27.4 C
New York
Saturday, May 17, 2025

Buy now

spot_img

ಗದಗ : ಶ್ರವಣಕುಮಾರ ನಾಯಕ ,ಮರೆಪ್ಪ ನಾಯಕರವರಿಗೆ ಸೂಕ್ತ ರಕ್ಷಣೆ ಒದಗಿಸಲು ಮನವಿ 

ಗದಗ ಆಗಷ್ಟ ೨ : ಎಸ್.ಸಿ. / ಎಸ್.ಟಿ . ನಕಲಿ ಜಾತಿ ಪ್ರಮಾಣ ಪತ್ರ ತಡೆ ಸಮಿತಿಯ ರಾಜ್ಯಾಧ್ಯಕ್ಷರಾಗಿರುವ ಶ್ರೀ ಶ್ರವಣಕುಮಾರ ನಾಯಕ ಹಾಗೂ ಉತ್ತರ ಕರ್ನಾಟಕ ಪ್ರದೇಶ ಶ್ರೀ ಮಹರ್ಷಿ ವಾಲ್ಮೀಕಿ ಸಂಘದ ರಾಜ್ಯಾಧ್ಯಕ್ಷರಾದ ಮರೆಪ್ಪ ನಾಯಕ ಮಗ್ಗಂಪುರ ಅವರಿಗೆ ಸೂಕ್ತ ರಕ್ಷಣೆ ಒದಗಿಸಬೇಕೆಂದು ಗದಗ ಜಿಲ್ಲಾ ಯುವ ಘಟಕ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ( ೨ ) , ಬೆಂಗಳೂರು ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಮುಖಾಂತರ ಸನ್ಮಾನ್ಯ ಶ್ರೀ ಜಿ . ಪರಮೇಶ್ವರ ಮಾನ್ಯ ಗೃಹಮಂತ್ರಿ ಗಳಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಾಲ್ಮೀಕಿ ನಾಯಕ ಮಹಾಸಭಾದ ಗದಗ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಅನಿಲಕುಮಾರ ಪ . ಸಿದ್ದಮ್ಮನಹಳ್ಳಿ ಶ್ರೀ ಶ್ರವಣಕುಮಾರ ನಾಯಕ ಅವರ ಎಸ್.ಸಿ. / ಎಸ್.ಟಿ . ನಕಲಿ ಜಾತಿ ಪ್ರಮಾಣ ಪತ್ರ ತಡೆ ಸಮಿತಿಯ ರಾಜ್ಯಾಧ್ಯಕ್ಷರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಪ್ರಮಾಣ ಪತ್ರದ ವಿರುದ್ಧ ಧ್ವನಿ ಎತ್ತಿರುವ ಶ್ರವಣಕುಮಾರ ನಾಯಕ ಅವರು ಹಾಗೂ ಯಾದಗಿರಿ ಜಿಲ್ಲೆ ಉತ್ತರ ಕರ್ನಾಟಕ ಮಹರ್ಷಿ ವಾಲ್ಮೀಕಿ ಸಂಘದ ರಾಜ್ಯಾಧ್ಯಕ್ಷರಾಗಿರುವ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ ಶ್ರೀ ಮರೆಪ್ಪ ನಾಯಕ ಮಗ್ಗಂಪುರ ಅವರು ಯಾದಗಿರಿ ಜಿಲ್ಲೆಯ ಕಲಬುರ್ಗಿ , ಬೀದರ ಜಿಲ್ಲೆಯಲ್ಲಿ ತಳವಾರ , ಪರಿವಾರದ , ಗೊಂಡ , ರಾಜಗೊಂಡ ಹೆಸರಿನಲ್ಲಿ ವ್ಯಾಪಕವಾಗಿ ರಾಜ್ಯದಲ್ಲಿ ನಡೆಯುತ್ತಿರುವ ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣ ಪತ್ರದ ವಿರುದ್ಧ ಹೋರಾಟದ ಮೂಲಕ ತಡೆದು ಸಾವಿರಾರು ನಕಲಿ ಜಾತಿ ಪ್ರಮಾಣ ಪತ್ರ ತಡೆದಿರುತ್ತಾರೆ . ಅವರ ಹೋರಾಟಗಾರರ ಆತ್ಮಸ್ಥೆರ್ಯ ಕುಗ್ಗಿಸಲು ಕೆಲವು ಸಂಘಟನೆಗಳು ಅವರನ್ನು ಗಡಿಪಾರು ಮಾಡಲು ಆಗ್ರಹಿಸಿವೆ .

ಹೋರಾಟಗಾರರ ಹೋರಾಟವನ್ನು ಹತ್ತಿಕ್ಕುವಂಥ ಕೆಲಸ ಯಾವದೇ ಬೇರೆ ಸಮಾಜ ಕುಗ್ಗಿಸುವ ಕೆಲಸವನ್ನು ವಾಲ್ಮೀಕಿ ಸಮಾಜವು ತೀವ್ರವಾಗಿ ಖಂಡಿಸುತ್ತದೆ . ಮುಂದಿನ ದಿನದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು . ಕಾರಣ ಎಸ್.ಸಿ. / ಎಸ್.ಟಿ . ನಕಲಿ ಜಾತಿ ಪ್ರಮಾಣ ಪತ್ರ ತಡೆ ಸಮಿತಿಯ ರಾಜ್ಯಾಧ್ಯಕ್ಷರಾಗಿರುವ ಶ್ರೀ ಶ್ರವಣಕುಮಾರ ನಾಯಕ ಹಾಗೂ ಉತ್ತರ ಕರ್ನಾಟಕ ಪ್ರದೇಶ ಶ್ರೀ ಮಹರ್ಷಿ ವಾಲ್ಮೀಕಿ ಸಂಘದ ರಾಜ್ಯಾಧ್ಯಕ್ಷರಾದ ಮರೆಪ್ಪ ನಾಯಕ ಮಗ್ಗಂಪುರ ಅವರಿಗೆ ಗೃಹ ಇಲಾಖೆಯಿಂದ ಸೂಕ್ತ ರಕ್ಷಣೆ ಒದಗಿಸಲು ಈ ಮೂಲಕ ವಿನಂತಿಸಿಕೊಳ್ಳುತ್ತೇನೆ ಎಂದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ( ೨ ) , ಬೆಂಗಳೂರು ಗದಗ ಜಿಲ್ಲಾ ಯುವ ಘಟಕ ಜಿಲ್ಲಾ ಘಟಕದ ಎಲ್ಲ ಪದಾಧಿಕಾರಿಗಳು ಹಾಗೂ ಮುಖಂಡರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಅಮೃತ-ಸುರಭಿ ಯೋಜನೆ” ಹೈನೋದ್ಯಮದ ಅಭಿವೃದ್ಧಿಗೆ ಹೊಸ ಆಶಾಕಿರಣ ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಗದಗ : ಆನ್‌ಲೈನ್ ಮೂಲಕ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ ಗದಗ : ಗಂಜೇಂದ್ರಗಡದಲ್ಲಿ  ಬೀದಿನಾಯಿಗಳ ದಾಳಿಗೆ  ಮಹಿಳೆ ಸಾವು.! ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ