ಗದಗ : ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿಯ 56,00,000 ಮಕ್ಕಳಿಗೆ ಬುಧವಾರದಿಂದ (ಸೆ.26) ಮಧ್ಯಾಹ್ನದ ಬಿಸಿಯೂಟದ ಜೊತೆಗೆ 6 ದಿನ ಮೊಟ್ಟೆ ಕೊಡಲಾಗುತ್ತಿದೆ.
ಗದಗ ಜಿಲ್ಲೆ ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳಿಗೆ ಬೇಯಿಸಿದ ಮೊಟ್ಟೆ ನೀಡುವ ಮೂಲಕ ಗ್ರಾಂ ಪಂಚಾಯತ ಅಧ್ಯಕ್ಷಾರದ ಶ್ರೀಮತಿ ಕಿರ್ತಿ ಪ್ರಶಾಂತ್ ಗೌಡ ಪಾಟೀಲ್ ಹಾಗೂ ಗ್ರಾಂ ಪಂಚಾಯತ ಸರ್ವ ಸದಸ್ಯರು ಈ ಯೋಜನೆಗೆ ಚಾಲನೆ ನೀಡಿದರು.
ಸರ್ಕಾರ ಎರಡು ದಿನ ಮೊಟ್ಟೆ ಪೂರೈಸಲಿದೆ. ಇನ್ನು ಉಳಿದ ನಾಲ್ಕು ದಿನ ಅಜೀಂ ಪ್ರೇಮ್ಜಿ ಫೌಂಡೇಷನ್ ಕೊಡಲಿದೆ. ಮೂರು ವರ್ಷ ಮೊಟ್ಟೆ ನೀಡಲು 1,500 ಕೋಟಿ ನೆರವು ನೀಡಲು ಶಾಲಾ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್ಜಿ ಫೌಂಡೇಷನ್ ನಡುವೆ ಜುಲೈನಲ್ಲಿ ಒಪ್ಪಂದ ಆಗಿತ್ತು. ಇದೀಗ ಈ ಯೋಜನೆ ಜಾರಿಗೆ ಬಂದಿದೆ.
ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ, ಬಿಸಿಹಾಲು, ಮೊಟ್ಟೆ, ಬಾಳೆಹಣ್ಣು ಹಾಗೂ ರಾಗಿ ಮಾಲ್ಟ್ ವಿತರಣೆ ಮಾಡುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಮುನ್ನಡೆಸಿಕೊಂಡು ಬರುತ್ತಿದೆ.
ಈ ಸಂದರ್ಭದಲ್ಲಿ ಗ್ರಾಂ ಪಂಚಾಯತ ಅಧ್ಯಕ್ಷರು /ಸರ್ವ ಸದಸ್ಯರು/ಎಸ್ ಡಿ ಎಂ ಸಿ ಅಧ್ಯಕ್ಷರು/ಸರ್ವ ಸದಸ್ಯರು ಶಾಲಾ ಮುಖ್ಯೋಪಾಧ್ಯಾಯರು