14.7 C
New York
Friday, May 9, 2025

Buy now

spot_img

ಗದಗ : ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿ – ಸಂಗಮೇಶ ಬಬಲೇಶ್ವರ

ಗದಗ  ಜುಲೈ 18 : ಧಾರವಾಡದ ಕರ್ನಾಟಕ ರಾಜ್ಯ ಬಾಲ ವಿಕಾಸ ಅಕಾಡಮಿಯಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಬುಧವಾರ ನಗರದ ಬಾಲಕಿಯರ ಸರಕಾರಿ ಬಾಲ ಮಂದಿರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಅವರು ಅಲ್ಲಿನ ವಸತಿ, ಆಹಾರ ಪದಾರ್ಥಗಳು, ಕ್ರೀಡೆ ಹಾಗೂ ಆರೋಗ್ಯಕ್ಕೆ ಸಂಬಂಧಿಸಿದ ಪರಿಕರಗಳನ್ನು ಪರಿಶೀಲಿಸಿದರು. ಮಕ್ಕಳೊಂದಿಗೆ ಸಂವಾದ ಮಾಡಿ, ಮಕ್ಕಳ ಕುಶಲೋಪರಿ ವಿಚಾರಿಸಿದರು, ಮಕ್ಕಳ ಹವ್ಯಾಸಗಳು, ಮಕ್ಕಳ ವಿಶೇಷ ಪ್ರತಿಭೆಗಳ ಬಗ್ಗೆ ಚರ್ಚಿಸಿದರು. ಮಕ್ಕಳು ತಯಾರಿಸಿದ ಕರಕುಶಲ ವಸ್ತುಗಳನ್ನು ವೀಕ್ಷಿಸಿದರು.

ಮಕ್ಕಳಿಗೆ ಕೌಟುಂಬಿಕ ವಾತಾವರಣವನ್ನು ಸೃಷ್ಠಿಸುವುದು, ಮಕ್ಕಳ ಸಮಸ್ಯೆಗಳಿಗೆ ಸ್ಪಂದಿಸುವುದು ಮಕ್ಕಳೊಂದಿಗೆ ನಿರಂತರ ಸಮಾಲೋಚನೆ ಮಾಡುವುದು ಹಾಗೂ ಸೂಕ್ತ ಮಾರ್ಗದರ್ಶನ ನಿಡುವ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಶ್ರಮಿಸಬೇಕು ಎಂದು ತಿಳಿಸಿದರು.

ಬಾಲಮಂದಿರ ಕಟ್ಟಡ ವೀಕ್ಷಿಸಿ ಮಕ್ಕಳ ಹಿತದೃಷ್ಠಿಯಿಂದ ಕಂಪೌಂಡ ಅವಶ್ಯವಿದ್ದು, ಬೇಗನೆ ಅನುದಾನ ಬಿಡುಗಡೆಗೆ ಅನುಪಾಲನೆ ಮಾಡಲು ಸೂಚಿಸಿದರು. ಮಳೆಗಾಲದ ಅವಧಿಯಲ್ಲಿ ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಚಿಕನ್‍ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಮಕ್ಕಳಿಗೆ ತಾಗದಂತೆ ಎಚ್ಚರ ವಹಿಸಿ ಮತ್ತು ವಸತಿ ನಿಲಯದ ಸುತ್ತಮುತ್ತ ಕೊಳಚೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕೆಂದು ಸೂಚಿಸಿದರು.

ಈ ಸಂದರ್ಭದಲ್ಲಿ ಬಾಲಕಿಯರ ಸರಕಾರಿ ಬಾಲಮಂದಿರದ ಅಧೀಕ್ಷಕರು ಶ್ರೀಮತಿ ಲಕ್ಷ್ಮೀ ಬಾಗೇವಾಡಿ, ಶ್ರೀಮತಿ ಶಶಿಕಲಾ ಕವಲೂರು ಮತ್ತು ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಪ್ರವೀಣಕುಮಾರ ಬ ಬೆಟಗೇರಿ, ಶ್ರೀಮತಿ ರೂಪಾ ಎಸ್ ಉಪ್ಪಿನ್ ಹಾಗೂ ರವಿ ಉಮಚಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ