14.4 C
New York
Friday, May 9, 2025

Buy now

spot_img

ಗದಗ : ಅರ್ಜಿ ಆಹ್ವಾನ

ಗದಗ  ಜುಲೈ 22 : ರೋಣ ಪುರಸಭೆ ಕಾರ್ಯಲಯ ವತಿಯಿಂದ ಡೇ-ನಲ್ಟ್ ಯೋಜನೆಯ ಬೀದಿ ಬದಿ ವ್ಯಾಪಾರಿಗಳ ಮತ್ತು ಆತ್ಮನಿರ್ಬರ ನಿಧಿ ಯೋಜನೆಯಡಿ ಕರ್ನಾಟಕ ಬೀದಿ ಬದಿ ವ್ಯಾಪಾರ ನಿಯಮದಂತೆ ನಗರದ ಸ್ಥಳೀಯ ಸಂಸ್ಥೆಯ ಮಟ್ಟದಲ್ಲಿ ಬೀದಿ ಬದಿ ವ್ಯಾಪಾರಿಗಳ ಕುಂದುಕೋರತೆ ಪರಿಹಾರ ಸಮಿತಿಗೆ ಅಧ್ಯಕ್ಷರನ್ನು ಮತ್ತು 2  ಸದಸ್ಯರನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಿದೆ.

ಸಮಿತಿಯ ಅಧ್ಯಕ್ಷರಾಗಬಯಸುವವರು ನಿವೃತ್ತ ಸಿವಿಲ್ ನ್ಯಾಯಾಧೀಶರಾಗಿರಬೇಕು ಮತ್ತು 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. ಹಾಗೆಯೇ ಸಮಿತಿಯ ಸದಸ್ಯರಾಗಲು ರಾಜ್ಯ ಸರ್ಕಾರದ ನಿವೃತ್ತವರ್ಗ-1 ಅಧಿಕಾರಿಯಾಗಿರಬೇಕು ಮತ್ತು 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು. ಸ್ಥಳೀಯ ಪ್ರದೇಶದಲ್ಲಿ ಸೇವಾ ದಾಖಲೆ ಹೊಂದಿರಬೇಕು. ಪ್ರಸ್ತಾವಿತ ಸಮಿತಿಯ ಅವಧಿಯು ಬಿಡುಗಡೆಯಾದ ದಿನಾಂಕದಿಂದ 5 ವರ್ಷಗಳವರೆಗೆ ಚಲಾವಣೆಯಲ್ಲಿರುತ್ತದೆ. ಸಮಿತಿಯ ಕಾರ್ಯಾಚರಣೆಯ ಅಧಿಕಾರ ವ್ಯಾಪ್ತಿಯನ್ನು ಕಾಲ ಕಾಲಕ್ಕೆ ಸರ್ಕಾರವು ಸೂಚಿಸುತ್ತದೆ.

ಸಮಿತಿಯ ಅಧ್ಯಕ್ಷರಾಗಿ ನಿವೃತ್ತ ಸಿವಿಲ್ ನ್ಯಾಯಧೀಶರು ಅಥವಾ ಮ್ಯಾಜಿಸ್ಟ್ರೇಟ್ ಆರೆಕಾಲಿಕ ಆಧಾರದ ಮೇಲೆ ನೇಮಕಗೊಂಡರೆ ಒಂದು ಸಭೆಗೆ ರೂ 2500=00 ಹಾಗೂ ಕುಂದು ಕೊರತೆ ಪರಿಹಾರ ಸಮಿತಿಯ ಇತರೆ ಸದಸ್ಯರು ಅರೆಕಾಲಿಕ ನೇಮಕಗೊಂಡರೆ ಒಂದು ಸಭೆಗೆ ರೂ 1000=00 ಗೌರವಧನ ಪಡೆಯುತ್ತಾರೆ. ಅರ್ಜಿ ಆಹ್ವಾನ ಪ್ರಕಟಗೊಂಡ 30 ದಿನಗಳ ಒಳಗಾಗಿ ರೋಣ ಪುರಸಭೆ ಕಾರ್ಯಾಲಯದ ಡೇನಲ್ಡ್ ವಿಭಾಗದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ರೋಣ ಪುರಸಭೆ ಕಾರ್ಯಾಲಯದ ಡೇನಲ್ಡ್ ವಿಭಾಗದಲ್ಲಿ ಸಂಪರ್ಕಿಸಬಹುದಾಗಿದೆ.

ಸುದ್ದಿ – 2

ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಗದಗ ಜುಲೈ 22 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರ ( ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ) ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ 2024-25 ನೇ ಸಾಲಿನಲ್ಲಿ ಆನ್‍ಲೈನ್ ಮೂಲಕ https://shp.karnataka.gov.in ಅರ್ಜಿ ಸಲ್ಲಿಸಲು ಜುಲೈ 23 ರವರಗೆ ದಿನಾಂಕವನ್ನು ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ