Monday, September 16, 2024
Google search engine
Homeಆರೋಗ್ಯಗದಗ : ಪರಿಸರ ಶುದ್ಧವಾಗಿರಿಸಲು ಸಸಿ ನೆಡುವುದು ನಮ್ಮ ಕರ್ತವ್ಯ; ಎಂ.ಎಂ. ತಾಂಬೋಟಿ

ಗದಗ : ಪರಿಸರ ಶುದ್ಧವಾಗಿರಿಸಲು ಸಸಿ ನೆಡುವುದು ನಮ್ಮ ಕರ್ತವ್ಯ; ಎಂ.ಎಂ. ತಾಂಬೋಟಿ

ಡಂಬಳ: ಹೋಬಳಿಯ ಡೋಣಿತಾಂಡಾ ಗ್ರಾಮದಲ್ಲಿ “ತಾಯಿಯ ಹೆಸರಲ್ಲಿ ಒಂದು ವೃಕ್ಷ” ವಿಶೇಷ ಅಭಿಯಾನದಡಿ ಸಸಿ ನೆಡಲಾಯಿತು. ಈ ವೇಳೆ ಸಸಿ ನೆಟ್ಟು ಮಾತನಾಡಿದ ಮುಂಡರಗಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ,

ತಾಯಿಯ ನಾಮದಲ್ಲಿ ಸಸಿ ನೆಡುವ ಮೂಲಕ ಪರಿಸರ ಬೆಳೆಸುವ ಈ ಅಭಿಯಾನ ಇತಿಹಾಸದಲ್ಲಿ ಉಳಿಯಲಿದೆ. ಅಭಿಯಾನ ಹಾಗೂ ತದನಂತರ ಎಲ್ಲರೂ ತಮ್ಮ ತಮ್ಮ ಮನೆಯೆದುರಯ ಸಸಿ ನೆಡುವ ಮೂಲಕ ನೆಡುತೋಪು ಸೃಷ್ಟಿಸಿ ಪೋಷಣೆಯ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು. ತಾಲೂಕಿನ ಪೇಠಾಲೂರಿನಲ್ಲಿ ಅರಣ್ಯ ಇಲಾಖೆಯೊಂದಿಗೆ ಹಾಗೂ ಡೋಣಿತಾಂಡಾ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆಯೊಂದಿಗೆ ನೂರಾರು ಸಸಿಗಳನ್ನುಜ ನೆಡಲಾಯಿತು. ಈ ವೇಳೆ ಡೋಣಿತಾಂಡಾ ಗ್ರಾಮದಲ್ಲಿ ಅವರು ಮಾತನಾಡಿದರು.

ವಿಶ್ವ ಪರಿಸರ ದಿನದ ಅಂಗವಾಗಿ ಪ್ರಧಾನ ಮಂತ್ರಿಯವರು “ತಾಯಿಯ ಹೆಸರಲ್ಲಿ ಒಂದು ವೃಕ್ಷ” (Ek Ped Maa Ke Naam) ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಇದೀಗ ನರೇಗಾ ಯೋಜನೆಯಡಿ ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ ಒಗ್ಗೂಡಿಸುವಿಕೆಯೊಂದಿಗೆ ಈ ಅಭಿಯಾನವನ್ನು ತಾಲೂಕಿನ 19 ಗ್ರಾಮ ಪಂಚಾಯತಿಯಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ತಾಪಂ, ಗ್ರಾಪಂ, ಶಾಲೆ, ಆಸ್ಪತ್ರೆ, ಕಾಲೇಜು ಆವರಣ ಸೇರಿದಂತೆ ವಿವಿಧ ಸ್ಥಳದಲ್ಲಿ ಏಕಕಾಲಕ್ಕೆ ಸಸಿ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಪ್ರಸ್ತುತ ನಗಕರೀಕರಣ, ಕೈಗಾರಿಕರೀಣದಿಂದ ಪರಿಸರ ನಾಶವಾಗುತ್ತಿದೆ. ಇದು ಮನುಕುಲದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಹೀಗೆ ಮುಂದುವರೆದರೆ ಶುದ್ಧ ಗಾಳಿ-ನೀರಿಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಬಹುದು. ಆದ್ದರಿಂದ ದೇಶದೆಲ್ಲೆಡೆ ಅರಣ್ಯ ಪ್ರದೇಶ ಅಭಿವೃದ್ಧಿಗೆ ಸಾಕಷ್ಟು ಕ್ರಮವಹಿಸಲಾಗಿದೆ. ಇದೀಗ ಈ ಅಭಿಯಾನದ ಮೂಲಕ ಮತ್ತೊಂದು ಹೆಜ್ಜೆ ಮುಂದಿಟ್ಟು ಪರಿಸರದ ಕುರಿತು ಜನ ಜಾಗೃತಿ ಮೂಡಿಸುವುದರ ಜೊತೆಗೆ ಅರಣ್ಯ ಪ್ರದೇಶ ಹೆಚ್ಚಿಸುವ ಗುರಿ ಹೊಂದಲಾಗಿದೆ. ಹೀಗಾಗಿ ತಾಯಿಯ ಹೆಸರಲ್ಲಿ ನೆಡುತೋಪು ಮಾಡಿರುವ ಈ ಸಸಿಗಳನ್ನು ನಾವೆಲ್ಲರೂ ಪೋಷಣೆ ಮಾಡೋಣ ಎಂದು ಕರೆ ನೀಡಿದರು.

ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಎಂ. ಎಂ. ತಾಂಬೋಟಿ ಮಾತನಾಡಿ, ಕಾಡು ಬೆಳೆಸಿ, ನಾಡು ಉಳಿಸಿ ಎಂಬ ಘೋಷ ವಾಕ್ಯ ಕೇವಲ ಘೋಷಣೆಗೆ ಸೀಮಿತವಾಗಬಾರದು. ಮನೆಯಂಗಳದ ಜೊತೆಗೆ ಸುತ್ತಮುತ್ತಲಿನ ಪ್ರದೇಶ ಹಾಗೂ ತಮ್ಮ ಜಮೀನುಗಳಲ್ಲಿ ಸಸಿಗಳನ್ನು ನೆಟ್ಟು ಪೋಷಣೆ ಮಾಡಬೇಕು. ಸಸಿಗಳನ್ನು ಮರಗಳನ್ನಾಗಿಸಿದರೆ ಅದರಿಂದ ಸಾಕಷ್ಟು ಪ್ರಯೋಜನಗಳು ಲಭಿಸಲಿವೆ ಎಂದರು.

ಈ ವೇಳೆ ಸಾಮಾಜಿಕ ವಲಯ ಅರಣ್ಯಾಧಿಕಾರಿ ಸುನೀತಾ, ಪರಿಸರ ಕಾರ್ಯಕರ್ತ ಶಂಕರ ಜಾಯನಗೌಡರ, ತೋಟಗಾರಿಕೆ ಇಲಾಖೆ ಅಧಿಕಾರಿಗಳಾದ ಮೈಲಾರೆಪ್ಪ, ಸುರೇಶ ಕುಂಬಾರ ಹಾಗೂ ಗ್ರಾಪಂ ಅಧ್ಯಕ್ಷರು, ಸದಸ್ಯರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ