ಹುಬ್ಬಳ್ಳಿ : ಸಂವಿಧಾನ ಬದ್ಧವಾಗಿರುವ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು ಈ ಹಿಂದೆ ಬಿಜೆಪಿ ರಾಜ್ಯ ಸರಕಾರ ರದ್ದುಗೊಳಿಸಿರುವುದು ಮತೀಯ ತಾರತಮ್ಯ ಮತ್ತು ಸಮುದಾಯವನ್ನು ಶೈಕ್ಷಣಿಕ ಹಕ್ಕುಗಳಿಂದ ವಂಚಿಸುವ ಪ್ರಯತ್ನವಾಗಿದೆ. ಮುಸ್ಲಿಮರ ಹಕ್ಕನ್ನು ಕಸಿದು ಒಕ್ಕಲಿಗ ಮತ್ತು ಲಿಂಗಾಯಿತ ಸಮುದಾಯಗಳಿಗೆ ಹಂಚಿರುವುದು ಅನ್ಯಾಯದ ಪರಮಾವಧಿಯಾಗಿದೆ. ಇವಾಗ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತದಲ್ಲಿ ಇದ್ದು ತಕ್ಷಣ ಮುಸ್ಲಿಂ ಸಮುದಾಯದ ಮೀಸಲಾತಿಯನ್ನು ಮರು ಸ್ಥಾಪಿಸ ಬೇಕು
ಇವಾಗ ರಾಜ್ಯದಲ್ಲಿ ನುಡಿದಂತೆ ನಡೆಯುವ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಇದ್ದು ಮುಸ್ಲಿಂ ಸಮುದಾಯಕ್ಕೆ ಶೇಕಡಾ 4 ರಷ್ಟು ಮೀಸಲಾತಿಯನ್ನು ಮುಂದುವರೆಸುವಂತೆ ಕರ್ನಾಟಕ ಮುಸ್ಲಿಂ ಯುನಿಟಿ ಸದಸ್ಯ ಸಲೀಮ್ ಸಂಗನಮುಲ್ಲಾ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ .
ಪತ್ರಿಕಾ ಹೇಳಿಕೆ ನೀಡಿರುವ ಅವರು , ಚುನಾವಣೆಗೂ ಮುನ್ನ ಕಾಂಗ್ರೇಸ್ ಹೇಳಿದಂತೆ ನಡೆದುಕೊಳ್ಳಬೇಕು ಎಂದಿರುವ ಸಲೀಮ್ ಸಂಗನಮುಲ್ಲಾ ಬೆಳಗಾವಿ ಅಧಿವೇಶನದ ಒಳಗೆ ಮೀಸಲಾತಿ ಕಲ್ಪಿಸದೆ ಇದ್ದರೆ , ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.