Monday, September 16, 2024
Google search engine
Homeಉದ್ಯೋಗಗದಗ : ಪ್ರೊಬೇಷನರ್ಸ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳ ಸಭೆ

ಗದಗ : ಪ್ರೊಬೇಷನರ್ಸ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳ ಸಭೆ

ಪಾರದರ್ಶಕ, ವ್ಯವಸ್ಥಿತ ಪರೀಕ್ಷೆಗಾಗಿ ಕ್ರಮ ವಹಿಸಿ

ಗದಗ ಅಗಸ್ಟ 22 : ಜಿಲ್ಲೆಯಲ್ಲಿ ಅಗಸ್ಟ 27 ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೋಬೇಷನರ್ಸ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳು ಜರುಗಲಿದ್ದು ಪರೀಕ್ಷೆಗಳನ್ನು ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೇ ಸುವ್ಯವಸ್ಥಿತವಾಗಿ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಸೂಚಿಸಿದರು.

ಜಿಲ್ಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರೋಬೇಷನರ್ಸ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಅಗಸ್ಟ 27 ರಂದು ಪರೀಕ್ಷೆಗಳು ಜರುಗಲಿದ್ದು ಮೊದಲನೇ ಪತ್ರಿಕೆ ಬೆಳಿಗ್ಗೆ 10 ರಿಂದ ಮ. 12 ರವರೆಗೆ ಹಾಗೂ ಎರಡನೇ ಪತ್ರಿಕೆ ಮಧ್ಯಾಹ್ನ 2 ರಿಂದ 4 ರವರೆಗೆ ಪರೀಕ್ಷೆಗಳು ಜರುಗಲಿವೆ. ಸದರಿ ಪರೀಕ್ಷಾ ಪ್ರಕ್ರಿಯೆ ಸುಗಮವಾಗಿ, ಯಾವುದೇ ಲೋಪದೋಷಗಳಿಲ್ಲದಂತೆ ನ್ಯಾಯಸಮ್ಮತವಾಗಿ ಹಾಗೂ ನಿಷ್ಪಕ್ಷಪಾತವಾಗಿ ಪರೀಕ್ಷೆ ನಡೆಸಬೇಕು ಆಯೋಗವು ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದರು.

ತ್ರಿಸದಸ್ಯ ಸಮಿತಿ, ವೀಕ್ಷಕ ಹಾಗೂ ಮಾರ್ಗಾಧಿಕಾರಿಗಳ ನೇಮಕ: ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯಲು ಜಿಲ್ಲಾಮಟ್ಟದ ತ್ರಿ-ಸದಸ್ಯ ಸಮಿತಿಯನ್ನುವೀಕ್ಷಕರನ್ನು, ಸ್ಥಳೀಯ ನಿರೀಕ್ಷಣಾಧಿಕಾರಿ ಹಾಗೂ ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅಧಿಕಾರಿಗಳು ತಮಗೆ ನಿಗದಿಪಡಿಸಿದ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು. ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆಗಳನ್ನು ಕೊಂಡೊಯ್ಯುವ ಸಮಯದಲ್ಲಿ ಉಸ್ತುವಾರಿ ತಂಡಕ್ಕೆ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.

ಪ್ರತಿಬಂಧಕಾಜ್ಞೆ ಜಾರಿ : ಪರೀಕ್ಷೆಗಳು ಸುಗಮವಾಗಿ ಜರುಗುವ ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಅಂದು ಬೆಳಿಗ್ಗೆ 8 ರಿಂದ ಸಾಯಂಕಾಲ 6 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ , ಬುಕ್‌ಸ್ಟಾಲ್ , ಫೋಟೋ ಕಾಪಿಯರ್‌ಗಳನ್ನು ಬಂದ ಮಾಡಲು ಆದೇಶಿಸಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂದಿಸಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು, ಪರೀಕ್ಷಾ ಕೇಂದ್ರದಲ್ಲಿ ಪ್ರಿಸ್ಕಿಂಗ್ ನಡೆಸುವ ಸಿಬ್ಬಂದಿಯೊAದಿಗೆ ಮತ್ತು ಪರೀಕ್ಷಾ ಕೊಠಡಿಯ ಸಂವೀಕ್ಷಕರೊAದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾದೆ. ಪರೀಕ್ಷೆಗೆ ಹಾಜರಾಗುವ ಎಲ್ಲ ಅಭ್ಯರ್ಥಿಗಳು ಆಯೋಗವು ನಡೆಸುವ ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್ ಯಂತ್ರದಿAದ ತಪಾಸಣೆಗೆ ( ಫ್ರಿಸ್ಕಿಂಗ್ ) ಒಳಗಾಗುವುದು ಕಡ್ಡಾಯವಾಗಿದೆ. ಮೊಬೈಲ್ / ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್ , ಪೆನ್ ಡ್ರೆöÊವ್ , ಬ್ಲೂ ಟೂತ್ ಡಿವೈಸ್ , ಸ್ಮಾರ್ಟ ವಾಚ್ , ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟಾçನಿಕ್ಸ್ ಉಪಕರಣಗಳು ಅಥವಾ ಲಾಗ್ ಟೇಬಲ್ಸ್ , ಕೈ ಚೀಲ , ಪರ್ಸ , ನೋಟುಗಳು , ಚಾರ್ಟ, ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳನ್ನೂ ಸೇರಿದಂತೆ ಇನ್ನಿತರೆ ಯಾವುದೇ ರೀತಿಯ ಉಪಕರಣಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಹೀಯರಿಂಗ್ ಏಡ್ ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳೊಂದಿಗೆ ಪರೀಕ್ಷೆ ಪ್ರಾರಂಭವಾಗುವ ಎರಡು ಗಂಟೆ ಮುಂಚಿತವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಪಡುವುದು ಕಡ್ಡಾಯವಾಗಿರುತ್ತದೆ.

ಡ್ರೆಸ್‌ಕೋಡ್ : ಅಭ್ಯರ್ಥಿಗಳು ಪರೀಕ್ಷಾ ವೇಳೆಯಲ್ಲಿ ಶೌಚಾಲಯಕ್ಕೆ ತೆರಳಿ ಮರಳಿ ಬರುವಾಗ ಸದರಿ ಅಭ್ಯರ್ಥಿಗಳನ್ನು ಮತ್ತೊಮ್ಮೆ ತಪಾಸಣೆಗೆ ಒಳಪಡಿಸುವುದು.ಶೂ, ಸಾಕ್ಸ್ಗಳನ್ನು ಧರಿಸಲು ಅವಕಾಶವಿರುವುದಿಲ್ಲ. ಸಾಧಾರಣ ಚಪ್ಪಲಿಯನ್ನು ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಪರೀಕ್ಷಾ ಕೊಠಡಿಯೊಳಗೆ ಯಾವುದೇ ಆಧುನಿಕ ಉಪಕರಣಗಳು, ಮೊಬೈಲ್, ಬ್ಲೂ ಟೂಥ್ , ವೈಟ್ ಫ್ಲುಡ್ , ವೈರ್‌ಲೆಸ್ ಸೆಟ್ಸ್ , ಪೇಪರ್ , ಬುಕ್ಸ್ ತೆಗೆದುಕೊಂಡು ಹೋಗಲು ಅವಕಾಶವಿಲ್ಲ . ತುಂಬು ತೋಳಿನ ಶರ್ಟ್ ಮತ್ತು ಯಾವುದೇ ಆಭರಣಗಳನ್ನು ಮೆಟಲ್ ಮತ್ತು ನಾನ್ ಮೆಟಲ್(ಮಂಗಳ ಸೂತ್ರ ಹಾಗೂ ಕಾಲುಂಗುರಗಳನ್ನು ಹೊರತುಪಡಿಸಿ) ಪುಲ್ಲೋವರ್ಸ, ಜಾಕೆಟ್ ಮತ್ತು ಸ್ವೆಟರ್ಸಗಳನ್ನು ಧರಿಸಿ ಹಾಜರಾಗುವುದನ್ನು ನಿಷೇಧಿಸಿದೆ. ಮೆಟಲ್ ವಾಟರ್ ಬಾಟಲ್ ಮತ್ತು ನಾನ್ ಟ್ರಾನ್ಸಪರಂಟ್ ವಾಟರ್ ಬಾಟಲ್‌ಗಳನ್ನು ನಿಷೇಧಿಸಿದೆ. ಕಿವಿ, ಬಾಯಿಯನ್ನು ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ರೀತಿಯ ಫಿಲ್ಟರ್ ಇರುವ ಫೇಸ್ ಮಾಸ್ಕ್ ಅನ್ನು ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಲು ಅನುಮತಿ ನೀಡಬಾರದು. ಧಾರ್ಮಿಕ ಆಚರಣೆಗೆ ಸಂಬAಧಿಸಿದ ವಸ್ತುಗಳನ್ನು ಧರಿಸಿ ಬರುವ ಅಭ್ಯರ್ಥಿಗಳು ಮತ್ತು ಹೀಯರಿಂಗ್ ಏಡ್ ಉಪಕರಣ ಧರಿಸಿರುವ ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ 2 ಗಂಟೆ ಮುಂಚಿತವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಪಡಬೇಕಾಗಿರುತ್ತದೆ. ಹೀಯರಿಂಗ್ ಏಡ್ ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸುವುದು. ವಿಶೇಷವಾಗಿ ಐಐಟಿ ಮತ್ತು ನೀಟ್ ಪರೀಕ್ಷೆಗಳಲ್ಲಿ ಅನುಸರಿಸುವಂತೆ ಅಭ್ಯರ್ಥಿಗಳ ಕಿವಿಯಲ್ಲಿ ಯಾವುದೇ ಎಲೆಕ್ಟಾçನಿಕ್ ಡಿವೈಸ್ ಮತ್ತು ಮೈಕ್ರೋ ಫೋನ್ ಬಳಸದಿರುವ ಬಗ್ಗೆ ಎಲ್‌ಇಡಿ ಬ್ಯಾಟರಿಯನ್ನು ಬಳಸಿ ಕಿವಿಗಳನ್ನು ತಪಾಸಣೆ ನಡೆಸುವುದು.ಎರಡನೇ ಹಂತದಲ್ಲಿ ಪರೀಕ್ಷಾ ತಪಾಸಣೆ ನಡೆಸಿದ ನಂತರ ಎಲ್ಲಾ ಅಭ್ಯರ್ಥಿಗಳ ಗುರುತಿನ ದಾಖಲೆ/ಚೀಟಿ ಮತ್ತು ಪ್ರವೇಶ ಪತ್ರವನ್ನು ಕಡ್ಡಾಯವಾಗಿ ಪರಿಶೀಲಿಸಿ ಅವರುಗಳ ಅಭ್ಯರ್ಥಿತ್ವದ ಬಗ್ಗೆ ಖಚಿತಪಡಿಸಿಕೊಂಡ ನಂತರವೇ ಪರೀಕ್ಷಾ ಉಪ ಕೇಂದ್ರದ ಒಳಗೆ ಪ್ರವೇಶಿಸಲು ಅನುಮತಿಸತಕ್ಕದ್ದು.

ಕರ್ನಾಟಕ ಲೋಕಸೇವಾ ಆಯೋಗವು ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲಿ ತಿಳಿಸಿರುವ ವಸ್ತç ಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು. ಆಯೋಗವು ನಿಗದಿಪಡಿಸಿರುವ ಸೂಚನೆಗಳನ್ನು ಸಂಬAಧಪಟ್ಟವರು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಅವರು ಮಾತನಾಡಿ ಪರೀಕ್ಷೆಗಳು ಪಾರದರ್ಶಕವಾಗಿ ಜರುಗಬೇಕು ಎನ್ನುವ ಹಿತದೃಷ್ಟಿಯಿಂದಲೇ ಪರೀಕ್ಷಾರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಲಾಗುತ್ತದೆ. ಪರೀಕ್ಷಾ ಕೊಠಡಿಯಿಂದ ಯಾವುದೇ ಪ್ರಶ್ನೆ ಪತ್ರಿಕೆ / ಓಎಂಆರ್ ಉತ್ತರ ಹಾಳೆ/ ಪ್ರಶ್ನೆ ಸಹಿತ ಉತ್ತರ ಪುಸ್ತಿಕೆ ಹೊರಹೋಗದಂತೆ ಜಾಗೃತೆ ವಹಿಸಿ ಶಿಸ್ತು ಕ್ರಮ ಕೈಗೊಳ್ಳಬೇಕು. ಕೊಠಡಿ ಸಂವೀಕ್ಷಕರು ಅಭ್ಯರ್ಥಿಗಳ ಚಲನವಲನಗಳನ್ನು ಆಗಿಂದಾಗ್ಗೆ ಸೂಕ್ಷö್ಮವಾಗಿ ಗಮನಿಸಿ, ಯಾವುದೇ ಅಭ್ಯರ್ಥಿ ಸಂಶಯಾತ್ಮಕವಾಗಿ ವರ್ತಿಸುತ್ತಿದ್ದಲ್ಲಿ ತಕ್ಷಣ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ಜಾಮರ್‌ಗಳ ಅಳವಡಿಕೆ, ಸಿಸಿ ಕ್ಯಾಮರಾ ಅಳವಡಿಕೆ, ಗೋಡೆ ಗಡಿಯಾರಗಳ ಅಳವಡಿಕೆ,ಪರೀಕ್ಷಾ ಸಮಿತಿಯ ಸದಸ್ಯರುಗಳ ನಿರ್ವಹಿಸಬೇಕಾದ ವಿವಿಧ ಕರ್ತವ್ಯಗಳ ಕುರಿತು ಚರ್ಚಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿಲ್ಲಾ ಸಂಖ್ಯಾಸAಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಎಲ್. ಬಾರಾಟಕ್ಕೆ, ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು, ಮೇಲ್ವಿಚಾರಕರು, ಸಮನ್ವಯ ಅಧಿಕಾರಿಗಳು ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ