15.7 C
New York
Friday, May 9, 2025

Buy now

spot_img

Big Breaking : ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ವಿಧಿವಶ !

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ.

ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ ಅಭಿಮಾನಿಗಳು ಒಪ್ಪಿರಲಿಲ್ಲ.

ರತನ್‌ಟಾಟಾ ಅವರನ್ನು ಸೋಮವಾರ ಮಹಾರಾಷ್ಟ್ರದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಾರಂಭದಲ್ಲಿ ಅವರು ಸಾಮಾನ್ಯ ಆರೋಗ್ಯ ಪರೀಕ್ಷೆ ಒಳಪಟ್ಟಿದ್ದಾರೆ ಎಂದೇ ಹೇಳಲಾಗಿತ್ತು. ಅಲ್ಲದೇ ಅವರು ಸಹ ನಾನು ಆರೋಗ್ಯವಾಗಿಯೇ ಇದ್ದೇನೆ. ಚಿಂತಿಸಬೇಡಿ ಎಂದೇ ಹೇಳಿದ್ದರು. ಆದರೆ, ಅವರ ಆರೋಗ್ಯದ ಬಗ್ಗೆ ಅನುಮಾನಗಳು ಮೂಡಿದ್ದವು. ಅದರಂತೆ ಬುಧವಾರ ಸಂಜೆಯ ವೇಳೆಗೆ ಅವರ ಆರೋಗ್ಯ ಕ್ಷೀಣಿಸುತ್ತಿದೆ ಎನ್ನುವ ವರದಿಗಳು ಬರಲು ಪ್ರಾರಂಭಿಸಿತ್ತು. ಬುಧವಾರ ತಡರಾತ್ರಿ ಅವರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ. ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ ಅವರಿಗೆ 86 ವರ್ಷವಾಗಿತ್ತು. ಅವರು ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ ಗದಗ : ಭೋವಿ ಸಮಾಜದ ಹೆಮ್ಮೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಟಿ ಬಿಸನಳ್ಳಿ ಗೆ ಗೌರವ ಡಾಕ್ಟರೇಟ್ ಪದವಿ