21.9 C
New York
Saturday, May 17, 2025

Buy now

spot_img

ಗದಗ : ಹುಟ್ಟು ಹಬ್ಬದ ದಿನದಂದೇ ಶವವಾಗಿ ಪತ್ತೆಯಾದ ಬಾಲಕ

ಗದಗ : ಗದಗದ ಕೊನೇರಿ ಹೊಂಡದಲ್ಲಿ ರವಿವಾರ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದ ಬಾಲಕ ಪ್ರಥಮ್ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸೋಮವಾರ ಹೊರ ತೆಗೆದಿದ್ದಾರೆ.

ಭಾನುವಾರ ಮಧ್ಯಾಹ್ನ ಹೊಂಡದ ಮೆಟ್ಟಿಲುಗಳ ಮೇಲೆ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ವೇಳೆ ಪ್ರಥಮ್ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದು, ಆತನೊಂದಿಗೆ ಇದ್ದ ಇಬ್ಬರು ಬಾಲಕರು ಕಿರುಚಾಡಿ ಸ್ಥಳಿಯರಿಗೆ ವಿಷಯ ತಿಳಿಸಿದ್ದಾರೆ.

ಕೂಡಲೇ ಯುವಕರ ತಂಡ ಹೊಂಡಕ್ಕೆ ಜಿಗಿದು ಬಾಲಕನ ರಕ್ಷಣೆಗೆ ಪ್ರಯತ್ನಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಕೂಡ ಹುಡುಕಾಟ ನಡೆಸಿದ್ದಾರೆ,

ಆದರೆ ಹೊಂಡದಲ್ಲಿ ಕೆಸರು ತುಂಬಿದ್ದರಿಂದ ಬಾಲಕ ಪತ್ತೆಯಾಗಿರಲಿಲ್ಲ. ಸೋಮವಾರ ಸತತ ಕಾರ್ಯಾಚರಣೆ ನಡೆಸಿ ಮೃತದೇಹ ಹೊರ ತೆಗೆಯಲಾಗಿದೆ. ಸೆ. 30ರಂದು ಬಾಲಕ ಪ್ರಥಮ್ ಜನ್ಮದಿನ ಆಚರಿಸಲು ಅಜ್ಜಿ ಎರಡು ದಿನಗಳಿಂದ ತಯಾರಿ ನಡೆಸಿದ್ದರು. ಆದರೆ, ಜನ್ಮದಿನದಂದೇ ಪ್ರಥಮ್ ಶವವಾಗಿ ಪತ್ತೆಯಾಗಿದ್ದಾನೆ. ತಂದೆ, ತಾಯಿ ಕಳೆದುಕೊಂಡಿದ್ದ ಪ್ರಥಮ್ ಅಜ್ಜಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ. ಅಕಾಲಿಕವಾಗಿ ಮೊಮ್ಮಗನ ಸಾವಿನಿಂದ ಅಜ್ಜಿ ಆಕ್ರಂದನ ಮುಗಿಲು ಮುಟ್ಟಿದ್ದು, ಜನ ಕೂಡ ಕಂಬನಿ ಮಿಡಿದಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಅಮೃತ-ಸುರಭಿ ಯೋಜನೆ” ಹೈನೋದ್ಯಮದ ಅಭಿವೃದ್ಧಿಗೆ ಹೊಸ ಆಶಾಕಿರಣ ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಗದಗ : ಆನ್‌ಲೈನ್ ಮೂಲಕ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ ಗದಗ : ಗಂಜೇಂದ್ರಗಡದಲ್ಲಿ  ಬೀದಿನಾಯಿಗಳ ದಾಳಿಗೆ  ಮಹಿಳೆ ಸಾವು.! ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ