್ ಪರ ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಸಿದ್ದಲಿಂಗೇಶ್ವರ ಪಾಟೀಲ್ ಮತಬೇಟೆ ಮಾಡಿದ್ದಾರೆ. ಲಕ್ಕುಂಡಿ ಗ್ರಾಮದಲ್ಲಿ ಮತಯಾಚನೆ ನಡೆಸಿದ್ದಾರೆ.
ಪ್ರತಿಯೊಂದು ಮನೆ ಮನೆಗೂ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ್ ಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಅಂಗಡಿ ವ್ಯಾಪಾರಸ್ಥರಿಗೆ ಕಾಂಗ್ರೆಸ್ ಗೆಲ್ಲಿಸುವಂತೆ ಮನವಿ ಮಾಡಿದ್ದು, ದೇಶದ ಉಳಿವಿಗಾಗಿ ಕಾಂಗ್ರೆಸ್ ಗೆ ಮತ ನೀಡಿ ಎಂದು ಸಿದ್ದಲಿಂಗೇಶ್ವರ ಪಾಟೀಲ್ ಮತಯಾಚನೆ ಮಾಡಿದರು.
ಸಿದ್ದಲಿಂಗೇಶ್ವರ ಪಾಟೀಲ್ ಗೆ ಸ್ಥಳಿಯ ಮುಖಂಡರು ಸೇರಿದಂತೆ ಕಾರ್ಯಕರ್ತರು ಸಾಥ್ ನೀಡಿದರು.