Wednesday, March 26, 2025
Google search engine
Homeಗದಗಗದಗ : ನಾಗಾವಿ ಕ್ರಾಸ್ ನಿಂದ ಮುಳಗುಂದ ಪಟ್ಟಣದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಗದಗ : ನಾಗಾವಿ ಕ್ರಾಸ್ ನಿಂದ ಮುಳಗುಂದ ಪಟ್ಟಣದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಗದಗ ಸಪ್ಟೆಂಬರ್ 8 :ನಾಗಾವಿ ಕ್ರಾಸ್,ಹರ್ತಿಯಿಂದ ಮುಳಗುಂದ ಪಟ್ಟಣದವರೆಗಿನ ರಸ್ತೆಯ ಕಾಮಗಾರಿ ಉತ್ತಮ ಗುಣಮಟ್ಟದಿಂದ ಕೂಡಿರಲಿ ಎಂದು ಸಚಿವ ಎಚ್ ಕೆ ಪಾಟೀಲ ಅವರು ಹೇಳಿದರು.

ಹರ್ತಿ ಗ್ರಾಮದಲ್ಲಿ ರವಿವಾರ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ, ಲೋಕೋಪಯೋಗಿ ಇಲಾಖೆ ಸಹಯೋಗದಲ್ಲಿ ಲೆಕ್ಕ ಶೀರ್ಷಿಕೆ ಎಸ್. ಹೆಚ್. ಡಿ. ಪಿ. 2023-24 ನೇ ಸಾಲಿನ ಅಂದಾಜು

25 ಕೋಟಿಗಳ ಅನುದಾನದಲ್ಲಿ ನಿರ್ಮಿಸುವ ರಸ್ತೆ ಕಾಮಗಾರಿಯ ಭೂಮಿ ಪೂಜೆಯನ್ನು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ನೆರವೇರಿಸಿ ಮಾತನಾಡಿದರು.

ಉತ್ತಮ ರಸ್ತೆಯಿಂದ ಗ್ರಾಮಗಳು ಅಭಿವೃದ್ಧಿ ಹೊಂದುತ್ತವೆ,ವ್ಯಾಪಾರ ವಹಿವಾಟು ಹೆಚ್ಚಾಗುತ್ತದೆ ಹಾಗಾಗಿ ನಾಗಾವಿ ಕ್ರಾಸ್ ನಿಂದ ಮುಳಗುಂದ ಪಟ್ಟಣದವರೆಗೆ ನಿರ್ಮಾಣವಾಗುವ ರಸ್ತೆಯೂ ಉತ್ತಮ ಗುಣಮಟ್ಟದಿಂದ ಇರಬೇಕು ಮತ್ತು ನಿಯಮಿತ ಸಮಯದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸರಾಗವಾಗಿ ಸಾಗಲು ಅನುಕೂಲ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಅಶೋಕ ಮಂದಾಲಿ,ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ಕೆ.ವಿ.ಹಂಚಿನಾಳ ಗ್ರಾಮದ ಗಣ್ಯರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ತಾಲೂಕು ಮಟ್ಟದ ನರೇಗಾ ಕಾಯಕ ಬಂಧುಗಳ ತರಬೇತಿ  ಗದಗ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಮ್ ಪ್ರಿ-ಸ್ಕೂಲ್ ಪದವಿ ಪ್ರಧಾನ ಸಮಾರಂಭ ೨೦೨೫ ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ