25.3 C
New York
Friday, June 13, 2025

Buy now

spot_img

ಗದಗ : ಅಭಿವೃದ್ಧಿ ಕಾರ್ಯಗಳು ಶೀಘ್ರಗತಿಯಲ್ಲಿ ಆಗಬೇಕು ಜಿಲ್ಲೆಗೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು ಆದ್ಯ ಕರ್ತವ್ಯವಾಗಲಿ

ಗದಗ ಅಕ್ಟೋಬರ್ 7 : ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಅಭಿವೃದ್ಧಿ ಕಾರ್ಯಗಳು ಶೀಘ್ರಗತಿಯಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಆಸಕ್ತಿ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೊಮವಾರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ( ದಿಶಾ ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನರೇಗಾ ಯೋಜನೆಗೆ ನೇರವಾಗಿ ಅನುದಾನ ಬರುತ್ತಿದ್ದು ಗ್ರಾಮದ ಮೂಲಭೂತ ಸೌಲಭ್ಯಗಳಿಗೆ ಕ್ರಿಯಾ ಯೋಜನೆ ತಯಾರಿಸಿ ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಪಿಡಿಓ ಹಾಗೂ ತಾ.ಪಂ. ಇಒ ಗಳು ಶ್ರಮಿಸಬೇಕು. ವಿವಿಧ ಇಲಾಖೆಯ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಸರಿಯಾದ ರೀತಿಯಲ್ಲಿ ತಲುಪಬೇಕು ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ಅಧಿಕಾರಿಗಳು ತಮ್ಮ ಕಾರ್ಯ ಶೈಲಿಯಲ್ಲಿ ಸಕಾರಾತ್ಮಕ ಬದಲಾಯಿಣೆ ತಂದುಕೊAಡು ಒಂದು ತಂಡವಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಜಲಜೀವನ್ ಮಿಷನ್ ಕೇಂದ್ರದ ಸರ್ಕಾರದ ಮಹಾತ್ವಾಕಾಂಕ್ಷೆ ಯೊಜನೆಯಾಗಿದ್ದು ಇಲ್ಲಿಯವರೆಗೆ ಗುರಿ ಸಾಧಿಸಲಾಗಿದ್ದು ತಾಂತ್ರಿಕ ತೊಂದರೆ ಸರಿಪಡಿಸಿ ಪ್ರತಿ ಮನೆ ಮನೆಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಕ್ರಮ ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆಯಿರುವ ಗ್ರಾಮ ಪಟ್ಟಿ ಮಾಡಿ ಪರಿಶೀಲನೆ ನಡೆಸಬೇಕು. ಪ್ರಧಾನ ಆವಾಸ್ ಯೋಜನೆಯಡಿ 2016 ರಿಂದ 2020 ರವರೆಗೆ 5747 ಗುರಿ ಯಿದ್ದು ಆ ಪೈಕಿ 4855 ಮನೆಗಳು ಮುಕ್ತಾಯವಾಗಿದ್ದು ಇನ್ನೂ 892 ಮನೆಗಳು ಬಾಕಿ ಇದ್ದು ಇದಕ್ಕೆ ಪ್ರತ್ಯೇಕವಾದ ಸಭೆ ನಡೆಸಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕೆಂದು ಸೂಚಿಸಿದರು.

ಗದಗ ಜಿಲ್ಲೆಯು ತೋಟಗಾರಿಕೆಗೆ ಪೂರಕ ವಾತಾವರಣ ಹೊಂದಿದ್ದು ರೈತರು ಆದಾಯ ಹೆಚ್ಚಿಸುವುದರ ಬಗ್ಗೆ ಮನವರಿಕೆ ಮಾಡಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪ್ರೋತ್ಸಾಹಿಸಬೇಕು. ವರ್ಷದಿಂದ ವರ್ಷಕ್ಕೆ ತೊಟಗಾರಿಕೆ ವಿಸ್ತರಣೆಯಾಗುವಂತೆ ಕ್ರಮ ವಹಿಸಬೇಕು. ಜನೌಷದಿ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸಿ ಬಡ ಜನರಿಗೆ ಉಪಯೋಗ ಆಗಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ನಿರ್ದೇಶನ ನೀಡಿದರು.
 
ಇದಕ್ಕೆ ಉತ್ತರ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿಗಳು ಜಿಲ್ಲೆಯಲ್ಲಿರುವ ಎಲ್ಲಾ ಜನೌಷಧಿ ಕೇಂದ್ರಗಳು ಸಮರ್ಪಕವಾಗಿ ಕೆಲಸಮಾಡುತ್ತಿವೆ ಎಂದು ಸಭೆಗೆ ಮಾಹಿತಿ ನೀಡಿದರು.
ವಿಧಾಸ ಪರಿಷತ್ ಶಾಸಕ ಎಸ್.ವಿ.ಸಂಕನೂರ ಮಾತನಾಡಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಅನುಗುಣವಾಗಿ ಶಿಕ್ಷಕರು ಕಾರ್ಯನಿರ್ವಹಿಸಬೇಕು. ಶಿಕ್ಷಕರು ಕೊರತೆಯಿದ್ದ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಬೇಕು. ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು.

 
ಕೃಷಿ ಇಲಾಖೆ ಅಧಿಕಾರಿ ಮಾತನಾಡಿ ಜಿಲ್ಲೆಯಲ್ಲಿ ರೈತರಿಗೆ ವಿತರಿಸಲು ರಸಗೊಬ್ಬರ ಮತ್ತು ಬೀಜಗಳು ಸಮರ್ಪಕ ಪ್ರಮಾಣದಲ್ಲಿ ಲಭ್ಯ ವಿದ್ದು ಯಾವುದೇ ರೀತಿಯ ಕೊರತೆಯಿರುವುದಿಲ್ಲ ವೆಂದು ಸಭೆಗೆ ತಿಳಿಸಿದರು.

 
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಹೆಸ್ಕಾಂ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಪರಿಶಿಲನೆ ನಡೆಸಲಾಯಿತು.
 
ಈ ಸಂದರ್ಭದಲ್ಲಿ ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ. ಸಿ.ಇ ಓ ಭರತ್ ಎಸ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಲೇಖರಾಜ್ ಸೇರಿದಂತೆ ವಿವಿದ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಜಿ.ಪಂ. ಸಿಇಓ ಭರತ್ ಎಸ್ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಗದಗ : ನೀರಲಗಿ ಉಪ ಕೇಂದ್ರದಲ್ಲಿ ಡೆಂಗ್ಯು ವಿರೋಧಿ ಮಾಸಾಚರಣೆ ಗದಗ : ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ತ್ರಿಚಕ್ರ ವಾಹನ ವಿತರಣೆ ಗದಗ: ಬೇಸಾಯ ಕಾರ್ಯಕ್ರಮದಡಿ ಘಟಕಗಳ ನಿರ್ಮಾಣಕ್ಕೆ ಸಹಾಯಧನದಕ್ಕೆ ಅರ್ಜಿ ಆಹ್ವಾನ ಗದಗ : ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಟೇಲರ್ ಪಲ್ಟಿ ! ತಪ್ಪಿದ ಅನಾಹುತ !  ಗದಗ : ಶಿರಹಟ್ಟಿ ತಾಲೂಕಿನ ವಿವಿಧ ಕಾಮಗಾರಿಗೆ ಸಿ ಇ ಓ ಭೇಟಿ, ಪರಿಶೀಲನೆ ಗದಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿಲ್ಲಾ ಪ್ರವಾಸ ಗದಗ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಲೋಕಾಯುಕ್ತ ಬಲೆಗೆ ..! ಹುಬ್ಬಳ್ಳಿ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ - ಮೂವರು ಸ್ಥಳದಲ್ಲೇ ಸಾವು ! ಗದಗ : ಶಾಲಾ ಬಸ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ !