ಹಾವೇರಿ : ಲೋಕಸಭೆಯ ಚುನಾವಣೆಯ ಹಾವೇರಿ-ಗದಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ನಾಮಪತ್ರ ಸಲ್ಲಿಸಿದರು.
ಹಾವೇರಿಯ ಜಿಲ್ಲಾಡಳಿತ ಭವನದಲ್ಲಿ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ಬಿ.ಸಿ.ಪಾಟೀಲ, ಶಾಸಕ ಚಂದ್ರು ಲಮಾಣಿ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ಪುತ್ರ ಭರತ್ ಬೊಮ್ಮಾಯಿ ಸಾಥ್ ನೀಡಿದರು.
ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಬೊಮ್ಮಾಯಿ ಏಪ್ರೀಲ್ 19ರಂದು ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಬೃಹತ್ ರೋಡ್ ಮೂಲಕ ಆಗಮಿಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.