ಗದಗ ಜ.8 : ಗದಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಸಿ . ಎನ್ ಶ್ರೀಧರ್ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಗದಗ ಜಿಲ್ಲಾಧಿಕಾರಿಯಾಗಿದ್ದ ಗೋವಿಂದ ರೆಡ್ಡಿಯವರನ್ನು ವರ್ಗಾಯಿಸಿ ಅವರ ಜಾಗಕ್ಕೆ ಹೊಸ ಜಿಲ್ಲಾಧಿಕಾರಿಯನ್ನಾಗಿ ಸಿ ಎನ್.ಶ್ರೀಧರ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆನ್ನಲ್ಲೇ ಇಂದು
ಗದಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿ ಎನ್ ಶ್ರೀಧರ್ ಅವರು ಅಧಿಕಾರ ಸ್ವೀಕರಿಸಿದರು. ಸರ್ಕಾರದ ಆದೇಶದ್ವನಯ ಬುಧವಾರ ಅಪರಾಹ್ನ ಐಎಎಸ್ ಅಧಿಕಾರಿ ಗೋವಿಂದರೆಡ್ಡಿ ಅವರಿಂದ ಗದಗ ಜಿಲ್ಲಾಧಿಕಾರಿ ಹುದ್ದೆಯ ಅಧಿಕಾರವನ್ನು ಹೂಗುಚ್ಛ ನೀಡುವ ಮೂಲಕ ಐಎಎಸ್ ಅಧಿಕಾರಿ ಸಿ ಎನ್ ಶ್ರೀಧರ ಅವರಿಗೆ ಅಧಿಕಾರ ಹಸ್ತಾತರವನ್ನು ಮಾಡಿದರು.