14.7 C
New York
Friday, May 9, 2025

Buy now

spot_img

ಗದಗ : ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗದಗ ಜಿಲ್ಲೆಯ ಪಾತ್ರ ಅವಿಸ್ಮರಣೀಯ : ಸಚಿವ ಎಚ್.ಕೆ.ಪಾಟೀಲ

ಸಚಿವ ಎಚ್.ಕೆ.ಪಾಟೀಲ ಅವರಿಂದ ಸಾರ್ವಜನಿಕ ಧ್ವಜಾರೋಹಣ

ಗದಗ  ಅಗಸ್ಟ 15 : ನಮ್ಮ ಸ್ವಾತಂತ್ರ್ಯ  ಸೇನಾನಿಗಳ ತ್ಯಾಗ, ಬಲಿದಾನ, ಶ್ರಮ ಸಮರ್ಪಣಾ ಭಾವದ ಫಲವಾಗಿ ಸ್ವಾತಂತ್ರ್ಯ ದೊರಕಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತದಿಂದ ಜರುಗಿದ 78 ನೇ ಸ್ವಾತಂತ್ರೋತ್ಸವ ದಿನಾಚರಣೆಯಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಶತಮಾನಗಳ ದಾಸ್ಯತ್ವವನ್ನು ಕಳಚಿ ಸ್ವತಂತ್ರ ಭಾರತ, ತನ್ನ 77 ವರ್ಷಗಳನ್ನು ಪೂರ್ಣಗೊಳಿಸಿ, ಇಂದು 78ರಲ್ಲಿ ಪಾದಾರ್ಪಣೆ ಮಾಡುತ್ತಿದೆ ಎಂದರು.

ರಾಷ್ಟಪಿತ ಮಹಾತ್ಮ ಗಾಂಧೀಜಿಯವರು ತೋರಿದ, ವಿನೂತನವಾದ ಸತ್ಯ, ಅಹಿಂಸೆ ಎಂಬ ಅಸ್ತçಗಳನ್ನು ಹಿಡಿದು ಸತ್ಯಾಗ್ರಹ ಮಾರ್ಗ ತುಳಿದು ಬ್ರಿಟೀಷ್ ಆಡಳಿತದ ಗುಂಡಿಗೆ ಎದೆ ಒಡ್ಡಿ, ಲಾಠಿ ಏಟು ತಿಂದು ಜೈಲಿನಲ್ಲಿ ನೊಂದು ಬ್ರಿಟಿಷರು ನೀಡಿದ ನೋವಿನಲ್ಲಿ ಬೆಂದು, ಅವರ್ಣನೀಯ ಕಷ್ಟಗಳನ್ನು ಅನುಭವಿಸಿ, ದೇಶವನ್ನು ಗುಲಾಮಗಿರಿಯ ಸಂಕೋಲೆಯಿAದ ಮುಕ್ತಗೊಳಿಸಿದರು. ಸತ್ಯಾಗ್ರಹವು ಸ್ವಾತಂತ್ರö್ಯ ಸಂಗ್ರಾಮ ಮತ್ತು ತದನಂತರ ಸ್ವಾತಂತ್ರೋತ್ತರ ಭಾರತದಲ್ಲಿ ಪ್ರಭಲ ಅಸ್ತçವಾಗಿ ಪರಿಣಮಿಸಿ ಅನೇಕ ಆಂದೋಲನ ಮತ್ತು ಚಳವಳಿಗಳಿಗೆ ಯಶ ತಂದುಕೊಡುವಲ್ಲಿ ಪರಿಣಾಮಕಾರಿಯಾದ ಪಾತ್ರ ನಿಭಾಯಿಸಿತ್ತು ಎಂದು ಹೇಳಿದರು.

ಸ್ವಾತಂತ್ರö್ಯ ಸಂಗ್ರಾಮದಲ್ಲಿ ಗದಗ ಜಿಲ್ಲೆಯ ಪಾತ್ರ ಅವಿಸ್ಮರಣೀಯವಾದುದು. ಅಂದು ಲೋಕಮಾನ್ಯ ಬಾಲಗಂಗಾಧರ ತಿಲಕ, ಪಂಡಿತ ಜವಾಹರಲಾಲ ನೆಹರು, ರಾಷ್ಟçಪಿತ ಮಹಾತ್ಮ ಗಾಂಧೀಯವರನ್ನು ಬರಮಾಡಿಕೊಂಡ ಗದಗ, ರಚನಾತ್ಮಕ ಕೆಲಸಗಳ ಮೂಲಕ ಸ್ವಾತಂತ್ರö್ಯ ಹೋರಾಟಕ್ಕೆ ಬಲ ತುಂಬಿತ್ತು. ಚರಕ ಮನೆಮನೆಯ ಮಾತಾಗಿದ್ದಿತು. ಸ್ವದೇಶಿ ಆಂದೋಲನವನ್ನು ಉಸಿರಾಗಿಸಿಕೊಂಡ ನಮ್ಮ ಹಿರಿಯರು ಹತ್ತಾರು ಶೈಕ್ಷಣಿಕ ಸಂಸ್ಥೆಗಳನ್ನು ಕಟ್ಟಿದರು. ದೇಶಿ ಕ್ರೀಡೆಗೆ ಪ್ರೋತ್ಸಾಹ ನೀಡಿದರು. ಚಾರಿತ್ರö್ಯವಂತರಾಗಿ ದೇಶಕ್ಕಾಗಿ ಸಮರ್ಪಿತರಾದರು. ನರಗುಂದದ ಬಾಬಾ ಸಾಹೇಬ, ಮುಂಡರಗಿಯ ಭೀಮರಾವ, ಡಂಬಳದ ಕೆಂಚನಗೌಡ್ರು, ಅನಂತರಾವ ಜಾಲಿಹಾಳ, ಡಾ. ವಾಸುದೇವರಾವ ಉಮಚಗಿ, ಬೆಟಗೇರಿಯ ತ್ರಿಮಲ್ಲೆ, ಮಳೇಕರ, ಜಯರಾಮಾಚಾರ್ಯ ಮಳಗಿ, ಡಂಬಳದ ಶ್ರೀನಿವಾಸರಾವ್ ಕಳ್ಳಿ, ತಿಪ್ಪಣ್ಣ ಶಾಸ್ತಿçÃ, ಅಂದಾನಪ್ಪ ದೊಡ್ಡಮೇಟಿ, ಕೌತಾಳ ವೀರಪ್ಪ, ಕೆ.ಎಚ್. ಪಾಟೀಲರು ಸೇರಿ ಅಸಂಖ್ಯ ಸ್ವಾತಂತ್ರö್ಯ ಸೇನಾನಿಗಳು ದೇಶಕ್ಕಾಗಿ ಸರ್ವತ್ಯಾಗ ಮಾಡಿದ್ದು ನೆನೆದರೆ ಹೃದಯದಲ್ಲಿ ಹೆಮ್ಮೆಯ ಪ್ರವಾಹ ಹರಿಯುವುದು. ದೇಶಭಕ್ತ ಮೈಲಾರ ಮಹಾದೇವಪ್ಪ ಅವರ ನೇತೃತ್ವದಲ್ಲಿ ಕೋಗನೂರು, ಶಿಗ್ಲಿ, ಹೆಬ್ಬಾಳ, ನಾಗರಮಡುವು, ವರವಿ, ಹೊಸೂರ, ಅಂಕಲಿ, ಮೊದಲಾದ ಗ್ರಾಮಗಳ ಸ್ವಾತಂತ್ರö್ಯ ಹೋರಾಟಗಾರರು ಚಳವಳಿಯಲ್ಲಿ ಧುಮುಕಿ ಅಪಾರ ತ್ಯಾಗ ಮಾಡಿದ್ದು ಸ್ಮರಿಸಿದರು.

1942 ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಚಳವಳಿಯಲ್ಲಿ ಗದಗ ಜಿಲ್ಲೆ ಪೂರ್ಣವಾಗಿ ತೊಡಗಿಸಿಕೊಂಡಿದ್ದಿತು. ಡಾ. ಬಿ.ಜಿ. ಹುಲಗಿ, ಶಂಕ್ರಪ್ಪ ಗುಡ್ಡದ, ಇಸ್ಮಾಯಿಲ್ ಸಾಹೇಬ ಕಲ್ಲೂರ ರಾಮಾಚಾರಿ, ವೆಂಕಟೇಶ ಮಾಗಡಿ, ಕೋಗನೂರು ನಿಂಗಪ್ಪ ಮೊದಲಾದವರು ಕಠಿಣ ಶಿಕ್ಷೆ ಅನುಭವಿಸಿದರು. 1931ರಲ್ಲಿ ಜವಹಾರಲಾಲ ನೆಹರು ಅವರು ಗದಗ ಮತ್ತು ಜಕ್ಕಲಿ ಗ್ರಾಮಕ್ಕೆ ಭೇಟಿ ನೀಡಿದಾಗ ಅಂದಿನ ಹೋರಾಟದ ನಾಯಕತ್ವ ವಹಿಸಿದ್ದ ಶ್ರೀ.ಅಂದಾನೆಪ್ಪ ದೊq್ಡÀಮೇಟಿ ಅವರು ನೆಹರೂ ಅವರಿಗೆ ಬೆಳ್ಳಿಯ ತಕ್ಕಡಿಯನ್ನು ಅರ್ಪಿಸಿದ್ದು ವಿಶೇಷ ಘಟನೆಯಾಗಿದೆ. ಸ್ವಾತಂತ್ರö್ಯ ಹೋರಾಟದ ಭವ್ಯ ಇತಿಹಾಸ, ಪರಂಪರೆ ಹೊಂದಿರುವ ಗದಗ ಪರಿಸರದ ಎಲ್ಲಾ ಸ್ವಾತಂತ್ರö್ಯ ಸೇನಾನಿಗಳ ತ್ಯಾಗ ಬಲಿದಾನ ನೆನೆದರು.

1942ರ ಅಗಷ್ಟ್ 8 ರಂದು ಮುಂಬೈಯಲ್ಲಿ ಈ ಕರೆ ನೀಡಿದ ಮಹಾತ್ಮಾಗಾಂಧಿ, ಆಗಸ್ಟ್ 9 ಕ್ಕೆ ಬಂಧನಕ್ಕೊಳಗಾದರು. ಈ ಘಟನೆ, ಇಡೀ ದೇಶದಲ್ಲಿ ಸಂಚಲನವನ್ನುAಟು ಮಾಡಿತಲ್ಲದೆ, ಸ್ವಾತಂತ್ರ‍್ಯ ಹೋರಾಟ ಮತ್ತಷ್ಟು ತೀವ್ರಗೊಂಡಿತು. 1947 ಆಗಸ್ಟ್ 15 ರಂದು ಭಾರತ ಸ್ವತಂತ್ರವಾಯಿತು ಎಂದು ಸಚಿವ ಎಚ್.ಕೆ.ಪಾಟೀಲ ನುಡಿದರು.

ಸಮಾರಂಭದಲ್ಲಿ ವಿಧಾನಪರಿಷತ್ ಸದಸ್ಯ ಎಸ್.ವಿ.ಸಂಕನೂರ, ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡರ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಗಣ್ಯರುಗಳು, ಸಾರ್ವಜನಿಕರು, ಅಪಾರ ಸಂಖ್ಯೆಯಲ್ಲಿ ಶಾಲಾ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ