Wednesday, March 26, 2025
Google search engine
Homeಕವನಗದಗ : ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಲೋಕಾರ್ಪಣೆ

ಗದಗ : ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ ಲೋಕಾರ್ಪಣೆ

ಅಡವಿಸೋಮಾಪೂರ : ಗದಗ ತಾಲೂಕಿನ ಅಡವಿಸೋಮಾಪೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದ ಲೋಕಾರ್ಪಣೆ, ಕಳಸಾರೋಹಣ ಹಾಗೂ ಸಾಮೂಹಿಕ ವಿವಾಹಗಳ ಕಾರ್ಯಕ್ರಮವು ಫೆ.೩ ರಂದು ಜರುಗಲಿದೆ.
ಫೆ. ೩ ರಂದು ಬೆಳಿಗ್ಗೆ ೫ ಘಂ ಮಲ್ಲಿಕಾರ್ಜುನ ಸ್ವಾಮಿಗಳ ಮೂರ್ತಿ ಪ್ರತಿಷ್ಠಾಪನೆ, ನಂತರ ಗ್ರಾಮದ ಶ್ರೀ ಮೇಲಗಿರಿಯಪ್ಪಜ್ಜನ ಮಠದಿಂದ ಗ್ರಾಮದ ಪ್ರಮುಖ ಬೀದಿಗಳ ಮೂಲಕ ಮಲ್ಲಿಕಾರ್ಜುನಮಠಕ್ಕೆ ಕುಂಬಮೇಳವು ಸಕಲ ವಾದ್ಯ ಮೇಳಗಳೊಂದಿಗೆ ಮೆರವಣಿಗೆ ಮೂಲಕ ಆಗಮಿಸಿ ಕಳಸಾರೋಹಣ ಜರುಗುವುದು.

೧೦.೩೦ ಕ್ಕೆ ಧರ್ಮಸಭೆ ತುಲಾಬಾರ ಹಾಗೂ ದಾನಿಗಳಿಗೆ ಸನ್ಮಾನ ೧೨.೩೦ ಕ್ಕೆ ಸಾಮೂಹಿಕ ವಿವಾಹಗಳು ನಡೆಯಲಿವೆ.ನಂತರ ಮುಧುಕೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ೨೩ ನೇ ತುಲಾಭಾರ ಕಾರ್ಯಕ್ರಮ ಹೊಸಳ್ಳಿಯ ಬೂದೀಶ್ವರ ಸಂಸ್ಥಾನಮಠದ ಅಭಿನವ ಬೂದೀಶ್ವರ ಮಹಾಸ್ವಾಮಿಗಳು, ಮಣಕವಾಡದ ಅಭಿನವ ಮೃತ್ಯುಂಜಯ ಮಹಾಸ್ವಾಮಿಗಳು ದಿವ್ಯಸಾನಿಧ್ಯವಹಿಸುವರು. ಸುಜ್ಞಾನದೇವ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ವಹಿಸುವರು. ಶಿವಶರಣೆ ನೀಲಮ್ಮತಾಯಿ ಅಧ್ಯಕ್ಷತೆ ವಹಿಸುವರು. ಮಲ್ಲಿಕಾರ್ಜುನ ಸ್ವಾಮೀಜಿ, ಸಿದ್ದಲಿಂಗಯ್ಯ ಗೋಲಗಿರಿಮಠ, ಕೆ ಎ ಬಳಿಗೇರ, ಸುಬಾನಂದ ಸ್ವಾಮೀಜಿ, ಗುರುಶಾಂತಯ್ಯ ಜಾನಕೋಟಿಮಠ, ಪ್ರಭುಸ್ವಾಮಿ ಹಳೇಮಠ, ಸಿದ್ದಯ್ಯಸ್ವಾಮಿ, ಎಸ್ ಆರ್ ರಡ್ಡಿ, ಎಚ್ ಎಫ್ ನದಾಫ, ಪ್ರಲ್ಹಾದ ಹೊಸಳ್ಳಿ, ಪಂಚಯ್ಯ ಶಾಸ್ತಿçಗಳು, ಕನಕಪ್ಪ ತಳವಾರ, ರುದ್ರಗೌಡ ಅಖಂಡಿ, ವೆಂಕಟೇಶ ತಳಕಲ್ಲ ಸೇರಿದಂತೆ ಮುಂತಾದವರು ಉಪಸ್ಥಿತರಿರುವರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ತಾಲೂಕು ಮಟ್ಟದ ನರೇಗಾ ಕಾಯಕ ಬಂಧುಗಳ ತರಬೇತಿ  ಗದಗ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಮ್ ಪ್ರಿ-ಸ್ಕೂಲ್ ಪದವಿ ಪ್ರಧಾನ ಸಮಾರಂಭ ೨೦೨೫ ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ