Monday, September 16, 2024
Google search engine
Homeಗದಗಗದಗ : ಸಾಕ್ಷರ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ

ಗದಗ : ಸಾಕ್ಷರ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ

ಮುಂಡರಗಿ: ತಾಲೂಕಾ ಗ್ರಾಪಂ ವ್ಯಾಪ್ತಿಗಳ ಅನಕ್ಷರಸ್ಥ ಗ್ರಾಮ ಪಂಚಾಯತ ಸದಸ್ಯರಿಗೆ ಇಚ್ ಒನ್ ಟೀಚ್ ಒನ್ ಕಾರ್ಯಕ್ರಮದಡಿ ಸಾಕ್ಷರರನ್ನಾಗಿಸಲು ಗ್ರಂಥಾಲಯ ಮೇಲ್ವಿಚಾರಕರಿಗೆ ಹಾಗೂ ಮೇಲ್ವಿಚಾರಕರಿಗೆ ಮೂರು ದಿನಗಳ ತರಬೇತಿ ಶಿಬಿರಕ್ಕೆ ಗುರುವಾರ ಮುಂಡರಗಿ ತಾಪಂ ಸಭಾಂಗಣದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಂಸ್ಥೆ ಹಮ್ಮಿಕೊಂಡ ಸಾಕ್ಷರ ಸನ್ಮಾನ ಕಾರ್ಯಕ್ರಮ ಮಹತ್ತರ ಕಾರ್ಯಕ್ರಮವಾಗಿದೆ. ಇದರಿಂದ ಅವರು ಅನ್ಯಾಯದ ವಿರುದ್ಧ ಧ್ವನಿ ಎತ್ತಿ ತಾರತಮ್ಯ ಹಾಗೂ ತಮ್ಮ ಹಕ್ಕುಗಳನ್ನು ತಿಳಿದುಕೊಳ್ಳಲು ಸಹಕಾರಿ ಎಂದು ಹೇಳಿದರು‌.

ಆ ನಿಟ್ಟಿನಲ್ಲಿ ಮೂರು ದಿನ ತರಬೇತಿ ಪಡೆದ ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರು ಅನಕ್ಷರಸ್ಥ ಗ್ರಾಪಂ ಸದಸ್ಯರನ್ನು ತರಬೇತಿ ನೀಡಿ ಸಾಕ್ಷರರನ್ನಾಗಿಸಿದರೆ ಇದು ಗ್ರಾಮಗಳ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡಿದಂತೆ ಇದು ಸಾಮಾಜಿಕ ಜವಾಬ್ದಾರಿಯು ಹೌದು ಎಂದು ಅಭಿಪ್ರಾಯಪಟ್ಟರು.

ಮುಖ್ಯ ತರಬೇತಿದಾರರಾಗಿ ಶಿಕ್ಷಣ ಇಲಾಖೆ ಕೆ.ಬಿ ತಂಬ್ರಳ್ಳಿ ಹಾಗೂ ವಿ ಎಚ್ ಹೊಳಿಯಮ್ಮನವರ ಅವರು ಮೂರು ದಿನಗಳ ತರಬೇತಿ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು.

ಸಂಪನ್ಮೂಲ ವ್ಯಕ್ತಿ ಮಂಜುನಾಥ ಮುಧೋಳ, ವಿಷಯ ನಿರ್ವಾಹಕ ಶಾಬುದ್ಧೀನ ನಧಾಪ, ತಾಪಂ ಸಿಬ್ಬಂದಿ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ಉಚಿತ ಮುಸ್ಲಿಂ ಧರ್ಮದ ಸಾಮೂಹಿಕ ಅದ್ದೂರಿ ವಿವಾಹ ಕಾರ್ಯಕ್ರಮ  ಗದಗ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ ಗದಗ : ಶಿಕ್ಷಕರು, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು ಗದಗ : ತೋಂಟದಾರ್ಯ ಅಟೋ ಸ್ಟ್ಯಾಂಡ್ ಅನ್ನಸಂತರ್ಪಣೆ ಗದಗ : ಅರ್ಥಪೂರ್ಣವಾಗಿ ಪೈಗಂಬರ್ ಜಯಂತಿ ಆಚರಣೆ : ಬಾಷಾಸಾಬ್ ಮಲ್ಲಸಮುದ್ರ ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ ಗದಗ : ಸೆ.17 ರಿಂದ ಗದಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ‘ದಸರಾ ಕ್ರೀಡಾಕೂಟ’ ಆಯೋಜನೆ ಗದಗ : ಗದಗ ಬೆಟಗೇರಿ ನಗರಸಭೆ : ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಆಹ್ವಾನ ಗದಗ : ತಂದೆ ಇಲ್ಲದ ಮಕ್ಕಳ ಖಾತೆಗೆ ಮಾತ್ರ ಸರ್ಕಾರ ವರ್ಷಕ್ಕೆ 24000 ರೂ. ಗಳ ಸುದ್ದಿಯಲ್ಲಿ ಸತ್ಯಾಂಶವಿಲ್ಲ  ಗದಗ : ಲಿಂಗ. ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ  ೧೪ ಪುಣ್ಯಸ್ಮರಣೆ ಆಚರಣೆ