23 C
New York
Friday, July 4, 2025

Buy now

spot_img

ಗದಗ : ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ಪೂರ್ವಭಾವಿ ಸಭೆ 

ಗದಗ ೧೪ : ನಗರದ ದುಂಡಪ್ಪ ಮಾನ್ವಿ ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದಿAದ ಪೂರ್ವಭಾವಿ ಸಭೆ ಜರುಗಿತು. ಸಭೆಯನ್ನು ಉದ್ದೇಶಿಸಿ ಎಚ್.ಎನ್. ರಮೇಶ ಕಾನೂನು ಸಲಹೆಗಾರರು ಹಾಗೂ ನಿವೃತ್ತ ಕಾರ್ಮಿಕ ಅಧಿಕಾರಿ ಮಾತನಾಡಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘ (ರಿ), ಆರೋಗ್ಯ ಇಲಾಖೆಯಲ್ಲಿ ಹತ್ತಾರು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಸುಮಾರು ೯,೦೦೦ ಜನ ನೌಕರರು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರವು ಒಂದು ರಾಜಕೀಯ ಸಂಸ್ಥೆಗೆ ಟೆಂಡರ್ ನೀಡಿ ನೌಕರರನ್ನು ಶೋಷಿಸುತ್ತಿದೆ. ರಾಜ್ಯದಲ್ಲಿ ಸುಮಾರು ೨.೫೦ ಲಕ್ಷ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡದೇ ಗುತ್ತಿಗೆ ಪದ್ಧತಿಯನ್ನು ಮುಂದುವರಿಸಿದೆ. ಇದರಿಂದ ನೌಕರರಿಗೆ ಸರಿಯಾದ ಸಮಯಕ್ಕೆ ವೇತನ ದೊರೆಯದೇ ಜೀವನ ಸಾಗಿಸಲು ತುಂಬಾ ತೊಂದರೆಯಾಗುತ್ತಿದೆ. ಕೋವಿಡ್ ನಂತಹ ಮಹಾಮಾರಿ ರೋಗದ ಸಮಯದಲ್ಲಿ ಪ್ರಾಣದ ಹಂಗು ತೊರೆದು ಆರೋಗ್ಯ ಇಲಾಖೆ ಸಿಬ್ಬಂದಿಯವರು ಕಾರ್ಯನಿರ್ವಹಿಸಿದ್ದಾರೆ. ಆದರೆ ಸರ್ಕಾರವು ಇತ್ತೀಚಿಗೆ ಹೊರಗುತ್ತಿಗೆ ಪದ್ಧತಿಯಲ್ಲಿಯೂ ಕೂಡಾ ಮೀಸಲಾತಿ ತಂದಿರುವುದು ನಮ್ಮೆಲ್ಲರ ವಿರೋಧವಿದೆ. ಎಷ್ಟೋ ಕುಟುಂಬಗಳು ಈ ಧೋರಣೆಯಿಂದ ಬೀದಿಪಾಲಾಗಿವೆ. ಹೊರಗುತ್ತಿಗೆದಾರರಿಗೆ ಸರ್ಕಾರದಿಂದ ಯಾವುದೇ ಪಿಂಚಣಿ, ಭವಿಷ್ಯ ನಿಧಿ ಇಂತಹ ಸೌಲಭ್ಯಗಳಿಂದ ವಂಚಿತರಾಗಿರುತ್ತೇವೆ. ಹೊರಗುತ್ತಿಗೆದಾರರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡರೆ ಈವರೆಗೂ ಆರೋಗ್ಯ ಸಚಿವರು ಅದನ್ನು ಪರಿಗಣಿಸದೇ ಇರುವುದು ನಮ್ಮೆಲ್ಲರ ದುರ್ದೈವ. ನಮ್ಮ ನ್ಯಾಯಯುತ ಬೇಡಿಕೆಗಳಾದ ಸಮಾನ ಕೆಲಸಕ್ಕೆ ಸಮಾನ ವೇತನ, ಖಾಸಗಿ ಸಂಸ್ಥೆ ಬದಲಾಗಿ ಸರ್ಕಾರಿ ಸಂಸ್ಥೆ ಅಥವಾ ನಿಗಮ ಮಂಡಳಿ ಮೂಲಕ ವೇತನ ಪಾವತಿ ಮಾಡುವ ವ್ಯವಸ್ಥೆ ಕಲ್ಪಿಸುವುದು, ಸೇವಾ ಭದ್ರತೆ ನೀಡುವುದು, ಮೀಸಲಾತಿ ಹೆಸರಿನಲ್ಲಿ ಹಳೆಯ ನೌಕರರನ್ನು ಕೆಲಸದಿಂದ ತೆಗೆಯಬಾರದು ಮತ್ತು ಪ್ರಸಕ್ತ ಕಾರ್ಯನಿರ್ವಹಿಸುತ್ತಿರುವ ಎಲ್ಲ ನೌಕರರನ್ನು ಮುಂದುವರೆಸುವುದು ಈ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕೆಂದು ಈ ಪೂರ್ವಭಾವಿ ಸಭೆಯಲ್ಲಿ ಸವಿಸ್ತಾರವಾಗಿ ಕಾನೂನು ಸಲಹೆಗಾರರಾದ ಎಚ್.ಎನ್. ರಮೇಶ ಅಭಿಪ್ರಾಯಪಟ್ಟರು.

ಈ ಪೂರ್ವಭಾವಿ ಸಭೆಯಲ್ಲಿ ಅಕ್ಷಯ ಡಿ.ಎಮ್. ಗೌಡ, ಶಿವಕುಮಾರ ಆರ್., ಶ್ರೀಮತಿ ಮಂಜುಳಾ, ಶ್ರೀಮತಿ ಸಾವಿತ್ರಿ ಬಿ. ಇಪ್ಪರಗಿ, ರವೀಂದ್ರ ಬಿ., ನವೀನಕುಮಾರ ಬಿ., ಪ್ರವೀಣ ಶಿಗ್ಲಿಯವರ, ಶ್ರೀಶೈಲ ಕರಿಬೀಮಗೋಳ, ಕೇದಾರೇಶ್ವರ ದೊಡ್ಡಮನಿ, ಸುರೇಶ ಜೋಗಿನ, ಕೆ.ಎಚ್. ಅಮೀರಅಲಿ, ರಂಜಾನಸಾಬ ಹಳ್ಯಾಳ ಸೇರಿದಂತೆ ಗದಗ ಜಿಲ್ಲಾ ಎಲ್ಲ ತಾಲೂಕುಗಳ ಹೊರಗುತ್ತಿಗೆ ನೌಕರರು ಉಪಸ್ಥಿತರಿದ್ದರು. ನಾಳೆ ದಿನಾಂಕ: ೧೫-೦೭-೨೦೨೪ ಸೋಮವಾರ ದಂದು ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಆರೋಗ್ಯ ಸಚಿವರಿಗೆ ಗದಗ ಜಿಲ್ಲಾ ಆರೋಗ್ಯ ಅಧಿಕಾರಿಗಳ ಮೂಲಕ ಬೆಳಿಗ್ಗೆ ೧೧-೦೦ ಗಂಟೆಗೆ ಮನವಿಯನ್ನು ಸಲ್ಲಿಸಲಾಗುವುದು ಎಂದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಬಸವರಾಜ ಬಳ್ಳಾರಿ ಆಯ್ಕೆ ಗದಗ : ನರಗುಂದದಲ್ಲಿ ಜುಲೈ 9 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ” : ರೋಣ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ" ಗದಗ : ವಚನ ಸಾಹಿತ್ಯದ ತತ್ವಗಳನ್ನು ಯುವಜನಾಂಗ ಮೈಗೂಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಗದಗ : ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಬ್ಬ ಮೊಹರಂ - ಅಬ್ದುಲ್ ಮುನಾಫ್ ಮುಲ್ಲಾ  ಗದಗ : ಮಕ್ಕಳಿಗೆ ವಿದ್ಯೆಯ ಜೊತೆ ಆರೋಗ್ಯವೂ ಮುಖ್ಯ : ಡಾ. ಪ್ರಜ್ಜಲ ಎಂ ಹಿರೇಮಠ  ಗದಗ : ಯಕ್ಷಗಾನ ; ಸಿರಿಸಿಂಗಾರಿ ಭಾಗ್ಯದಂಬಾರಿ”  ಗದಗ : ಜಿಲ್ಲಾ ನೋಟರಿ ಸಂಘದ ವತಿಯಿಂದ  ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ಗದಗ : ಅವಾಸ್ ಯೋಜನೆಗೆ ಅರ್ಜಿ ಆಹ್ವಾನ ಗದಗ : ಯೂರಿಯಾ ರಸಗೊಬ್ಬರಕ್ಕೆ ಪರ್ಯಾಯವಾಗಿ ನ್ಯಾನೋ ಯೂರಿಯಾ ಬಳಸಿ