14.4 C
New York
Friday, May 9, 2025

Buy now

spot_img

ಗದಗ : ಮಡಿವಾಳ ಮಾಚಿದೇವ ಜಯಂತಿ : ಅರಸುತನ ಮೇಲಲ್ಲ, ಅಗಸತನ ಕೀಳಲ್ಲ

ಜಿಲ್ಲಾಡಳಿತದ ವತಿಯಿಂದ ಮಡಿವಾಳ ಮಾಚಿದೇವ ಜಯಂತಿ

ಗದಗ ಫೆ. 1: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಶನಿವಾರ ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಆಚರಿಸಲಾಯಿತು.

ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಮಾತನಾಡಿ, 12ನೇ ಶತಮಾನದ ಶರಣರು ತಮ್ಮ ವಚನದ ಮೂಲಕ ಸಮಾಜದ ಅಂಕು ಡೊಂಕುಗಳನ್ನು ವಚನಗಳ ಅಸ್ತ್ರದಿಂದ ತಿದ್ದಲು ಶ್ರಮಿಸಿದ್ದಾರೆ. 12ನೇ ಶತಮಾನದ ಮಡಿವಾಳ ಮಾಚಿದೇವರು ಮನುಕುಲದ ಕಲ್ಯಾಣಕ್ಕಾಗಿ ಶ್ರಮಿಸಿದವರಲ್ಲಿ ಒಬ್ಬರು. ವಚನದ ಸಾರವನ್ನು ಅರಿತು ಸಂದೇಶಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ನುಡಿದರು.

ಮಡವಾಳ ಮಾಚಿದೇವರು ಕಾಯಕ ನಿಷ್ಠರು. ಅವರೊಬ್ಬ ಮಹಾನ ಅವತಾರ ಪುರುಷರಾಗಿ ಸಮಾಜದ ವಳಿತಿಗಾಗಿ ಶ್ರಮಿಸಿದ ಶರಣರಾಗಿದ್ದಾರೆ. ಅಚಲ ಕಾಯಕನಿಚ್ಠೆ ತನ್ನ ಕಾಯಕವೇ ಭಕ್ತಿ ಉಸಿರು ಎಂದು ನಂಬಿದ್ದರು. ಶಿವ ಶರಣರ ಹಾಗೂ ಕಾಯಕದಲ್ಲಿ ನಿಷ್ಠೆ ಉಳ್ಳವರ ಬಟ್ಟೆಗಳನ್ನು ಮಡಿಮಾಡಿ ತಲುಪಿಸುವ ಕಾರ್ಯ ಇವರದಾಗಿತ್ತು. ಅದನ್ನು ಶ್ರದ್ದೇಯಿಂದ‌ ಮಾಡುವ‌ ಮೂಲಕ ಅರಸುತನ ಮೇಲಲ್ಲ, ಅಗಸತನ ಕೀಳಲ್ಲ ಎಂದು ಜಗತ್ತಿಗೆ ಸಾರಿದ ಮಹಾಮಹಿಮ ಎಂದು ಬಣ್ಣಿಸಿದರು.

ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಸಿದ್ಧಲಿಂಗೇಶ ಸಜ್ಜನ ಶೆಟ್ಟರ್ ಉಪನ್ಯಾಸ ಸಕರಾಗಿ ಮಾತನಾಡಿ, ಕಲ್ಯಾಣ ಲದಲಿದ್ದ ಶರಣರೊಂದಿಗೆ ಹಲವಾರು ವಚನಗಳನ್ನು ರಚಿಸಿ ಕಾಯಕದ ಮಹತ್ವವನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದರು.

ವೀರನಿಷ್ಠೆಯ ಶರಣನೀತ, ವಿಜಾಪುರ ಜಿಲ್ಲೆಯ ಸಿಂಧಗಿ ತಾಲೂಕಿನ ‘ದೇವರ ಹಿಪ್ಪರಗಿಯಲ್ಲಿ’ ಪರುವತಯ್ಯ -ಸುಜ್ಞಾನವ್ವ ದಂಪತಿಗಳ ಪುತ್ರ ರತ್ನ -ಶರಣ ಕಿರಣ ಮಡಿವಾಳ ಮಾಚಿದೇವರು. ದೇವರ ಹಿಪ್ಪರಿಗೆ ಇವರ ಜನ್ಮಸ್ಥಳ. ಕಾರ್ಯಕ್ಷೇತ್ರ ಕಲ್ಯಾಣ. ಆರಾಧ್ಯದೈವ ಕಲ್ಲಿನಾಥ. ಕಾವ್ಯ ಪುರಾಣಗಳಲ್ಲಿ ಇವರನ್ನು ವೀರಭದ್ರನ ಅವತಾರವೆಂದು ಬಣ್ಣಿಸಲಾಗಿದೆ. ಶಾಸನ ಶಿಲ್ಪಗಳಲ್ಲಿಯೂ ಇವರಿಗೆ ಎಡೆ ಲಭಿಸಿದೆ. ಶರಣರ ಬಟ್ಟೆಗಳನ್ನು ತೊಳೆಯುವುದು (ಶುಚಿ ಮಾಡುವುದು) ಇವರ ಕಾಯಕವಾಗಿತ್ತು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ. ಬಿ. ಸಂಕದ, ಜಿ.ಪಂ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ, ಜಿಲ್ಲಾ ಖಜಾನೆ ಉಪನಿರ್ದೇಶಕ ಹರಿನಾಥ ಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ, ಸಮಾಜದ ಗಣ್ಯರು, ಹಿರಿಯರು ಹಾಜರಿದ್ದರು.ಪ್ರಾಧ್ಯಾಪಕ ಬಾಹುಬಲಿ ಜೈನರ ಕಾರ್ಯ ಕ್ರಮ ನಿರ್ವಹಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕರೆ ಗದಗ : ITBP ಯೋಧನ ಕೆಲಸವನ್ನು ತಕ್ಷಣವೇ ಮಾಡಿ ಬಿಳ್ಕೋಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ : ಗ್ರಾ.ಪಂ. ವಿವಿಧ ಕಾರಣಗಳಿಂದ ತೆರವಾಗಿರುವ / ಖಾಲಿ ಉಳಿದಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮುಂಡರಗಿ : ಸಾಂಕ್ರಾಮಿಕ ರೋಗಗಳ ಜಾಗೃತಿ ಮತ್ತು ಉಚಿತ ತಪಾಸಣಾ ಶಿಬಿರ ಅಡವಿಸೋಮಾಪುರ ಗ್ರಾ.ಪಂ ನೂತನ ಅಧ್ಯಕ್ಷೆಯಾಗಿ ಪವಿತ್ರ ಹೊಸಳ್ಳಿ ಆಯ್ಕೆ ಗದಗ : ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ ಪಂಚಗ್ಯಾರಂಟಿಯಿಂದ ಭ್ರಷ್ಟಾಚಾರ ರಹಿತವಾಗಿ 1 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತುವ ಕ್ರಾಂತಿಕಾರಕ ಕಾರ್ಯ: ಎ... ಗದಗ : ಲಂಚ ಸ್ವೀಕಾರ : ವಕ್ಫ್ ಅಧಿಕಾರಿ ಲೋಕಾಯುಕ್ತ ಬಲೆಗೆ ! ಗದಗ : ಮನೆಯಲ್ಲೇ ನೇಣಿಗೆ ಶರಣಾದ ನವದಂಪತಿ! ‘ಜ್ಞಾನ ಅಂಚೆ’ ಸೇವೆ ಪ್ರಕಾಶಕರು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಉಪಯುಕ್ತ: ಜಯದೇವ ಕಡಗಿ