14.4 C
New York
Friday, May 9, 2025

Buy now

spot_img

ಗದಗ : ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯ ವಿಳಂಬ ಸಲ್ಲದು: ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ

ಗದಗ ಜು.25 : ಜಿಲ್ಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಕೆಸ್ವಾನ್ ಹಾಲ್ ನಲ್ಲಿ ಗುರುವಾರ ಜನನ ಮತ್ತು ಮರಣ ನೊಂದಣಿ ಪದ್ಧತಿ ಕುರಿತು ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಜನನ ಮತ್ತು ಮರಣ ನೊಂದಣಿ ಪ್ರಕ್ರಿಯಲ್ಲಿ ಸರಿಯಾಗಿ ಮಾಹಿತಿದಾರರ ಹೆಸರು ಮತ್ತು ಸಹಿಯನ್ನು ಸಂಗ್ರಹಿಸಿತಕ್ಕದ್ದು ಮತ್ತು ಅರ್ಜಿದಾರರ ಶುಲ್ಕವನ್ನು ನಿಯಮಿತವಾಗಿ ಸರಕಾರಕ್ಕೆ ವಿಳಂಬ ಮಾಡದೇ ಜಮೆ ಮಾಡಬೇಕು.

ಕಾನೂನು ವರದಿಗಳಲ್ಲಿ ನೋಂದಣಿ ಸಂಖ್ಯೆ ಮತ್ತು ನೋಂದಣಿ ದಿನಾಂಕ ನಮೂದುಗೊಳ್ಳುವಂತೆ ಕ್ರಮವಹಿಸಬೇಕು, ನೋಂದಣಿ ಪ್ರಮಾಣ ಪತ್ರದಲ್ಲಿ ನೋಂದಣಾಧಿಕಾರಿಗಳ ರುಜು ಖಡ್ಢಾಯವಾಗಿರಬೇಕು ಹಾಗೂ ತಾಲೂಕ ಮಟ್ಟದ ಜನನ ಮತ್ತು ಮರಣ ಸಮನ್ವಯ ಸಮಿತಿ ಸಭೆಗಳು ಕಡ್ಢಾಯವಾಗಿ ಜರುಗಿಬೇಕು ಎಂದು ಸೂಚಿಸಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ ಮಾತನಾಡಿ, ನೊಂದಣಿ ಪ್ರಮಾಣ ಪತ್ರದಲ್ಲಿ ಡ್ಯೂಟಿ ಡಾಕ್ಟರ್ ರುಜುಗಳು ಆಗದಂತೆ ಎಚ್ಚರವಹಿಸಬೇಕು. ಪ್ರಾಧಿಕಾರದ ಅನುಮತಿಯಿಲ್ಲದೆ ನೋಂದಣಿ ಪ್ರಕ್ರಿಯೆಲ್ಲಿ ವಿಳಂಬವಾಗಬಾರದು. ಸರ್ಕಾರಕ್ಕೆ ಹಣ ಜಮೆ ಮಾಡಿದ ಚಲನ್ ಪ್ರತಿಗಳನ್ನು ಈ ಜನ್ಮ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕು ಮತ್ತು 2019 ರಿಂದ 2022ನೇ ಸಾಲಿನ ಕಾನೂನು ಭಾಗಗಳು ಸಂರಕ್ಷಣಾಧಿಕಾರಿಗಳಿಗೆ ಹಸ್ತಾಂತರಿಸಬೇಕು ಎಂದು ಮಾಹಿತಿ‌ ನೀಡಿದರು.

ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ವಿಭಾಗದ ಮಾಹಿತಿಯನ್ನು ಸಭೆಗೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ‌ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಎಸ್. ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ವಾರ್ತಾಧಿಕಾರಿ ವಸಂತ ಮಡ್ಲೂರ, ಎಲ್ಲಾ ತಾಲೂಕಿನ ತಹಶಿಲ್ದಾರು, ಪುರಸಭೆಯ ಮುಖ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ