Sunday, September 8, 2024
Google search engine
HomeUncategorizedಗದಗ : ಕಾನೂನು ವಿದ್ಯಾರ್ಥಿಗಳೊಡನೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಸಂವಾದ

ಗದಗ : ಕಾನೂನು ವಿದ್ಯಾರ್ಥಿಗಳೊಡನೆ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರ ಸಂವಾದ

ಗದಗ : ನಗರದ ಜೆ.ಟಿ. ಕಾಲೇಜಿನಲ್ಲಿ ಮಂಗಳವಾರ ಕಾನೂನು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳೊಡನೆ ಮಾನವ ಹಕ್ಕುಗಳ ಆಯೋಗ ಅಧ್ಯಕ್ಷ ಟಿ. ಶ್ಯಾಮ ಭಟ್ ಅವರು ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿ ಮಾನವ ಆಯೋಗದ ಘಟಕಗಳನ್ನು ತಾಲೂಕ, ಗ್ರಾಮ ಮಟ್ಟದಲ್ಲಿಯೂ ಪ್ರಾರಂಬಿಸುವಂತೆ ಕೇಳಿದಾಗ ಅಯೋಗದ ಸದಸ್ಯರು ಅದಕ್ಕೆ ಉತ್ತರಿಸಿ ಈಗ ಮಾನವ ಹಕ್ಕುಗಳ ಆಯೋಗ ಮುಖ್ಯ ಸಂಸ್ಥೆ ಬೆಂಗಳೂರಿನಲ್ಲಿದ್ದು ತಮ್ಮ ಸಲಹೆಯಂತೆ ತಾಲೂಕ ಮತ್ತು ಗ್ರಾಮ ಮಟ್ಟದಲ್ಲಿ ಪ್ರಾರಂಭಿಸುವ ವಿಷಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.

ಇನೊರ್ವ ವಿದ್ಯಾರ್ಥಿ ಮಾನವ ಹಕ್ಕುಗಳ ಆಯೋಗಕ್ಕೆ ಯಾವುದೇ ರೀತಿಯ ಹೆಸರನ್ನು ನಮೂದಿಸಿದೆ ಮೂಕರ್ಜಿ ನೀಡಬಹುದೇ ಎಂದು ಪ್ರಶ್ನಿಸಿದನು ಅದಕ್ಕೆ ಉತ್ತರಿಸಿದ ಆಯೋಗದ ಅಧ್ಯಕ್ಷರು ಯಾವುದೇ ರೀತಿಯ ದೂರುಗಳಿದಲ್ಲಿ ಹೆಸರನ್ನು ನಮೂದಿಸಿ ಅಹವಾಲು ನೀಡಬೇಕು ಅಥವಾ ಖುದ್ದಾಗಿ ದೂರುದಾರ ಅಹವಾಲು ನೀಡಲು ನಿರಾಕರಿಸಿದರೆ ಅವರ ಬದಲಾಗಿ ಬೇರೆಯವರು ಅಹವಾಲನ್ನು ತಮ್ಮ ಹೆಸರಲ್ಲಿ ನೀಡಬಹುದಾಗಿದೆ ಎಂದರು.

ಮಾನವ ಹಕ್ಕುಗಳ ಅಯೋಗದ ಹೆಸರನ್ನು ಸ್ಥಳಿಯ ಕೇಲವರು ತಮ್ಮ ವಾಹನಗಳಲ್ಲಿ ಬಳಸಿಕೊಳ್ಳುತ್ತಾರೆ ಎಂದಾಗ ಅಯೋಗದ ಸದದ್ಯರಾದ ಎಸ್.ಕೆ. ವಂಟಿಗೋಡಿ ಪ್ರತಿಕ್ರಿ0iÉುಸಿ ಮಾನವ ಅಯೋಗದ ಹೆಸರು ಬಳಸಿಕೊಳ್ಳುವುದು ಕಾನೂನು ಬಾಹಿರವಾಗಿದ್ದು ಅಂತಹ ವಾಹನಗಳು ಕಂಡು ಬಂದಲ್ಲಿ ಆಯೋಗದ ಗಮನಕ್ಕೆ ತರುವಂತೆ ವಿದ್ಯಾರ್ಥಿಗಳಿಗೆ ಹೇಳಿದರು.

ಕಾನೂನು ವಿದ್ಯಾರ್ಥಿಗಳು ಸಮಾಜ ಸುಧಾರಣೆಯ ಅಭಿಯಂತರರು ಇದ್ದಂತೆ, ಮಾನವ ಅಯೋಗದ ಕಾರ್ಯ ಮತ್ತು ಮಹತ್ವವನ್ನು ತಿಳಿದುಕೊಂಡು, ಧೈರ್ಯದಿಂದ ಸಮಾಜ ಸುಧಾರಣೆಯ ಕೆಲಸವಾಗಬೇಕು ಎಂದು ಹೇಳಿದರು.

ಮಾನವ ಹಕ್ಕುಗಳ ಆಯೋಗದ ವಿಷಯ ಮೇಲೆ ತರಬೇತಿ ನೀಡಲಾಗುತ್ತಿದೆ ಅದರ ಸದುಪಯೋಗ ತೆಗೆದುಕೊಳ್ಳಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಆಯೋಗದ ಕಾರ್ಯದರ್ಶಿ ಎ.ದಿನೇಶ್ ಸಂಪತ್ ರಾಜ್, ಆಪ್ತ ಕಾರ್ಯದರ್ಶಿ ಅರುಣ ಪೂಜಾರ, ಕಾಲೇಜಿನ ಪ್ರಾಂಶುಪಾಲರು, ಪ್ರಾಧ್ಯಾಪಕರು ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಅಂತಾರಾಷ್ಟ್ರೀಯ ಕುಸ್ತಿ : ಲಕ್ಕುಂಡಿಯ ಗ್ರಾಂ, ಪಂಚಾಯತ ಸದಸ್ಯ ರಮೇಶ ಚಾಂಪಿಯನ್ ಗದಗ : ಹೆಸರು ಕಾಳು ಖರೀದಿ ಕೇಂದ್ರ ಉದ್ಘಾಟನೆ ಲಕ್ಕುಂಡಿ : ಪೈಲ್ವಾನರ ಪಟ್ಟು, ಬಯಲು ಜಂಗೀ ಕುಸ್ತಿ ಖದರ್  ಗದಗ : ಭೂಮರಡ್ಡಿ ವೃತ್ತದಲ್ಲಿ ಅಪಘಾತ : ಪೋಲೀಸ್ ಪೇದೆ ಸ್ಥಳದಲ್ಲೇ ಸಾವು !  ಗದಗ : ಅನಾಮಧೇಯ ಮಹಿಳೆ ಸಾವು : ವಾರಸುದಾರರ ಪತ್ತೆಗೆ ಮನವಿ ಗದಗ : ಸುಭದ್ರ ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು :ಎಸ್ ವಿ ಸಂಕನೂರು ಗದಗ : ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನಕ್ಕೆ ಅರ್ಜಿ ಆಹ್ವಾನ ಗದಗ : ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ ಗದಗ : ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ