Monday, September 16, 2024
Google search engine
Homeಉದ್ಯೋಗಗದಗ : ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಮನವಿ ಸಲ್ಲಿಕೆ  

ಗದಗ : ಬಸ್‌ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಮನವಿ ಸಲ್ಲಿಕೆ  

ಗದಗ ೯: ಇಂದು ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ವಿದ್ಯಾರ್ಥಿ ಘಟಕದ ವತಿಯಿಂದ ರೋಣ ತಾಲೂಕ ಅಧ್ಯಕ್ಷರು ಎಂ ಎಚ್ ನದಾಫ್ ಹಾಗೂ ರೋಣ ತಾಲೂಕು ಉಪಾಧ್ಯಕ್ಷರಾದ ಬಸವರಾಜ್ ಹಾದಿಮನಿರವರ ನೇತೃತ್ವದಲ್ಲಿ ಹೊಳೆಆಲೂರ ನಿಂದ ಸೋಮನಕಟ್ಟಿ ಗ್ರಾಮಕ್ಕೆ ಬಸ್ಸಿನ ವ್ಯವಸ್ಥೆ ಕುರಿತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಗದಗ ವಿಭಾಗ ರೋಣ ಘಟಕದ ಅಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.

ಈ ಮನವಿ ಸಲ್ಲಿಸಿ ಎಮ್ ಎಚ್ ನದಾಫರವರು ಮಾತನಾಡಿ ಸದರಿ ವಿಷಯದವಾಗಿ ಸುಮಾರು ತಿಂಗಳಿನಿಂದ ವಿದ್ಯಾರ್ಥಿಗಳಿಗೆ ಬಸ್ಸಿನ ಅನುಕೂಲ ಇಲ್ಲದಿರುವುದರಿಂದ ಅನಾನುಕೂಲವಾಗಿರುತ್ತದೆ ಅಲ್ಲದೆ ಹೊಳೆಆಲೂರಿನಲ್ಲಿ ವಿವಿಧ ಶಾಲಾ ಕಾಲೇಜು ಇದ್ದುದ್ದು ಆ ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಹೋಗಲು ತುಂಬಾ ತೊಂದರೆಯಾಗಿದೆ ಅಲ್ಲದೆ ಊರಿನ ಗ್ರಾಮಸ್ಥರಿಗೂ ಕೂಡ ತೊಂದರೆಯಾಗಿದೆ ಎಂದು ಆರೋಪಿಸುವ ಮೂಲಕ ಮನವಿಯನ್ನು ಸಲ್ಲಿಸಲಾಯಿತು.

ಸೋಮನಕಟ್ಟಿ ಗ್ರಾಮದ ಅಧ್ಯಕ್ಷರಾದ ರಾಜು ಮುಲ್ಲಾ ರೋಣ ತಾಲ್ಲೂಕಿನ ವಿದ್ಯಾರ್ಥಿ ಘಟಕದ ಉಪಾಧ್ಯಕ್ಷರಾದ ಸಂಕೇತ ದಾನರೆಡ್ಡಿ ಹಾಗೂ ಹೊಳೆಆಲೂರು ವಿದ್ಯಾರ್ಥಿ ಘಟಕದ ಅಧ್ಯಕ್ಷರಾದ ಸಂಜು ಮಾದರ್ ಹಾಗೂ ವಿದ್ಯಾರ್ಥಿ ಘಟಕದ ಉಪಧ್ಯಕ್ಷರಾದ ಕಾರ್ತಿಕ್ ಬಡಿಗೇರ್ ಹಾಗೂ ಹೊಳೆಆಲೂರು ಗ್ರಾಮ ಘಟಕ ಉಪಾದಕ್ಷರಾದ ಶರೀಫ್ ನದಾಫ್, ಪ್ರವೀಣ್ ಪ್ರಸನ್ನವರ್ ರಮೇಶ್ ನಡುವಿನಮನಿ ಉಪಸ್ತಿರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ