15.7 C
New York
Friday, May 9, 2025

Buy now

spot_img

ಗದಗ : ಯಶಸ್ವಿನಿ ಯೋಜನೆಯಡಿ ಸದಸ್ಯರನ್ನು ನೊಂದಾಯಿಸಲು ಅವಕಾಶ

ಗದಗ ಜನೆವರಿ 21: ಸರ್ಕಾರವು 2024-25 ನೇ ಸಾಲಿಗೆ ಸಹಕಾರ ಇಲಾಖೆಯಿಂದ ಯಶಸ್ವೀನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಿ ಆದೇಶೀಸಿರುತ್ತದೆ. ಯಶಸ್ವಿನಿ ಯೋಜನೆಯಡಿಯಲ್ಲಿ ಸದಸ್ಯರನ್ನು ಹೊಸದಾಗಿ ನೊಂದಾಯಿಸಲು ಮತ್ತು ಕಳೆದ ಸಾಲಿನಲ್ಲಿ ನೊಂದಾಯಿಸಿದ ಸದಸ್ಯರನ್ನು ನವೀಕರಿಸಲು ಅವಕಾಶವಿದ್ದು ದಿನಾಂಕ: 01-12-2024 ರಿಂದ 31-01-2025 ರವರೆಗೆ ಅವಧಿ ಇರುತ್ತದೆ. ಕಾರಣ ಸಹಕಾರ ಸಂಘ/ಸೌಹಾರ್ದ ಸಹಕಾರಿಗಳು/ಸಹಕಾರ ಬ್ಯಾಂಕುಗಳು ಮತ್ತು ಗ್ರಾಮೀಣ ಸ್ವ-ಸಹಾಯ ಗುಂಪುಗಳಲ್ಲಿರುವ ಸದಸ್ಯರು ಕನಿಷ್ಠ 03 ತಿಂಗಳುಗಳ ಮುಂಚೆ ಸದಸ್ಯತ್ವವನ್ನು ಹೊಂದಿರಬೇಕು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಸದಸ್ಯರಿಗೆ ನೊಂದಾಯಿಸಲು ಉಚಿತವಾಗಿರುತ್ತದೆ.

 ಕೂಡಲೇ ಯಶಸ್ವಿನಿ ಯೋಜನೆಯಡಿಯಲ್ಲಿ ಹೊಸದಾಗಿ ನೊಂದಾಯಿಸಲು ಮತ್ತು ಕಳೆದ ಸಾಲಿನಲ್ಲಿ ಈ ಯೋಜನೆಯಡಿ ನೊಂದಾಯಿಸಿದ್ದ ಸದಸ್ಯರನ್ನು ನವೀಕರಿಸಿ ಸದರಿ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುವದು. ಹೆಚ್ಚಿನ ಮಾಹಿತಿಗಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ-125 ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಎ.ಪಿ.ಎಂ.ಸಿ. ಯಾರ್ಡ, ಎಸ್.ಬಿ.ಆಯ್ ಮುಖ್ಯ ಶಾಖೆ ಎದುರಿಗೆ, ಗದಗ ದೂರವಾಣಿ ಸಂಖ್ಯೆ-08372-238598, ಹಾಗೂ ತಾಲೂಕಾ ಸಹಕಾರ ಅಭಿವೃದ್ದಿ ಅಧಿಕಾರಿ, ನರಗುಂದ-8660099227, ಶಿರಹಟ್ಟಿ-9739247088, ರೋಣ-9538198110, ಮುಂಡರಗಿ-8088386791, ಗದಗ-9945187724 ಇವರನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ ಗದಗ : ಭೋವಿ ಸಮಾಜದ ಹೆಮ್ಮೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಟಿ ಬಿಸನಳ್ಳಿ ಗೆ ಗೌರವ ಡಾಕ್ಟರೇಟ್ ಪದವಿ