15.7 C
New York
Friday, May 9, 2025

Buy now

spot_img

ದೆಹಲಿಯ ಗಣರಾಜ್ಯೋತ್ಸವ- 2025: ಲಕ್ಕುಂಡಿ ಸ್ತಬ್ಧಚಿತ್ರಕ್ಕೆ ಓಟ್ ಮಾಡಲು : ಹೇಮಂತ್ ನಿಂಬಾಳ್ಕರ್ ಮನವಿ

ನವದೆಹಲಿ, ಜ. 27 : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್ ಲೈನ್, ಇಮೇಲ್ ಮತ್ತು ಎಸ್ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರ ವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. 

ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕಿರುಚಿತ್ರವನ್ನು ಸಹ ಬಿಡುಗಡೆಗೊಳಿಸಿದೆ. ಇದನ್ನು ಅನುಸರಿಸಿ, Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದೂ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

https://www.mygov.in/group-poll/vote-your-favourite-tableau-and-marching-contingent-republic-day-parade-2025/ ಕೊಂಡಿಯನ್ನು ಕ್ಲಿಕ್ ಮಾಡಿ, Login to participate ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಒಟಿಪಿ ನಮೂದಿಸಿ, ನಂತರ Resend. OTP/ Submitted ಇದರಲ್ಲಿ submitt ಕ್ಲಿಕ್ ಮಾಡಿ, ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ.Lakkundi : cradle of stone craft ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು.

ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಫ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಓಟ ಮಾಡಬಹುದಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ IPL 2025: 35 ಎಸೆತಗಳಲ್ಲಿ ಶತಕ ಮಹಾ ದಾಖಲೆ ಬರೆದ 14 ವರ್ಷದ ಬಾಲಕ ವೈಭವ್‌ ಸೂರ್ಯವಂಶಿ ಗದಗ : ಭೋವಿ ಸಮಾಜದ ಹೆಮ್ಮೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಟಿ ಬಿಸನಳ್ಳಿ ಗೆ ಗೌರವ ಡಾಕ್ಟರೇಟ್ ಪದವಿ