13.6 C
New York
Thursday, May 29, 2025

Buy now

spot_img

ಗದಗ : ಐದು ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ ಸರ್ಕಾರವಾಗಿದೆ : ಮುಖ್ಯಮಂತ್ರಿ ಸಿದ್ಧರಾಮಯ್ಯ

ಗದಗ ಡಿ.15 : ರಾಜ್ಯದ ಜನರ ಆಶೀರ್ವಾದದಿಂದ ಎರಡನೇ ಬಾರಿ ಮುಖ್ಯ ಮಂತ್ರಿಯಾಗುವ ಅವಕಾಶ ದೊರಕಿದೆ. ಜನರಿಗೆ ನೀಡಿದ‌ ಐದು ಗ್ಯಾರಂಟಿಗಳ‌ ಭರವಸೆಗಳನ್ನು ಕೊಟ್ಟ ಮಾತಂತೆ ನೆರವೇರಿಸುವುದರ ಮೂಲಕ ಅರ್ಹ ಫಲಾನುಭವಿಗಳಿಗೆ ದೊರಕಿಸುವದರ‌ ಮೂಲಕ ನುಡಿದಂತೆ ನಡೆದ‌‌‌ ಸರ್ಕಾರ ನಮ್ಮ‌ ಸರ್ಕಾರವಾಗಿದೆ ಎಂದು ಮುಖ್ಯಮಂತ್ರಿಗಳಾದ ಎಸ್. ಸಿದ್ದರಾಮಯ್ಯ ಅವರು ನುಡಿದರು.

ಗದಗ ತಾಲೂಕಿನ ಸುಕ್ಷೇತ್ರ ಹರ್ಲಾಪುರ ಗ್ರಾಮದಲ್ಲಿ ಡಿ.15 (ಭಾನುವಾರ) ಶ್ರೀ ಬೀರಲಿಂಗೇಶ್ವರ ಹಾಗೂ ಶ್ರೀ ಮಾಳಿಂಗರಾಯ ಮೂರ್ತಿ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಉದ್ಘಾಟಿಸಿ ಅವರು ಮಾತನಾಡಿದರು.

ಬಡವರು ಯಾರೂ ಕೂಡ ಇನ್ನೊಬ್ಬರಲ್ಲಿ‌‌ ಕೈ ಒಡ್ಡದಂತೆ, ಯಾರೂ ಹಸಿವಿನಿಂದ ಮಲಗಬಾರದು ಎನ್ನುವ ಉದ್ದೇಶದಿಂದ‌ ಅನ್ನ‌ಭಾಗ್ಯ ಯೋಜನೆ‌ ಜಾರಿಗೊಳಿಸಲಾಗಿದೆ. ಒಂದು ಕೋಟಿಗೂ ಅಧಿಕ ಮಹಿಳೆಯರು ಗೃಹ ಲಕ್ಮ್ಷೀ ಯೋಜನೆಯಲ್ಲಿ ಪ್ರತಿ ಮಾಹೆ ಎರಡು ಸಾವಿರ ರೂ ಗಳನ್ನು ಪಡೆಯುತ್ತಿದ್ದಾರೆ ಎಂದರು.

ಎಳೂವರೆ ಕೋಟಿ‌ ಜನರಲ್ಳಿ‌ ನಾಲ್ಕು ವರೆ ಕೋಟಿ ಜನರಿಗೆ ಈ ಸೌಲಭ್ಯಗಳನ್ನು ಒದಗಿಸುವದರ ಮೂಲಕ ಸಮಾಜದಲ್ಲಿ ಸಮಾನತೆ ತರಲು ಪ್ರಯತ್ನಿಸಲಾಗುತ್ತಿದೆ.

ಬಹು ದಿನಗಳ ನಂತರ ತಮ್ಮ ಗ್ರಾಮಕ್ಕೆ‌ಆಗಮಿಸಿರುತ್ತೇನೆ, 1991 ರಲ್ಲಿ‌ ಕೊಪ್ಪಳ ಲೋಕಸಭಾ ಸ್ಪಧಿಸಿದ ಸಮಯದಲ್ಲಿ ಹರ್ಲಾಪುರ ಹಾಗೂ ಮುಂಡರಗಿ‌ಜನ ಆಶೀರ್ವಾದ ಮಾಡಿದ್ದರು. ಇದನ್ನು ಮರೆಯಲು ಸಾಧ್ಯವಿಲ್ಲ.

ಅಖಂಡ ಧಾರವಾಡ ಜಿಲ್ಲೆ ಮೂರು‌ ಜಿಲ್ಲೆಗಳಾಗಿ ವಿಂಗಡನೆಯಾದಾಗಾ ಮುಂಡರಗಿ ಲೋಕಸಭಾ ಕ್ಷೇತ್ರವು ಕೊಪ್ಪಳ ಲೋಕಸಭಾ ಮತಕ್ಷೇತ್ರಕ್ಕೆ ಸೇರುತ್ತಿತ್ತು. ಆ ಸಮಯದಲ್ಲಿ ನನಗೆ ಮತ ನೀಡಿ ಆಶೀರ್ವದಿಸಿದ್ದನ್ನು ಸದಾ ಸ್ಮರಿಸುತ್ತೇನೆ ಎಂದರು.

ಅನಾದಿ ಕಾಲದಿಂದಲೂ ಜನ ದೇವಸ್ಥಾನ ನಿರ್ಮಿಸಿ ಮೂರ್ತಿ‌ ಪ್ರತಿಷ್ಠಾಪಿಸಿ ಪೂಜೆ ಮಾಡುವ ಸಂಸ್ಕೃತಿ ರೂಡಿಯಲ್ಲಿದೆ. ದೇವರನ್ನು ಭಕ್ತಿಯಿಂದ‌ ಪೂಜೆ ಮಾಡಿದರೆ ದೇವರು ನಮಗೆ ವರ ನೀಡುವದರ ಮೂಲಕ ನಮ್ಮ‌ಕಷ್ಟ ಕಾರ್ಪಣ್ಯಗಳು ದೂರಾಗುತ್ತವೆ ಎಂಬ ನಂಬಿಕೆ ಜನರಲ್ಲಿದೆ.

ಉಳ್ಳವರು ದೇವಾಲಯ ಮಾಡುವರು, ನಾನೇನು ಮಾಡಲಿ ನಾನು ಬಡವನ್ನಯ್ಯ, ಕಾಲೇ ಕಂಬಗಳು, ಶಿರವೇ ಹೊನ್ನ ಕಳಶವಯ್ಯ ಎಂಬ ಬಸವಣ್ಣನವರ ವಚನವನ್ನು ಸ್ಮರಿಸಿದರು.‌

ದೇವರು ಸರ್ವವ್ಯಾಪಿಯಾಗಿದ್ದು ನಮ್ಮ, ಬದುಕು, ನಡುವಳಿಕೆಯಲ್ಲಿ ಇನ್ನೊಬ್ಬರಿಗೆ ಅನ್ಯಾಯ, ಕೆಟ್ಟದನ್ನು ಮಾಡಬಾರದು. ಈ ಗ್ರಾಮ‌ ಭಾವಕೈತ್ಯೆಯಿಂದ,‌ ಸೌಹಾರ್ದತೆಯಿಂದ‌ ಬದುಕುತ್ತಿರುವದು ಶ್ಲಾಘನೀಯ. ಇದೇ ರೀತಿ ಇಡೀ ದೇಶದಲ್ಲಿ ಪ್ರತಿಯೊಬ್ಬರು ಬದುಕ ಬೇಕು.  

ಯಾವುದೇ ಧರ್ಮವು ಪ್ರೀತಿ ಮಾಡು ಅಂತ ಹೇಳುತ್ತದೆ ಹೊರತು ಪರಸ್ಪರ ದ್ವೇಷ ಮಾಡುವಂತೆ ಹೇಳುವುದಿಲ್ಲ. ಧರ್ಮದ ಪ್ರಕಾರ ಪ್ರತಿಯೊಬ್ಬರೂ ಮನುಷ್ಯರಂತೆ‌ ಬದುಕಬೇಕು ಹೊರತು ಮೃಗಗಳಂತೆ ಜೀವಿಸಬಾರದು.ಬೇರೆಯವರ ಮೇಲೆ ದಯೆ ತೋರುವಂತಹ ಲಕ್ಷಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು‌ ಮುಖ್ಯಮಂತ್ರಿಗಳಾದ‌ ಸಿದ್ಧರಾಮಯ್ಯನವರು ತಿಳಿಸಿದರು.

ಉಪಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು‌ ಮಾತನಾಡಿ ಭಕ್ತನಿಗೂ‌ ದೇವರಿಗೆ ವ್ಯವಹಾರ ಮಾಡುವಂತಹ ಸ್ಥಳ ದೇವಸ್ಥಾನವಾಗಿದೆ. ನಮ್ಮೆಲ್ಲರ ಜೀವನ ಸುಖಕರವಾಗಿರಲು, ಭೀರಲಿಂಗೇಶ್ವರನ‌ ಕೃಪೆ ತಮ್ಮೆಲ್ಲರ ಮೇಲೆ ಇರಲಿ ಎಂದು ಉಪಮುಖ್ಯ ಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಪ್ರಾರ್ಥಿಸಿದರು.

 ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಮಾತನಾಡಿ ಕೆ.ಎಚ್.ಪಾಟೀಲ ಅವರು‌ ಮಾತನಾಡಿ ಗ್ರಾಮೀಣ ಭಾಗದ ಜನರ ಬಡತನವನ್ನು ಬೇರು ಸಹಿತ ಕಿತ್ತೊಗೆದ ಮಹಾನ ವ್ಯಕ್ತಿ ನಮ್ಮ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರಾಗಿದ್ದಾರೆ. ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯವನ್ನಾಗಿಸುವ ಕನಸನ್ನು ನನಸಾಗಿರಿಸುವ ಮಹಾನ ವ್ಯಕ್ತಿಯಾಗಿದ್ದಾರೆ.

ಈ ಭಾಗದಲ್ಲಿ‌ ಶಾಸಕರಾದ ಜಿ.ಎಸ್.ಪಾಟೀಲ ಅವರು ಅನೇಕ‌ ರಚನಾತ್ಮಕ ಕಾರ್ಯಗಳು ಆಗುತ್ತಿವೆ. ಸಿಂಗಟಾಲೂರ ಏತನೀರಾವರಿ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮಾನ್ಯ ಉಪ ಮುಖ್ಯಂಮತ್ರಿಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಮನವಿ‌ ಮಾಡಿದರು.

ಕರ್ನಾಟಕ ಖನಿಜ ಅಭಿವೃಧ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ್ ಅವರು ಪ್ರಾಸ್ತಾವಿಕವಾಗಿ ಮಾತಾನಾಡಿ ಸರ್ವರನ್ನು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಮಾಜಿ‌‌ ಶಾಸಕರಾದ ಡಿ.ಆರ್.ಪಾಟೀಲ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಲ್ಲಾಭಕ್ಷ ಬಾಬರ್ಚಿ, ಮಾಜಿ ಜಿಲ್ಲಾ‌ಪಂಚಾಯತ ಅಧ್ಯಕ್ಷರುಗಳಾದ ವಾಸಣ್ಣ ಕುರಡಗಿ, ಸಿದ್ದು ಪಾಟೀಲ, ಕೃಷ್ಣಗೌಡ ಪಾಟೀಲ, ಫಕಿರಪ್ಫ ಹೆಬಸೂರ, ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಸಮಾಜದ ಮುಖಂಡರು, ಗಣ್ಯರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಶಾಲಾ ಬಸ್ ಪಲ್ಟಿ : ಚಾಲಕನಿಗೆ ಗಂಭೀರ ಗಾಯ ! ಗದಗ  :  ಜಿಲ್ಲೆಗೆ ನೂತನ DYSP ಯಾಗಿ  ಮುರ್ತುಜಾ ಖಾದ್ರಿ ನೇಮಕ ಗದಗ : ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು, ಲವರ್ ಜೊತೆ ಸೇರಿ ಗಂಡನನ್ನೇ ಕೊಂದ ಹೆಂಡತಿ ! ಗದಗ : SSLC' ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ.! ಗದಗ : ಬಾವಿಯಲ್ಲಿ ಶವವಾಗಿ ಪತ್ತೆಯಾದ ವ್ಯಕ್ತಿ ! ಗದಗ : ವಾಕರಸಾ ಸಂಸ್ಥೆಯಿಂದ ನಮ್ಮ ಬಸ್ ನಿಲ್ದಾಣ, ಸ್ವಚ್ಛ ನಿಲ್ದಾಣ ಸಾರ್ವಜನಿಕರ ಅಭಿಪ್ರಾಯ ಕಾರ್ಯಕ್ರಮ “ಅಮೃತ-ಸುರಭಿ ಯೋಜನೆ” ಹೈನೋದ್ಯಮದ ಅಭಿವೃದ್ಧಿಗೆ ಹೊಸ ಆಶಾಕಿರಣ ಗದಗ  : ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಣುಕು ಪ್ರದರ್ಶನ ಸಹಕಾರಿ ಗದಗ : ಆನ್‌ಲೈನ್ ಮೂಲಕ ಐ.ಟಿ.ಐ ಪ್ರವೇಶಕ್ಕೆ ಅರ್ಜಿ ಆಹ್ವಾನ ಗದಗ : ಗಂಜೇಂದ್ರಗಡದಲ್ಲಿ  ಬೀದಿನಾಯಿಗಳ ದಾಳಿಗೆ  ಮಹಿಳೆ ಸಾವು.!