31.2 C
New York
Monday, June 30, 2025

Buy now

spot_img

ಗದಗ : ಯುವನಿಧಿ ಫಲಾನುಭವಿಗಳಿಗೆ ಪ್ರತಿ ಮಾಹೆ ಸ್ವಯಂ ಘೋಷಣೆ ಕಡ್ಡಾಯ : ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಗದಗ  ಅಗಷ್ಟ5 : 2022-23 ನೇ ಸಾಲಿನಲ್ಲಿ ಪದವಿ ಮತ್ತು ಡಿಪ್ಲೊಮ್ ದಲ್ಲಿ ಉರ್ತ್ತೀಣರಾದ ಅರ್ಹ ಫಲಾನುಭವಿಗಳಿಗೆ ಯುವನಿಧಿ ತಲುಪಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್ ನಲ್ಲಿ ಸೋಮವಾರ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯುವನಿಧಿ ಯೋಜನೆಯಡಿ ಸಲ್ಲಿಕೆಯಾದ ಅರ್ಜಿಗಳನ್ನು ಪರೀಶೀಲಿಸಿ ಅನುಮೋದನೆ ನೀಡಿ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿದರು.

ಸಭೆಯಲ್ಲಿ ಯುವನಿಧಿ ಅರ್ಜಿದಾರರ ವರದಿ ಗಮನಿಸಿದ ಅವರು ಅರ್ಜಿ ಸಲ್ಲಿಕೆಯಾದ ನಂತರ ಮೂಲಭೂತ ದಾಖಲಾತಿಯನ್ನು ಸಂಬಂಧಿಸಿದ ಅಧಿಕಾರಿಗಳ ಹಂತದಲ್ಲಿ ಪರೀಶಿಲನೆ ಮಾಡುವುದರ ಬಗ್ಗೆ ಅರ್ಜಿದಾರರಿಗೆ ಜಾಗೃತಿ ಮೂಡಿಸಿ ಆದಷ್ಟು ಬೇಗನೆ ವಿವಿಧ ಅಧಿಕಾರಿಗಳ ಲಾಗಿನ್ ನಲ್ಲಿರುವ ಅರ್ಜಿಗಳನ್ನು ಅನುಮೋದನೆ ಮಾಡಬೇಕು ಎಂದು ತಿಳಿಸಿದರು.

ಈಗಾಗಲೇ ಯುವನಿಧಿ ಪಡೆಯುತ್ತಿರುವರು ಪ್ರತಿ ತಿಂಗಳು 25 ನೇ ತಾರಿಕಿನೊಳಗಾಗಿ ತಾನೂ ನಿರುದ್ಯೋಗಿ, ಹಾಗು ವ್ಯಾಸಂಗ ಮುದುವರೆಸುತ್ತಿಲ್ಲ ಮತ್ತು ಸ್ವಯಂ ಉದ್ಯೋಗಿ ಅಲ್ಲ ಎಂದು ಸ್ವಯಂ ಘೊಷಿಣೆ ಮಾಡುವ ಕುರಿತು ಅರ್ಜಿದಾರರಿಗೆ ತಿಳಿಸಬೇಕು ಎಂದು ಹೇಳಿದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮಲ್ಲರೂ ಬಸವರಾಜ ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ ಉತ್ತಮ ಗುಣಮಟ್ಟ ಹೊಂದಿರುವ ತರಬೇತಿ ಸಂಸ್ಥೆಯ ವರದಿ ನೀಡಿದರು, ಕೈಗಾರಿಕಾ ಕ್ಷೇತ್ರಗಳಿಗೆ ಉದ್ಯೋಗ ಬೇಡಿಕೆಯ ಅನುಸಾರ ಐ.ಟಿ ವಲಯ, ಆಟೋಮೋಟಿವ್, ಏರೋಸ್ಪೇಸ್ ಮುಂತಾದ ವಲಯಗಳಲ್ಲಿ ಅವಶ್ಯವಿರುವ ಹೊಸ ಜಾಬ್‌ ಲೋಲ್ ಗಳ ಕುರಿತು ಮಾಹಿತಿ ನೀಡಿದರು, ಯುವನಿಧಿ ಯೋಜನೆಯಡಿ ನೊಂದಾಯಿಸಿಕೊಂಡಿರುವ ಯುವಕ ಯುವತಿಯರಿಗೆ ಕೌಶಲ್ಯ ತರಬೇತಿ ಮತ್ತು ಸಂಕಲ್ಪ ಕಾರ್ಯಕ್ರಮ ಅಡಿಯಲ್ಲಿ ವಾರ್ಷಿಕ ಕ್ರಿಯಾ ಯೋಜನೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿರುವ ಕೌಶಲ್ಯ ತರಬೇತಿಗಳನ್ನು ಪ್ರಾರಂಭಿಸಿರುವ ಕುರಿತು ಸಭೆಗೆ ವರದಿ ಸಲ್ಲಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಬಸವರಾಜ ಕೊಟೂರ, ಜಿಲ್ಲಾ ಉದ್ಯೋಗಾಧಿಕಾರಿ ಬಸವಂತ ಪಿ ಎನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ರವಿ ಗುಂಜಿಕರ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕಿ ಉಮಾ ಪಾಳೆಗಾರ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ಅಮಿತ್ ಬಿದರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news