ಜಿಲ್ಲಾಡಳಿತದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಗದಗ ಅಗಷ್ಟ15 : ದೇಶದ ಪ್ರತಿಯೊಬ್ಬರು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ, ನಿಕಟವಾಗಿ ನಿರ್ವಹಿಸುವುದೇ ದೇಶಕ್ಕೆ ನೀಡುವ ಕೊಡುಗೆಯಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಸ್ವಾತಂತ್ರ್ಯಕ್ಕಾಗಿ ಪ್ರಮುಖರಾದ ಮಹಾತ್ಮ ಗಾಂಧೀಜಿ, ಪಂಡಿತ ಜವಹರಲಾಲ್ ನೆಹರು, ಭಗತ್ ಸಿಂಗ್,ಸರ್ದಾರ್ ವಲ್ಲಭಾಯಿ ಪಟೇಲ್ ಸಾಕಷ್ಟು ಜನ ತಮ್ಮ ಜೀವನವನ್ನು ಮುಡಿಪಾಗಿಟ್ಟು ಹೋರಾಟದಲ್ಲಿ ಪಾಲ್ಗೊಂಡು ಸತ್ಯ, ಅಹಿಂಸೆಯನ್ನು ಅನುಸರಿಸಿ ಸ್ವಾತಂತ್ರ್ಯವನ್ನು ಪಡೆದುಕೊಂಡರು.
ವಿವಿಧ ರಾಜ ಸಂಸ್ಥಾನವಾಗಿ ಹರಿದು ಹಂಚಿದ ಭಾರತವನ್ನು ಒಂದಾಗಿಸುವುದು ದೊಡ್ಡ ಸವಾಲು ಅಗಿತ್ತು,ಅದನ್ನು ಎದುರಿಸಿ ಒಂದಾಗಿಸಿ ಸ್ವಾತಂತ್ರ್ಯ ಪಡೆದ ನಂತರ ಇಂದಿಗೂ ಸಹ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಯಾಗಿ ನೆಲೆ ಉಳಿಸಿಕೊಂಡಿರುವುದು ಭಾರತ ದೇಶದ ಸಾಧನೆಯೇ ಸರಿ ಎಂದು ಪ್ರಶಂಸೆ ವ್ಯಕ್ತ ಪಡಿಸಿದರು.
ಭಾರತ ದೇಶದ ಸಂವಿಧಾನವು ಈಡೀ ಜಗತ್ತಿಗೆ ಮಾದರಿಯಾದ ಸಂವಿಧಾನವಾಗಿದೆ,ಭಾರತವು ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಒಂದಾಗಿದ್ದು,ಪ್ರಸ್ತುತವಾಗಿ ನಮ್ಮ ಬೇಡಿಕೆಗಳು ಅಧಿಕಾವಾಗಿದ್ದು ಸಂಪನ್ಮೂಲಗಳು ಸೀಮಿತವಾಗಿವೆ, ದೇಶದಲ್ಲಿರುವ ಸಮಸ್ಯೆಗಳನ್ನು ನಾವೆಲ್ಲರೂ ಸೇರಿ ಶ್ರಮಪಟ್ಟು ಎದುರಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಸಿ.ಇ.ಒ ಅಧಿಕಾರಿ ಭರತ್ ಎಸ್,ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಮುದುಕಮ್ಮನವರ,ಜಿಲ್ಲಾಪಂಚಾಯತ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಧಿಕಾರಿ ಗಂಗಪ್ಪ ಎಂ.ವಿವಿಧ ಇಲಾಖೆಯ ಅಧಿಕಾರಿ ವರ್ಗದವರು ಮತ್ತು ಸಿಬ್ಬಂದಿ ಹಾಜರಿದ್ದರು.