ಅಣ್ಣಿಗೇರಿ/ಗದಗ : ಸಿಮೆಂಟ್ ಲಾರಿ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರನೊಬ್ಬ ಸ್ಥಳದಲ್ಲೇ ಸಾವನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆಗೆ ಸಂಭವಿಸಿದೆ
ಸಿಮೆಂಟ್ ಲಾರಿ ಹುಬ್ಬಳ್ಳಿಯಿಂದ ಅಣ್ಣಿಗೇರಿ ಪಟ್ಟಣದ ಒಳ ರಸ್ತೆ ಹೋಗುವ ತಿರುವಿನಲ್ಲಿ (ಹೊಸಪೇಟೆ ಓಣಿ) 67 ರ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಪರಿಣಾಮ ಗದಗ ಜಿಲ್ಲೆಯ ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದ ನಿವಾಸಿ ಗೂಳಪ್ಪ ತಂದೆ ಉಮೇಶಪ್ಪ ಉಮ್ಮಣ್ಣವರ ವಯಾ (38) ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಎಂದು ತಿಳಿದು ಬಂದಿದೆ. ಅಂತ್ಯಸಂಸ್ಕಾರ ಮುಗಿಸಿಕೊಂಡು ಅಡವಿಸೋಮಾಪೂರ ಗೆ ಬರುವಾಗ ಈ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ತಾಯಿ , ಹೆಂಡತಿ ಇಬ್ಬರಿಗೆ.ಗಂಬೀರ ಗಾಯಗಳಾಗಿವೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.ಈ ಕುರಿತು ಅಣ್ಣಿಗೇರಿ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.