15.7 C
New York
Friday, May 9, 2025

Buy now

spot_img

ಮುಂಡರಗಿ: ಕೈ ಹಿಡಿದ ಡ್ರ್ಯಾಗನ್ ಫ್ರೂಟ್ ನರೇಗಾ ಸಹಾಯದಿಂದ ಲಕ್ಷ ಲೆಕ್ಕದ ಫಸಲು ಬೆಳೆದ ರೈತ

ಗದಗ  ಜುಲೈ 20 : ಮುಂಡರಗಿ ತಾಲೂಕಿನ ಹಾರೋಗೇರಿ ಗ್ರಾಮದ ರೈತ ಮೈಲಾರೆಪ್ಪ ಚೋಳಮ್ಮನವರ ತಮ್ಮ ಒಂದು ಎಕರೆ ಜಮೀನಿನಲ್ಲಿ 2021-22ನೇ ಸಾಲಿನಲ್ಲಿ ಡ್ರ್ಯಾಗನ್ ಫ್ರೂಟ್ ಸಸಿ ನಾಟಿ ಮಾಡಿದ್ದರು. ಆಗ ಡ್ರ್ಯಾಗನ್ ಫ್ರೂಟ್ ಬೆಳೆಯಲು ಮುಂದಾದಾಗ ಕೈ ಹಿಡಿದಿದ್ದು ನರೇಗಾ ಯೋಜನೆ. ನರೇಗಾ ಯೋಜನೆಯಡಿ ತೋಟಗಾರಿಕೆ ಇಲಾಖೆ ಮೂಲಕ ದೊರೆತ ಸಹಾಯಧನದಿಂದ ಒಂದು ಎಕರೆಯಲ್ಲಿ 35ರೂಪಾಯಿಗೆ ಒಂದರಂತೆ 1700 ಸಸಿಗಳನ್ನು ತಂದು ನೆಟ್ಟಿದ್ದರು.

ನೆಟ್ಟ ವರ್ಷ ಹೊರತು ಪಡಿಸಿದರೆ ನಂತರದ ಮೂರು ವರ್ಷಗಳಲ್ಲಿ ಕ್ರಮವಾಗಿ 1.50 ಲಕ್ಷ, 2.50 ಲಕ್ಷ ಕೈ ಸೇರಿದೆ. ಈ ವರ್ಷ ಈಗಾಗಲೇ 2.50 ಲಕ್ಷ ಆದಾಯ ಕೈ ಸೇರಿದ್ದು ಇನ್ನು ಎರಡು ಲಕ್ಷ ರೂಪಾಯಿಗಳ ಆದಾಯದ ನಿರೀಕ್ಷೆಯಲ್ಲಿ ರೈತ ಮೈಲಾರೆಪ್ಪ ಇದ್ದಾರೆ. ಮೈಲಾರೆಪ್ಪನವರ ಮಕ್ಕಳಾದ ಮರುಳಸಿದ್ದಪ್ಪ, ಭರತ, ನಿಂಗರಾಜ ಅವರು ಸಹ ಜಮೀನಿನ ಉಸ್ತುವಾರಿಯಲ್ಲಿದ್ದು ಪ್ರತಿ ವರ್ಷದ ಮಳೆಗಾಲದ ಸಮಯದಲ್ಲಿ ಲಕ್ಷಗಳ ಲೆಕ್ಕದಲ್ಲಿ ಡ್ರ್ಯಾಗನ್ ಫ್ರೂಟ್ ಫಸಲು ಕಟಾವಿಗೆ ಬರುತ್ತಿರುವುದು ಅವರ ಹುಮ್ಮಸ್ಸನ್ನು ಇಮ್ಮಡಿಗೊಳಿಸಿದೆ. ಇನ್ನು ಡ್ರ್ಯಾಗನ್ ಫ್ರೂಟ್ ಸಸಿಗಳನ್ನು ತಂದು ರೈತ ಮೈಲಾರೆಪ್ಪನವರು ನೆಡುವಾಗ ಈ ಭಾಗಕ್ಕೆ ಅದು ಹೊಸ ಹಣ್ಣು. ಈಗ ಡ್ರ್ಯಾಗನ್ ಫ್ರೂಟ್ ಕಟಾವಿನ ಸಮಯದಲ್ಲಿ ಕೊಂಡುಕೊಳ್ಳಲು ಹಣ್ಣಿನ ವ್ಯಾಪಾರಸ್ಥರು ಮಹಾನಗರಗಳಿಂದ ಹಾರೋಗೇರಿ ಗ್ರಾಮದ ತೋಟಕ್ಕೆ ಬರುತ್ತಿದ್ದಾರೆ. ಇದರಿಂದ ಸಾಗಣೆ ವೆಚ್ಚವು ಕಡಿಮೆಯಾಗಿದ್ದು, ಮನೆಯವರೇ ಕಟಾವಿನ ಕಾರ್ಯದಲ್ಲಿ ತೊಡಗಿಕೊಳ್ಳುತ್ತಾರೆ.

ನರೇಗಾ ಯೋಜನೆ ಒಳಗ ಡ್ರಾಗನ್ ಫ್ರೂಟ್ ಬೆಳಿಯಾಕ ಇರು ಮಾಹಿತಿ ಸಿಕ್ತು. ವಿಚಾರಿಸಿದಾಗ ತಾಲೂಕು ಪಂಚಾಯತಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಅಗತ್ಯ ಮಾರ್ಗದರ್ಶನ ನೀಡಿದ್ರು. ಇದರಿಂದ ಚೊಲೊ ಆಗೇತ್ರಿ. ವರ್ಷ ಆದಾಯ ಲಕ್ಷದಾಗ ಕೈ ಸೇರಾಕತ್ತಿತ್ರಿ.

ಮೈಲಾರೆಪ್ಪ ಚೋಳಮ್ಮನವರ, ರೈತ

ನರೇಗಾ ಯೋಜನೆಯ ಮೂಲಕ ಡ್ರಾಗನ್ ಫ್ರೂಟ್ ಬೆಳೆದು ರೈತ ಮೈಲಾರೆಪ್ಪ ಪ್ರತಿವರ್ಷ ಲಕ್ಷ ಲಕ್ಷ ಆದಾಯ ಗಳಿಸುತ್ತಿರುವುದು ರೈತ ಸ್ವಾವಲಂಬನೆ. ಇದು ನರೇಗಾ ಯೋಜನೆಯ ಸಮರ್ಪಕ ಸದ್ಬಳಕೆ.

ವಿಶ್ವನಾಥ ಹೊಸಮನಿ

ಇಓ, ತಾಪಂ, ಮುಂಡರಗಿ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ ಗದಗ : ಭೋವಿ ಸಮಾಜದ ಹೆಮ್ಮೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಟಿ ಬಿಸನಳ್ಳಿ ಗೆ ಗೌರವ ಡಾಕ್ಟರೇಟ್ ಪದವಿ