21.5 C
New York
Tuesday, September 16, 2025

Buy now

spot_img

ಗದಗ : ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಸಹಕಾರಿ

ಗದಗ ಜನೆವರಿ 25 : ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ತಿಳಿಸಿದರು.

ಗದಗ ಬೆಟಗೇರಿಯ ಲೊಯೊಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆವರಣದಲ್ಲಿ ಶನಿವಾರ ಗದಗ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಮಾನಸಿಕ, ದೈಹಿಕ ಹಾಗೂ ಭಾವನಾತ್ಮಕ ಬೆಳವಣಿಗೆಗೆ ಸರ್ಕಾರದಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಪ್ರತಿಭಾ ಕಾರಂಜಿಯೂ ಸಹ ಒಂದು ಮಹತ್ವದ ಕಾರ್ಯಕ್ರಮವಾಗಿದ್ದು ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ತಿಳಿದುಕೊಂಡು ಅದನ್ನು ಪ್ರೋತ್ಸಾಹಿಸಿ ಬೆಳೆಸುವುದು ಅವಶ್ಯಕವಾಗಿದೆ. ಮಕ್ಕಳು ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಉದಾಸೀನ ಮನೋಭಾವನೆ ಹೊಂದದೇ ಉತ್ಸಾಹದಿಂದ ಮುನ್ನುಗ್ಗಬೇಕು ಕರೆ ನೀಡಿದರು.

 ಸ್ವಾಮಿ ವಿವೇಕಾನಂದರು ಹೇಳಿದಂತೆ ದೇವರು ಪ್ರತಿಯೊಬ್ಬರಿಗೂ ಒಂದೊAದು ತರಹ ಶಕ್ತಿ ಸಾಮರ್ಥ್ಯ ಕೊಟ್ಟಿರುತ್ತಾನೆ. ಆ ಸಾಮರ್ಥ್ಯದಿಂದ ಜೀವನದಲ್ಲಿ ನಾವು ಏನನ್ನಾದರೂ ಸಾಧಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು. ಸಂಗೀತ ಕ್ಷೇತ್ರಕ್ಕೆ ಗದಗ ಜಿಲ್ಲೆಯ ಕೊಡುಗೆ ಅಪಾರವಾಗಿದ್ದು, ಡಾ. ಭೀಮಸೇನ ಜೋಶಿ, ವೀರೇಶ್ವರ ಪುಣ್ಯಾಶ್ರಮದ ಪಂಡಿತ ಪುಟ್ಟರಾಜ ಗವಾಯಿಗಳು ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲೆಯ ರಾಜು ಬಗಾಡೆ, ಸುನೀಲ ಜೋಶಿ ಹೀಗೆ ಅನೇಕರು ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿಜೇತರಾದವರು ರಾಜ್ಯ ಮಟ್ಟದಲ್ಲಿ ಪಾಲ್ಗೊಂಡು ಗದಗ ಜಿಲ್ಲೆಗೆ ಕೀರ್ತಿ ತಂದುಕೊಡಬೇಕು ಎಂದು ಶಾಸಕ ಎಸ್.ವಿ.ಸಂಕನೂರ ಮಕ್ಕಳನ್ನು ಹುರಿದುಂಬಿಸಿದರು.

ತಾಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ಕೃಷ್ಣಗೌಡ ಎಚ್. ಪಾಟೀಲ ಮಾತನಾಡಿ ಮಕ್ಕಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮನೋಭಾವನೆ ಹೊಂದಬೇಕು. ಮಕ್ಕಳಲ್ಲಿ ಹುದುಗಿರುವ ಕಲೆಗಳನ್ನು ಪ್ರೋತ್ಸಾಹಿಸುವುದು ಪಾಲಕರ ಹಾಗೂ ಶಿಕ್ಷಕರ ಕರ್ತವ್ಯವಾಗಿದೆ. ಜಿಲ್ಲೆಯ ಮಕ್ಕಳು ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾಜ್ಯ ಮಟ್ಟದಲ್ಲಿಯೂ ಸಹ ಗದಗ ಜಿಲ್ಲೆಯ ಕೀರ್ತಿ ತರಬೇಕೆಂದು ಮಕ್ಕಳಿಗೆ ಪ್ರೋತ್ಸಾಹಕ ನುಡಿಗಳನ್ನಾಡಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರಡಿ ಪ್ರಾಸ್ತಾವಿಕವಾಗಿ ಮಾತನಾಡಿ ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಗುರುತಿಸುವುದು, ಕಲೆಯನ್ನು ಪ್ರೋತ್ಸಾಹಿಸುವುದು ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ದೇಶವಾಗಿದೆ. ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಲೋಯಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರುಗಳಾದ ಸಿಸ್ಟರ್ ಬೆಂಗೆರಾ ಬಿ.ಎಸ್, ಸಿಸ್ಟರ್ ಪಿಂಟೋ, ಶಿಕ್ಷಣಾಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷರಾದ ಜಿ.ಎಲ್. ಬಾರಾಟಕ್ಕೆ, ಬಿ.ಎಫ್. ಪೂಜಾರ, ವಿ.ಎಂ. ಹಿರೇಮಠ, ಎಂ.ಕೆ. ಲಮಾಣಿ, ವಿಜಯ ಕಿರೇಸೂರ, ಶಿವಾನಂದ ಗಿಡ್ನಂದಿ, ಬಿ.ಕೆ.ನಿಂಬನಗೌಡ್ರ , ವಸಂತ ಕಲಕಂಬಿ , ರವಿ ಕೋಟಿಯವರ, ಆರ್.ಎಂ. ಶಿರಹಟ್ಟಿ, ಹಾಲನಗೌಡ ಪಾಟೀಲ, ಎಂ.ಎಸ್. ಕುಚಬಾಳ, ರಾಜು ಚೌವ್ಹಾಣ, ಸರಸ್ವತಿ ಡಿ ಕನವಳ್ಳಿ , ವಿವಿಧ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.ಶಿಕ್ಷಣ ಇಲಾಖೆಯ ಎಂ.ಎ. ಯರಗುಡಿ ಕಾರ್ಯಕ್ರಮ ನಿರೂಪಿಸಿದರು. ಎಂ.ಎಚ್.ಕAಬಳಿ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರ ಸ್ಪಂದಿಸಿ ಪರಿಹಾರ ನೀಡಿ : ಸಿ.ಎನ್.ಶ್ರೀಧರ್ ಗದಗ : ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ ಗದಗ : ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ತರಬೇತಿ ಗದಗ : ಅರಣ್ಯ ಸಂರಕ್ಷಕರು ನಾಡಿನ ಹಸಿರಿನ ಹರಿಕಾರರು : ನ್ಯಾ. ಗಂಗಾಧರ ಎಂ.ಸಿ ಗದಗ : ರೈತರಿಗೆ ಹಗಲು ಹೊತ್ತಿನಲ್ಲೇ ಏಳು ಗಂಟೆ ವಿದ್ಯುತ್‌: ಸಚಿವ ಕೆ.ಜೆ ಜಾರ್ಜ್‌ ಗದಗ : ಜಿಲ್ಲಾ ಮಟ್ಟದ ಮ್ಯಾರಾಥಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ಗದಗ : ಅಕ್ರಮ ಗಣಿಗಾರಿಕೆ ಸಂಪತ್ತು ವಸೂಲಾತಿ ಆಯುಕ್ತರ ನೇಮಕಕ್ಕೆ ಸರ್ಕಾರ ಗೆಜೆಟ್ : ಸಚಿವ ಎಚ್ ಕೆ ಪಾಟೀಲ ಗದಗ : ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಪೂರ್ವ ಮುಂಗಾರು: ಅತೀ ವೃಷ್ಟಿಯಿಂದಾದ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ, ವರದಿ ಸಲ್ಲಿಸಲು ಸೂಚನೆ ಗದಗ : ಸೆಪ್ಟೆಂಬರ್ 13 ರಂದು  ರಾಷ್ಟ್ರೀಯ ಲೋಕ ಅದಾಲತ್ : ಪ್ರಕರಣಗಳ ಇತ್ಯರ್ಥಕ್ಕೆ ಸುವರ್ಣಾವಕಾಶ