15.7 C
New York
Friday, May 9, 2025

Buy now

spot_img

ಗದಗ : ನಾಳೆ ಗದಗ ಬಂದ್ ಗೆ ಕರೆ…!

ಗದಗ : ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು ಸಂಸತ್ ಕಲಾಪದಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕ‌ರ್ ಅವರ ಕುರಿತು ಅವಹೇಳನಕಾರಿ ಮಾತುಗಳನ್ನು ಖಂಡಿಸಿ ಗದುಗಿನ ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಮಂಗಳವಾರ 24 ರಂದು ಗದಗ ಬಂದ್ ಗೆ ಕರೆ ನೀಡಲಾಗಿದೆ.

ಅಮೀತ್ ಶಾ ಅವರ ಅಂಬೇಡ್ಕರ್ ಕುರಿತ ಹೇಳಿಕೆ ಇಡೀ ದೇಶದ ದಲಿತರ ಹಾಗೂ ಪ್ರಗತಿಪರರ ಭಾವನೆಗಳಿಗೆ ಧಕ್ಕೆಯಾಗಿದೆ.ಇದನ್ನು ಖಂಡಿಸಿ ಇದೇ 24 ಮಂಗಳವಾರದಂದು ಗದಗ ಬಂದ್ ಗೆ ಕರೆ ಕೊಟ್ಟಿದ್ದು ಈ ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದಾರೆ.

ಬಸ್‌ ಸಂಚಾರದಲ್ಲಿ ಬದಲಾವಣೆ : ಗದಗ ಬಂದ್ ಹಿನ್ನಲೆಯಲ್ಲಿ ಮಂಗಳವಾರ ಬೆಳಿಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಸಾರಿಗೆ ಬಸ್‌ಗಳ ಸಂಚಾರದಲ್ಲಿ ಬದಲಾವಣೆ ಮಾಡಿ ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ಸಂಚರಿಸುವ ಮುಂಡರಗಿ- ಕೊಪ್ಪಳ ಮಾರ್ಗದ ಬಸ್‌ಗಳು ಮುಖ್ಯ ಬಸ್ ನಿಲ್ದಾಣಕ್ಕೆ ಬರದೇ ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜಿನವರೆಗೆ ಸಂಚರಿಸಲಿವೆ.

ರೋಣ, ಗಜೇಂದ್ರಗಡದಿಂದ ಗದಗಕ್ಕೆ ಬರುವ ಬಸ್‌ಗಳು ಬೆಟಗೇರಿ ಬಸ್‌ ನಿಲ್ದಾಣದವರೆಗೆ ಕಾರ್ಯಾಚರಿಸಲಿವೆ.

ಹುಬ್ಬಳ್ಳಿ, ಅಣ್ಣಿಗೇರಿಯಿಂದ ಗದಗಕ್ಕೆ ಬರುವ ಬಸ್‌ಗಳು ಕೆಇಬಿ ಕ್ರಾಸ್‌ವರೆಗೆ, ಲಕ್ಷ್ಮೀಶ್ವರ, ಶಿರಹಟ್ಟಿಯಿಂದ ಗದಗಕ್ಕೆ ಬರುವ ಬಸ್‌ಗಳು ದೋಭಿ ಘಾಟ್‌ವರೆಗೆ, ಹೊಂಬಳದಿಂದ ಗದಗಕ್ಕೆ ಬರುವ ಬಸ್‌ಗಳು ಹೊಂಬಳ ನಾಕಾವರೆಗೆ ಮತ್ತು ಸವಡಿ ಮತ್ತು ಹುಯಿಲಗೋಳದಿಂದ ಗದಗಕ್ಕೆ ಬರುವ ಬಸ್‌ಗಳು ರಾಣಾ ಪ್ರತಾಪ್ ಶಾಲೆವರೆಗೆ ಸಂಚರಿಸಲಿವೆ.

ಡಿ. 24ರಂದು ಮಂಗಳವಾರ ಬೆಳಿಗ್ಗೆ 6 ರಿಂದ ಬಂದ್‌ ಆರಂಭವಾಗಲಿದ್ದು, ಗಾಂಧಿ ಸರ್ಕಲ್‌ನಲ್ಲಿ ಬೆಳಿಗ್ಗೆ 11ಕ್ಕೆ ಬಹಿರಂಗ ಸಭೆ ಇರಲಿದೆ. ಅಂಗಡಿ ಮುಂಗಟ್ಟು ಮುಚ್ಚಲು ಒತ್ತಡವಿಲ್ಲ. ಸ್ವ ಇಚ್ಛೆಯಿಂದ ಬಂದ್‌ಗೆ ಸಹಕರಿಸಲಿ.

-ಶರೀಫ ಬಿಳೆಯಲಿ, ದ.ಸಂ.ಸ. ಮುಖಂಡ

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ ಗದಗ : ಭೋವಿ ಸಮಾಜದ ಹೆಮ್ಮೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಟಿ ಬಿಸನಳ್ಳಿ ಗೆ ಗೌರವ ಡಾಕ್ಟರೇಟ್ ಪದವಿ