14.4 C
New York
Friday, May 9, 2025

Buy now

spot_img

ಗದಗ : ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆ

ವಕ್ಫ ಬಿಲ್ -೨೦೨೪ ವಿರುದ್ಧ ಆಕ್ಷೇಪಣೆ ಸಲ್ಲಿಸಿ, ಜಂಟಿ ಪಾರ್ಲಿಮೆಂಟ್ ಸಮಿತಿಗೆ ಹಕ್ಕೋತ್ತಾಯ ಮಂಡಿಸಿದ – ಎಸ್.ಡಿ.ಪಿ.ಐ ಗದಗ ವಿಧಾನಸಭಾ ಕ್ಷೇತ್ರ ಸಮಿತಿ 

ಗದಗ ೧೩: ಎಸ್.ಡಿ.ಪಿ.ಐ. ಗದಗ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ದಿನಾಂಕ ೧೩/೦೯/೨೦೨೪ ರಂದು ಶುಕ್ರವಾರ ಮಧ್ಯಾಹ್ನ ೩-೩೦ ಗಂಟೆಗೆ ಗದಗ ನಗರದ ಗಾಂಧಿ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸಮಾಜದ ಹಿರಿಯರು, ಯುವಕರು, ಧಾರ್ಮಿಕ ಮುಖಂಡರು, ಸೇರಿ ವಕ್ಫ ತಿದ್ದುಪಡೆ ಮಸೂದೆ ವಿರುದ್ಧ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷರಾದ ಬಿಲಾಲ ಗೋಕಾವಿಯವರು ವಕ್ಫ ಬಿಲ್-೨೦೨೪ ಮಸೂದೆ ಅಸಂವಿಧಾನಿಕ ಹಾಗೂ ಅಲ್ಪಸಂಖ್ಯಾತ ವಿರೋಧಿ ಬಿಲ್ ಇದಾಗಿದ್ದು ಇದನ್ನು ನಾವು ಎಂದಿಗೂ ಒಪ್ಪಿವುದಿಲ್ಲ ಎಂದು ಹೇಳಿದರು. ಅದೇ ರೀತಿ ಮುಸ್ಲಿಂ ಧರ್ಮಗುರುಗಳಾದ ಮೌಲಾನ್ ಶಮಶುದ್ದೀನ ಅಣ್ಣಿಗೇರಿ ಅವರು ಮಾತನಾಡಿ ವಕ್ಫ ಆಸ್ತಿ ಅಲ್ಲಾಹನ ಆಸ್ತಿ ಇದರಲ್ಲಿ ಸರ್ಕಾರದ ಮಧ್ಯಸ್ಥಿಕೆ ವಹಿಸುವುದು ಸರಿಯಲ್ಲ ಈ ಬಿಲ್ಲನ್ನು ನಾವು ಎಂದಿಗೂ ಒಪ್ಪುವುದಿಲ್ಲ, ಈ ಕರಾಳ ಕಾನೂನಿನ ವಿರುದ್ಧ ನಮ್ಮ ಸಮಾಜದ ಎಲ್ಲ ಯುವಕರು, ಧಾರ್ಮಿಕ ಮುಖಂಡರುಗಳು, ಸಮದಾಯದ ನಾಯಕರುಗಳು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಕರೆ ಕೊಟ್ಟರು. 

ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಅನ್ವರ ಬಾಗೇವಾಡಿ ಅವರು ಮಾತನಾಡಿ ವಕ್ಫ ಆಸ್ತಿಗಳ ಸಂರಕ್ಷಣೆ ಹಾಗೂ ವಕ್ಫ ಸುಧಾರಣೆಗಳ ಹೆಸರಿನಲ್ಲಿ ಇತ್ತೀಚಿಗೆ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ವಕ್ಫ ಬಿಲ್-೨೦೨೪ ತಂದಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿರುತ್ತದೆ. ಮುಸ್ಲಿಂ ಸಮುದಾಯದ ಕ್ಷೇಮಾಭಿವೃದ್ಧಿಗೆ ಇರುವ ವಕ್ಫ ಆಸ್ತಿಗಳನ್ನು ಕಸಿದುಕೊಳ್ಳುವ ಹುನ್ನಾರ ಬಿಜೆಪಿ ಪಕ್ಷದ ಹಿಡನ್ ಅಜೆಂಡ್‌ವಾಗಿರುತ್ತದೆ. ಹಾಲಿಯಲ್ಲಿರುವ ವಕ್ಫ ಕಾಯಿದೆಗೆ ಸರಿ ಸುಮಾರು ೪೦ ತಿದ್ದುಪಡಿಗಳನ್ನು ಮಾಡುವ ಮೂಲಕ ಇಡೀ ವಕ್ಫ ಕಾಯ್ದೆಯನ್ನೇ ನಾಶಗೊಳಿಸುವ ಈ ವಕ್ಫ ಬಿಲ್-೨೦೨೪ ತಂದಿರುವುದು ಇದು ಜಾತ್ಯಾತೀತ ಮೌಲ್ಯಗಳ ವಿರುದ್ಧವಾಗಿದೆ ಹಾಗೂ ತಾರತಮ್ಯಗಳೊಂದಿಗೆ ಕೂಡಿದೆ. ಆದುದರಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಈ ಬಿಲ್ ವಿರುದ್ಧ ತನ್ನ ವಿರೋಧ ವ್ಯಕ್ತಪಡಿಸುತ್ತದೆ. ಗೌರವಾನ್ವಿತ ಅಧ್ಯಕ್ಷರು ಮತ್ತು ಸಮಿತಿ ಸದಸ್ಯರು, ಜಂಟಿ ಸಂಸದೀಯ ಸಮಿತಿ, ನವದೆಹಲಿ ಇವರಿಗೆ ಈ ಪ್ರತಿಭಟನೆ ಮೂಲಕ ಆಕ್ಷೇಪಣೆಗಳಲ್ಲಿ ಸಲ್ಲಿಸುತ್ತಿದೆ ಎಂದು ಎಸ್.ಡಿ.ಪಿ.ಐ ಗದಗ ಪ್ರಧಾನ ಕಾರ್ಯದರ್ಶಿಗಳಾದ ಅನ್ವರ ಬಾಗೇವಾಡಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ. 

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಹಿದಾಯತುಲ್ಲಾ ಕಾಗದಗಾರ, ಮುಸ್ತಾಕ ಕಟ್ಟಿಮನಿ, ಅನ್ವರ ಮುಲ್ಲಾ, ಹಸನ್ ನಾಗನೂರ, ಸಮೀರ ಕೊಟ್ಟೂರು, ಮುಸ್ತಾಕ ಹೊಸಮನಿ, ಅಫ್ಪಾನ್ ತರಬ್ದಾರ, ಇಬ್ರಾಹಿಂ ಕುಂದರಪಿ, ಜಾಫರ ಅಹ್ಮದ, ನೌಶಾದ ಮುಲ್ಲಾ, ಇಸ್ಮಾಯಲ್ ಅಣ್ಣಿಗೇರಿ, ಸಾದಿಕ್, ಇರ್ಫಾನ್ ಗುಳಗುಂದಿ ಸೇರಿದಂತೆ ಅನೇಕ ಕಾರ್ಯಕರ್ತರು, ಗುರುಹಿರಿಯರು, ಯುವಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ