ಗದಗ : ಆಗಷ್ಟ 1 ; ಜಿಲ್ಲೆಯ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ನಡೆದಿದೆ .
ರಾಬರಿ ಕೇಸ್ ಗೆ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಪೊಲೀಸರು ಕರೆದುಕೊಂಡು ಹೋದಾಗ ಸಂಜಯ್ ಪೊಲೀಸರ ಮೇಲೆ ಕಲ್ಲೆಸೆದು ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ರೌಡಿ ಶೀಟರ್ ಸಂಜಯ್ ಕೊಪ್ಪದ ಮೇಲೆ ಪಿಎಸ್ ಐ ಸಂಗಮೇಶ್ ಶಿವಯೋಗಿ ಫೈರಿಂಗ್ ನಡೆಸಿದ್ದಾರೆ.
ಈ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಪ್ರಕಾಶ್ ಗಾಣಿಗೇರ್ ಗೆ ಕೈ, ಕಾಲಿಗೆ ಗಾಯವಾಗಿದೆ.
ಸಂಜಯ್ ವಿರುದ್ಧ ರಾಬರಿ, ಕೊಲೆಯತ್ನಕ್ಕೆ ಸಂಬಂಧಿಸಿದಂತೆ ಹಲವಾರು ಕೇಸ್ ದಾಖಲಾಗಿದೆ. ಗಾಯಗೊಂಡ ಆರೋಪಿ ಸಂಜಯ್ ಕೊಪ್ಪದ್, ಪಿಸಿ ಪ್ರಕಾಶ್ ಗೆ ಜಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.