27.4 C
New York
Saturday, May 17, 2025

Buy now

spot_img

ಗದಗ : ಗದಗ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎ ಆರ್ ಕಮತ ಆಯ್ಕೆ 

ಗದಗ : ಅಡವಿಸೋಮಾಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಎ ಆರ್ ಕಮತರವರಿಗೆ ಗದಗ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ದೊರೆತಿದೆ.

ಗದಗ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ನೀಡುವ ಗದಗ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅಡವಿಸೋಮಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 27 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮ್ಮೆಲ್ಲರ ಆತ್ಮೀಯ ಶಿಕ್ಷಕಿಯರಾದ ಶ್ರೀಮತಿ ಎ ಆರ್ ಕಮತ ಗುರು ಮಾತೆಯರಿಗೆ ಆಯ್ಕೆಯಾಗಿರುತ್ತಾರೆ 

  ಡಾ.ಬಿ .ಆರ್ ಅಂಬೇಡ್ಕರ್ ಸಭಾ ಭವನದಲ್ಲಿ ಇಂದು ನಡೆಯುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ( ರಿ ) ಬೆಂಗಳೂರು ಹಾಗೂ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಶೈಕ್ಷಣಿಕ ಸಮ್ಮೇಳನದಲ್ಲಿ ಗದಗ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಸ್ವೀಕರಿಸುವರು.

ಶಾಲೆ ಎಂದರೆ ಬದುಕಿನ ಒಂದು ಭಾಗವಾಗಿ ಮಕ್ಕಳೊಂದಿಗೆ ಮಕ್ಕಳಾಗಿ ಅವರು ಇಷ್ಟಪಡುವ ಕಲಿಕೆಯನ್ನು ಕಷ್ಟಪಡದೆ ಸ್ವೀಕರಿಸುವ ಹಾಗೆ ಎಲ್ಲಾ ಮಕ್ಕಳನ್ನು ತನ್ನ ಮಕ್ಕಳಂತೆ ಪ್ರೀತಿಸಿ ಸಹಜವಾದ ಕಲಿಕೆಯೊಂದಿಗೆ ಸಾರ್ಥಕ ಬದುಕನ್ನು ಕಂಡುಕೊಂಡ ರವರಿಗೆ ಪ್ರಸಕ್ತ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಬಂದಿರುವುದು ಹೆಮ್ಮೆ ಎನಿಸಿದೆ . ಜ್ಞಾನ ಮತ್ತು ಕೌಶಲಗಳು ಜೊತೆಗೆ ಉತ್ತಮ ನಾಗರಿಕನಾಗಲು ಪ್ರೇರಕವಾದ ಮೌಲ್ಯ ಶಿಕ್ಷಣವನ್ನು ನೀಡುವುದರ ಮೂಲಕ ಬಾಲ್ಯದಲ್ಲಿ ಮಕ್ಕಳಿಗೆ ನೀಡಬೇಕಾದ ಅಕ್ಷರದ ಜ್ಞಾನವನ್ನು ಸಂತಸದಿಂದ ನೀಡಿ ಮಕ್ಕಳ ಪಾಲಿನ ಆದರ್ಶ ಗುರುಮಾತೆಯಾಗಿ ಸರಳ ಸಜ್ಜನಿಕೆಗೆ ಹೆಸರಾದವರು ಎ ಆರ್ ಕಮತ ಗುರು ಮಾತೆಯರು.

ಗೌರವಾನ್ವಿತರಿಗೆ ಗ್ರಾಮದ ಹಿರಿಯರು ಹಾಗೂ ಶಾಲಾ ಸಿಬ್ಬಂದಿ ವರ್ಗ ಹಾಗೂ ಅಪಾರ ವಿಧ್ಯಾರ್ಥಿ ಬಳಗದ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಅಮೃತ-ಸುರಭಿ ಯೋಜನೆ” ಹೈನೋದ್ಯಮದ ಅಭಿವೃದ್ಧಿಗೆ ಹೊಸ ಆಶಾಕಿರಣ ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಗದಗ : ಆನ್‌ಲೈನ್ ಮೂಲಕ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ ಗದಗ : ಗಂಜೇಂದ್ರಗಡದಲ್ಲಿ  ಬೀದಿನಾಯಿಗಳ ದಾಳಿಗೆ  ಮಹಿಳೆ ಸಾವು.! ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ