Monday, September 16, 2024
Google search engine
Homeಆರೋಗ್ಯಗದಗ : ಅಂಗನವಾಡಿ ಕಾರ್ಯಕರ್ತೆ , ಸಹಾಯಕಿಯರಿಗೆ ಮೊಬೈಲ್ ಮತ್ತು ಸಮವಸ್ತ್ರ ವಿತರಣೆ

ಗದಗ : ಅಂಗನವಾಡಿ ಕಾರ್ಯಕರ್ತೆ , ಸಹಾಯಕಿಯರಿಗೆ ಮೊಬೈಲ್ ಮತ್ತು ಸಮವಸ್ತ್ರ ವಿತರಣೆ

ಸರ್ಕಾರದ ಪ್ರಮುಖ ಜನಪರ ಯೋಜನೆಗಳ ಅನುಷ್ಠಾನದಲ್ಲಿ ಕಾರ್ಯಕರ್ತೆಯರ ಪಾತ್ರ ಅಪಾರ

ಗದಗ  ಅಗಸ್ಟ 7: ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳ ಅನುಷ್ಟಾನ ಹಾಗೂ ಯಶಸ್ವಿಗೊಳಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅಪಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಹೇಳಿದರು.

ನಗರದ ಕೆ.ಎಚ್.ಪಾಟೀಲ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾದ ಗದಗ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರಿಗೆ ಮೊಬೈಲ್ ಮತ್ತು ಸಮವಸ್ತç ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಟಾನಗೊಳಿಸುವಲ್ಲಿ ಹಾಗೂ ಮಾಹಿತಿ ಸಂಗ್ರಹಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅಪಾರ ಶ್ರಮ ವಹಿಸುತ್ತಾರೆ. ಅವರ ಸಂಪೂರ್ಣ ಸಹಭಾಗಿತ್ವದೊಂದಿಗೆ ಯೋಜನೆಯ ಅನುಷ್ಟಾನಗೊಂಡು ಯಶಸ್ವಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಸಹಾಯಕರು ಹಾಗೂ ಕಾರ್ಯಕರ್ತರಿಗೆ ಸರ್ಕಾರದಿಂದ ಉಚಿತವಾಗಿ ಮೊಬೈಲ್ ಹಾಗೂ ಸಮವಸ್ತç ವಿತರಣೆ ಮಾಡಲಾಗುತ್ತಿದೆ ಎಂದರು.

ಇಂದು ವಿತರಿಸಲಾದ ಮೊಬೈಲ್‌ಗಳನ್ನು ಸುಸ್ಥಿತಿಯಲಿಟ್ಟುಕೊಂಡು ಸರ್ಕಾರದ ಯೋಜನೆಗಳ ಸಾಕಾರಕ್ಕೆ ಅಂಗನವಾಡಿ ಕಾರ್ಯಕತೆಯರು ಶ್ರಮಿಸಬೇಕು. ಶಿಕ್ಷಣ, ಆರೋಗ್ಯ ಸಮೀಕ್ಷೆ ಹಾಗೂ ಸುಧಾರಣೆಯಲ್ಲಿ ನಿಮ್ಮ ಶ್ರಮ ಮರೆಯಲಾಗದು. ನಿಮ್ಮಿಂದಾಗಿ ಸರ್ಕಾರದ ಕೆಲಸ ಕಾರ್ಯಗಳು ಇನ್ನಷ್ಟು ಚುರುಕುಗೊಳ್ಳುವ ಮೂಲಕ ನಿಗದಿತ ಅವಧಿಯೊಳಗೆ ಅರ್ಹರಿಗೆ ತಲುಪುವಂತಾಗಲಿ ಎಂದು ಹೇಳಿದರು.

ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಯಲ್ಲಿ ಅಂಗನವಾಡಿ ಕಾರ್ಯಕರ್ತರು ಶ್ರಮ ವಹಿಸಿ ಕಾರ್ಯ ನಿರ್ವಹಿಸಬೇಕು. ಸರ್ಕಾರದಿಂದ ನೀಡಿದ ಮೊಬೈಲ್ ನ್ನು ಸರಿಯಾಗಿ ಸದ್ಭಳಕೆ ಮಾಡಿಕೊಳ್ಳುವ ಮೂಲಕ ಸರ್ಕಾರಕ್ಕೂ ಉತ್ತಮ ಹೆಸರು ತರಬೇಕೆಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರಿಗೆ ಸಾಂಕೇತಿಕವಾಗಿ ಮೊಬೈಲ್ ಹಾಗೂ ಸಮವಸ್ತçವನ್ನು ಸಚಿವರು ವಿತರಿಸಿದರು.

ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಬಿ.ಬಿ.ಅಸೂಟಿ, ಗದಗ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ