14.4 C
New York
Friday, May 9, 2025

Buy now

spot_img

ರೋಣ : ಮೆಣಸಗಿ ವಸತಿ ನಿಲಯದ ವಿಧ್ಯಾರ್ಥಿಗಳಿಗೆ ಪಾಠ ಮಾಡಿದ ತಾಪಂ ಇಓ ..

ರೋಣ :- ಶಿಕ್ಷಣ ಕಲಿಯುವಾಗಲೇ ವಿಧ್ಯಾರ್ಥಿಗಳು ದೊಡ್ಡ ಮಟ್ಟದ ಕನಸು ಕಾಣಬೇಕು, ಆ ಕನಸ್ಸನ್ನು ನನಸು ಮಾಡಿಕೊಳ್ಳಲು ನಿರಂತರವಾದ ಪರಿಶ್ರಮದ ಜೊತೆಗೆ ಅಭ್ಯಾಸ ಮುಖ್ಯ ವಾಗುತ್ತದೆ, ಆ ಅಭ್ಯಾಸವನ್ನು ನೀವು ಮುಂದುವರಿಸಿದ್ದಾದಲ್ಲಿ ನಿಮಗೆ ಯಶಸ್ಸು ಖಂಡಿತವಾಗಿ ದೊರಕುತ್ತದೆ ಅಂತಾ ತಾಲೂಕ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ ಕಂದಕೂರ ಹೇಳಿದರು..

ತಾಲೂಕಿನ ಮೆಣಸಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಅನುಷ್ಠಾನಗೊಂಡಿರುವ ವಿವಿಧ ಕಾಮಗಾರಿಗಳ ಕಡತ ಹಾಗೂ ಸ್ಥಳ ಪರಿಶೀಲನೆ ನಡೆಸಿದ ಬಳಿಕ ರಾತ್ರಿ 8 ಘಂಟೆ ಸಮಯದಲ್ಲಿ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿ ನಿಲಯಕ್ಕೆ ಭೇಟಿ ನೀಡಿದ ಅವರು ವಸತಿಯಲ್ಲಿನ ಕುಂದು ಕೊರತೆ ಸೇರಿದಂತೆ ಊಟದ ಗುಣಮಟ್ಟದ ಕುರಿತು ವಿಧ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು..

ವಸತಿ ನಿಲಯದ ಮಕ್ಕಳಿಗೆ ಒಂದು ಘಂಟೆಗಳ ಕಾಲ ಗಣಿತ ವಿಷಯದ ಕುರಿತು ಕ್ಲಾಸ್ ತೆಗೆದುಕೊಂಡು ವಿಧ್ಯಾರ್ಥಿಗಳಿಗೆ ಪಾಠ ಮಾಡಿದರು. ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಎದುರಿಸಬೇಕಾದ ಸಮಯ, ವಿಷಯಗಳ ಆಯ್ಕೆ, ಯಾವ ದಿನ ಪತ್ರಿಕೆಗಳಲ್ಲಿ ಯಾವ ವಿಷಯವನ್ನು ಹೆಚ್ಚು ಅಭ್ಯಾಸ ಮಾಡಬೇಕು, ಮುಂಜಾನೆ ಎಷ್ಟು ಘಂಟೆಗೆ ಅಭ್ಯಾಸ ಪ್ರಾರಂಭಿಸಬೇಕು, ಹೀಗೆ ಹಲವಾರು ವಿಷಯಗಳ ಕುರಿತು ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು ಕಲಿಕೆಯಲ್ಲಿ ಹೆಚ್ಚು ತೊಡಗಿಸಕೊಳ್ಳಲು ಸಲಹೆ ನೀಡಿದರು. ತದನಂತರ ವಿದ್ಯಾರ್ಥಿಗಳೊಂದಿಗೆ ಸರತಿ ಸಾಲಿನಲ್ಲಿ ಕುಳಿತು ಉಟ ಮಾಡಿದ ಅವರು ವಸತಿ ನಿಲಯದ ಮೇಲ್ವಿಚಾರಕರಿಗೆ ಉತ್ತಮ ಗುಣಮಟ್ಟದ ಆಹಾರವನ್ನು ಮಕ್ಕಳಿಗೆ ನೀಡಲು ಸೂಚಿಸಿದರು. ವಸತಿ ನಿಲಯದ ಹೊಸ ಕಟ್ಟಡ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಿ ಚೆಕ್ಕಬಂದಿ ಮತ್ತು ಉತಾರ ನೀಡಲು ಪಿ.ಡಿ.ಓ ರವರಿಗೆ ಸೂಚಿಸಿದರು..

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು,,DEO,TC,TAE ಮತ್ತು ಗ್ರಾ.ಪಂ‌.ಅಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿಗಳು ಹಾಜರಿದ್ದರು…

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ