15.7 C
New York
Friday, May 9, 2025

Buy now

spot_img

ಗದಗ : ಕಾನೂನು ವಿದ್ಯಾರ್ಥಿಗಳೊಡನೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಸಂವಾದ

ಗದಗ : ನಗರದ ಜೆ.ಟಿ. ಕಾಲೇಜಿನಲ್ಲಿ ಮಂಗಳವಾರ ಕಾನೂನು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೊಡನೆ ಮಾನವ ಹಕ್ಕುಗಳ ಆಯೋಗ ಅಧ್ಯಕ್ಷ ಟಿ. ಶ್ಯಾಮ ಭಟ್ ಅವರು ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿ ಮಾನವ ಆಯೋಗದ ಘಟಕಗಳನ್ನು ತಾಲೂಕ, ಗ್ರಾಮ ಮಟ್ಟದಲ್ಲಿಯೂ ಪ್ರಾರಂಬಿಸುವಂತೆ ಕೇಳಿದಾಗ ಅಯೋಗದ ಸದಸ್ಯರು ಅದಕ್ಕೆ ಉತ್ತರಿಸಿ ಈಗ ಮಾನವ ಹಕ್ಕುಗಳ ಆಯೋಗ ಮುಖ್ಯ ಸಂಸ್ಥೆ ಬೆಂಗಳೂರಿನಲ್ಲಿದ್ದು ತಮ್ಮ ಸಲಹೆಯಂತೆ ತಾಲೂಕ ಮತ್ತು ಗ್ರಾಮ ಮಟ್ಟದಲ್ಲಿ ಪ್ರಾರಂಭಿಸುವ ವಿಷಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಇನೊರ್ವ ವಿದ್ಯಾರ್ಥಿ ಮಾನವ ಹಕ್ಕುಗಳ ಆಯೋಗಕ್ಕೆ ಯಾವುದೇ ರೀತಿಯ ಹೆಸರನ್ನು ನಮೂದಿಸಿದೆ ಮೂಕರ್ಜಿ ನೀಡಬಹುದೇ ಎಂದು ಪ್ರಶ್ನಿಸಿದನು ಅದಕ್ಕೆ ಉತ್ತರಿಸಿದ ಆಯೋಗದ ಅಧ್ಯಕ್ಷರು ಯಾವುದೇ ರೀತಿಯ ದೂರುಗಳಿದಲ್ಲಿ ಹೆಸರನ್ನು ನಮೂದಿಸಿ ಅಹವಾಲು ನೀಡಬೇಕು ಅಥವಾ ಖುದ್ದಾಗಿ ದೂರುದಾರ ಅಹವಾಲು ನೀಡಲು ನಿರಾಕರಿಸಿದರೆ ಅವರ ಬದಲಾಗಿ ಬೇರೆಯವರು ಅಹವಾಲನ್ನು ತಮ್ಮ ಹೆಸರಲ್ಲಿ ನೀಡಬಹುದಾಗಿದೆ ಎಂದರು.

ಮಾನವ ಹಕ್ಕುಗಳ ಅಯೋಗದ ಹೆಸರನ್ನು ಸ್ಥಳಿಯ ಕೇಲವರು ತಮ್ಮ ವಾಹನಗಳಲ್ಲಿ ಬಳಸಿಕೊಳ್ಳುತ್ತಾರೆ ಎಂದಾಗ ಅಯೋಗದ ಸದದ್ಯರಾದ ಎಸ್.ಕೆ. ವಂಟಿಗೋಡಿ ಪ್ರತಿಕ್ರಿ0iÉುಸಿ ಮಾನವ ಅಯೋಗದ ಹೆಸರು ಬಳಸಿಕೊಳ್ಳುವುದು ಕಾನೂನು ಬಾಹಿರವಾಗಿದ್ದು ಅಂತಹ ವಾಹನಗಳು ಕಂಡು ಬಂದಲ್ಲಿ ಆಯೋಗದ ಗಮನಕ್ಕೆ ತರುವಂತೆ ವಿದ್ಯಾರ್ಥಿಗಳಿಗೆ ಹೇಳಿದರು.

ಕಾನೂನು ವಿದ್ಯಾರ್ಥಿಗಳು ಸಮಾಜ ಸುಧಾರಣೆಯ ಅಭಿಯಂತರರು ಇದ್ದಂತೆ, ಮಾನವ ಅಯೋಗದ ಕಾರ್ಯ ಮತ್ತು ಮಹತ್ವವನ್ನು ತಿಳಿದುಕೊಂಡು, ಧೈರ್ಯದಿಂದ ಸಮಾಜ ಸುಧಾರಣೆಯ ಕೆಲಸವಾಗಬೇಕು ಎಂದು ಹೇಳಿದರು.

ಮಾನವ ಹಕ್ಕುಗಳ ಆಯೋಗದ ವಿಷಯ ಮೇಲೆ ತರಬೇತಿ ನೀಡಲಾಗುತ್ತಿದೆ ಅದರ ಸದುಪಯೋಗ ತೆಗೆದುಕೊಳ್ಳಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಆಯೋಗದ ಕಾರ್ಯದರ್ಶಿ ಎ.ದಿನೇಶ್ ಸಂಪತ್ ರಾಜ್, ಆಪ್ತ ಕಾರ್ಯದರ್ಶಿ ಅರುಣ ಪೂಜಾರ, ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ ಗದಗ : ಭೋವಿ ಸಮಾಜದ ಹೆಮ್ಮೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಟಿ ಬಿಸನಳ್ಳಿ ಗೆ ಗೌರವ ಡಾಕ್ಟರೇಟ್ ಪದವಿ