29 C
New York
Friday, July 18, 2025

Buy now

spot_img

ಗದಗ : ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯ ವಿಳಂಬ ಸಲ್ಲದು: ಜಿಲ್ಲಾಧಿಕಾರಿ ಗೋವಿಂದ್ ರೆಡ್ಡಿ

ಗದಗ ಜು.25 : ಜಿಲ್ಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ವಿಳಂಬವಾಗಬಾರದು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಕೆಸ್ವಾನ್ ಹಾಲ್ ನಲ್ಲಿ ಗುರುವಾರ ಜನನ ಮತ್ತು ಮರಣ ನೊಂದಣಿ ಪದ್ಧತಿ ಕುರಿತು ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಜನನ ಮತ್ತು ಮರಣ ನೊಂದಣಿ ಪ್ರಕ್ರಿಯಲ್ಲಿ ಸರಿಯಾಗಿ ಮಾಹಿತಿದಾರರ ಹೆಸರು ಮತ್ತು ಸಹಿಯನ್ನು ಸಂಗ್ರಹಿಸಿತಕ್ಕದ್ದು ಮತ್ತು ಅರ್ಜಿದಾರರ ಶುಲ್ಕವನ್ನು ನಿಯಮಿತವಾಗಿ ಸರಕಾರಕ್ಕೆ ವಿಳಂಬ ಮಾಡದೇ ಜಮೆ ಮಾಡಬೇಕು.

ಕಾನೂನು ವರದಿಗಳಲ್ಲಿ ನೋಂದಣಿ ಸಂಖ್ಯೆ ಮತ್ತು ನೋಂದಣಿ ದಿನಾಂಕ ನಮೂದುಗೊಳ್ಳುವಂತೆ ಕ್ರಮವಹಿಸಬೇಕು, ನೋಂದಣಿ ಪ್ರಮಾಣ ಪತ್ರದಲ್ಲಿ ನೋಂದಣಾಧಿಕಾರಿಗಳ ರುಜು ಖಡ್ಢಾಯವಾಗಿರಬೇಕು ಹಾಗೂ ತಾಲೂಕ ಮಟ್ಟದ ಜನನ ಮತ್ತು ಮರಣ ಸಮನ್ವಯ ಸಮಿತಿ ಸಭೆಗಳು ಕಡ್ಢಾಯವಾಗಿ ಜರುಗಿಬೇಕು ಎಂದು ಸೂಚಿಸಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ ಮಾತನಾಡಿ, ನೊಂದಣಿ ಪ್ರಮಾಣ ಪತ್ರದಲ್ಲಿ ಡ್ಯೂಟಿ ಡಾಕ್ಟರ್ ರುಜುಗಳು ಆಗದಂತೆ ಎಚ್ಚರವಹಿಸಬೇಕು. ಪ್ರಾಧಿಕಾರದ ಅನುಮತಿಯಿಲ್ಲದೆ ನೋಂದಣಿ ಪ್ರಕ್ರಿಯೆಲ್ಲಿ ವಿಳಂಬವಾಗಬಾರದು. ಸರ್ಕಾರಕ್ಕೆ ಹಣ ಜಮೆ ಮಾಡಿದ ಚಲನ್ ಪ್ರತಿಗಳನ್ನು ಈ ಜನ್ಮ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕು ಮತ್ತು 2019 ರಿಂದ 2022ನೇ ಸಾಲಿನ ಕಾನೂನು ಭಾಗಗಳು ಸಂರಕ್ಷಣಾಧಿಕಾರಿಗಳಿಗೆ ಹಸ್ತಾಂತರಿಸಬೇಕು ಎಂದು ಮಾಹಿತಿ‌ ನೀಡಿದರು.

ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ವಿಭಾಗದ ಮಾಹಿತಿಯನ್ನು ಸಭೆಗೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ‌ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಎಸ್. ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ವಾರ್ತಾಧಿಕಾರಿ ವಸಂತ ಮಡ್ಲೂರ, ಎಲ್ಲಾ ತಾಲೂಕಿನ ತಹಶಿಲ್ದಾರು, ಪುರಸಭೆಯ ಮುಖ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಕೈಗಾರಿಕೋದ್ಯಮಿಗಳಿಗೆ ಬ್ಯಾಂಕ್‌ನವರು ಸೂಕ್ತ ಮಾರ್ಗದರ್ಶನ ನೀಡಲಿ : ಸಂಸದ ಬಸವರಾಜ ಬೊಮ್ಮಯಿ ಗದಗ : ಪಿ.ಎಚ್.ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಫೆಲೋಶಿಫ್‌ಗಾಗಿ ಅರ್ಜಿ ಆಹ್ವಾನ ಗದಗ : ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಗದಗ : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ ಗದಗ : ಅವಳಿ ನಗರ ನೀರು ಪೂರೈಕೆಗೆ ಗಂಭೀರ ಕ್ರಮ ಆಗಲಿ : ಸಂಸದ ಬಸವರಾಜ ಬೊಮ್ಮಾಯಿ ಗದಗ : ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ ವಿತರಣೆ  ಗದಗ : ಕಾರ್ಮಿಕ ಸಚಿವ ಸಂತೋಷ ಎಸ್ ಲಾಡ್ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ ಗದಗ : ಅಕ್ರಮ ಗಾಂಜಾ ಮಾರಾಟ 6 ಜನರ ಬಂಧನ ಅಂದಾಜು ₹6,70,000 ಮೌಲ್ಯದ ಗಾಂಜಾ ವಶಕ್ಕೆ..! ಗದಗ : SP ಬಿ.ಎಸ್ ನೇಮಗೌಡ ವರ್ಗಾವಣೆ : ನೂತನ ಗದಗ SP ರೋಹನ್ ಜಗದೀಶ ನೇಮಕ ಗದಗ : ಎತ್ತಿನ ಬಂಡಿಗೆ ಕಾರು ಡಿಕ್ಕಿ; ಎರಡು ಎತ್ತು ಮತ್ತು 4 ರೈತರಿಗೆ ಗಾಯ ..!