Wednesday, March 26, 2025
Google search engine
Homeಗದಗಗದಗ : ಅಂಬಿಗ, ಗಂಗಾಮತ, ಸುಣಗಾರ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ ಬುಕ್ ಹಾಗೂ...

ಗದಗ : ಅಂಬಿಗ, ಗಂಗಾಮತ, ಸುಣಗಾರ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ ಬುಕ್ ಹಾಗೂ ಶಾಲಾ ಬ್ಯಾಗ್ ವಿತರಣೆ

ಗದಗ ೬: ನಗರದ ಅಂಬಿಗ, ಗಂಗಾಮತ, ಸುಣಗಾರ, ಬಾರಕೇರ ಸಮುದಾಯದ ವಿದ್ಯಾರ್ಥಿಗಳಿಗೆ ನೋಟ್ಸ ಬುಕ್ ಹಾಗೂ ಶಾಲಾ ಬ್ಯಾಗ್ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗದಗ ಜಿಲ್ಲಾ ಅಂಬಿಗರ ಸಮಾಜದ ಪ್ರಧಾನ ಕಾರ್ಯದರ್ಶಿ ಸಂಗಮೇಶ ಹಾದಿಮನಿಯವರು ಸರ್ವರನ್ನು ಸ್ವಾಗತಿಸಿ ಮಾತನಾಡಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿವರ್ಷ ನೋಟ್ಸ ಬುಕ್ ಹಾಗೂ ಬ್ಯಾಗ್‌ಗಳನ್ನು ಸಂಘಟನೆಯಿAದ ಹಾಗೂ ಶಿಕ್ಷಣ ಪ್ರೇಮಿಗಳ ಸಹಾಯದಿಂದ ಉಚಿತವಾಗಿ ನೀಡುತ್ತಿದ್ದು ಸಮುದಾಯದ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಿರಿ ಎಂದು ಹೇಳುತ್ತಾ ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸುವುದು ಮುಖ್ಯವಾಗಿದೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ತಾವೆಲ್ಲರೂ ಕೈ ಜೋಡಿಸಿರಿ ಎಂದರು.

ಸಭೆಯ ಅದ್ಯಕ್ಷತೆಯನ್ನು ಗದಗ ಜಿಲ್ಲಾ ನಿಜ ಶರಣ ಅಂಬಿಗರ ಚೌಡಯ್ಯ ಸಮಾಜದ ಜಿಲ್ಲಾ ಅದ್ಯಕ್ಷರಾದ ರಾಮಣ್ಣ ಇರಕಲ್ಲ ವಹಿಸಿಕೊಂಡು ಮಾತನಾಡಿ ಸಮಾಜ ಸಂಘಟನೆಯು ತಮ್ಮೆಲ್ಲರ ಸಹಕಾರದಿಂದ ಸಾಮಾಜಿಕ ಕ್ರಿಯಾಶೀಲ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತ ಸಾಗಿರುವುದು ಸಂತಸ ತಂದಿದೆ ಮುಂದಿನ ದಿನಮಾನಗಳಲ್ಲಿ ಸಂಘಟನೆ ವತಿಯಿಂದ ವಿವಿಧ ಕೌಶಲ್ಯಗಳನ್ನು ಹೊಂದಿದ ತರಬೇತಿ ಕಾರ್ಯಗಾರ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಗದಗ ಜಿಲ್ಲಾ ಕೆಪಿಸಿಸಿ ಮೀನುಗಾರಿಕೆ ವಿಭಾಗದ ಜಿಲ್ಲಾ ಅದ್ಯಕ್ಷರಾದ ಗುರಪ್ಪ ತಿರ್ಲಾಪೂರ, ಸಮಾಜದ ಉಪಾಧ್ಯಕ್ಷ ಪ್ರವೀಣ ನೀಲಣ್ಣವರ, ರವಿಕುಮಾರ ಗುಡಿಸಾಗರ, ಮಂಜುನಾಥ ಗುಡಿಸಾಗರ, ಹರೀಶ್ ಬಾರಕೇರ, ರಮೇಶ ಬೆಣಕಲ್ಲ, ಚಂದ್ರಶೇಖರ ಬಾರಕೇರ, ಮಹಿಳಾ ಅದ್ಯಕ್ಷರಾದ ಸುಜಾತ ಗುಡಿಸಾಗರ, ಸುಜಾತಾ ಬಾರಕೇರ, ಸೌಮ್ಯಾ ಸುಣಗಾರ, ನಿಂಗಪ್ಪ ಇಟಗಿ, ಅಮಿತ ಪೂಜಾರ,ರಾಜು ಪೂಜಾರ, ಮಾರುತಿ ಬಾರಕೇರ ಬಸವರಾಜ ನರಗುಂದ ಹಾಗೂ ಸಮಾಜದ ಹಿರಿಯರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ತಾಲೂಕು ಮಟ್ಟದ ನರೇಗಾ ಕಾಯಕ ಬಂಧುಗಳ ತರಬೇತಿ  ಗದಗ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಮ್ ಪ್ರಿ-ಸ್ಕೂಲ್ ಪದವಿ ಪ್ರಧಾನ ಸಮಾರಂಭ ೨೦೨೫ ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ