Wednesday, March 26, 2025
Google search engine
Homeಅಪರಾಧಗದಗ : ತುಂಗಾಭದ್ರಾ ನದಿಯ ಅಕ್ರಮ ಮರಳು ಲೂಟಿಕೋರರಿಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಜಿಲ್ಲಾಧಿಕಾರಿ.!

ಗದಗ : ತುಂಗಾಭದ್ರಾ ನದಿಯ ಅಕ್ರಮ ಮರಳು ಲೂಟಿಕೋರರಿಗೆ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟ ಜಿಲ್ಲಾಧಿಕಾರಿ.!

ಗದಗ : ಪೆ : 12 : ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರ ಗ್ರಾಮದ ಬಳಿಯ ತುಂಗಭದ್ರಾ ನದಿ ಒಡಲು ಬಗೆದು ಅಕ್ರಮ ಮರಳು ಲೂಟಿಕೋರರಿಗೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಶಾಕ್ ನೀಡಿದ್ದಾರೆ.

 ಹೀಗಾಗಿ ದೂರು ಆಧರಿಸಿ ಸ್ವತಃ ಬೆಳ್ಳಂ ಬೆಳಿಗ್ಗೆ ಜಾವ 4-30 ರ ಸುಮಾರಿಗೆ ಖಾಸಗಿ ವಾಹನದಲ್ಲಿ ತೆರಳಿದ ಡಿಸಿ ಹಾಗೂ ಎಸಿ ಸ್ವತಃ ನದಿ ನೀರಿಗೆ ಇಳಿದು ಅಕ್ರಮ ಮರಳು ಲೂಟಿಕೋರರಿಗೆ ಚಳಿ ಬೀಡಿಸಿದ್ದಾರೆ.

 ಈ ವೇಳೆ, ಸುಮಾರು 20 ಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳಲ್ಲಿ‌ ಮರಳು ಲೂಟಿಕೋರರು ನದಿ ಮಧ್ಯದಲ್ಲಿ ಅಕ್ರಮವಾಗಿ‌ ಮರಳು ತುಂಬುತ್ತಿದ್ದರು.‌ ಅಧಿಕಾರಿಗಳನ್ನ ನೋಡಿದ ತಕ್ಷಣ ಎಲ್ಲರೂ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

ಬೆನ್ನು ಹತ್ತಿದ ಅಧಿಕಾರಿಗಳಿಗೆ ಎರಡು‌ ಟ್ರ್ಯಾಕ್ಟರ್ ಹಾಗೂ ಇಬ್ಬರು ಚಾಲಕರು,‌ ಮೊಬೈಲ್ ಸೇರಿದಂತೆ ಹಲವು‌ ಕಡೆಗಳಲ್ಲಿ ಸಂಗ್ರಹಿಸಿಟ್ಟಿದ್ದ 40 ಕ್ಕೂ‌ ಹೆಚ್ಚು ಟಿಪ್ಪರ್ ನಷ್ಟು ಅಕ್ರಮ‌ ಮರಳನ್ನ ವಶಪಡಿಸಿಕೊಂಡಿದ್ದಾರೆ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸ್ಥಳದಲ್ಲಿ ಠಿಕಾಣಿ ಹೂಡಿದ್ದು, ಪರಿಶೀಲನೆ ಮುಂದುವರೆಸಿದ್ದಾರೆ. ಕಂದಾಯ ಇಲಾಖೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಗದಗ : ತಾಲೂಕು ಮಟ್ಟದ ನರೇಗಾ ಕಾಯಕ ಬಂಧುಗಳ ತರಬೇತಿ  ಗದಗ ಬಿಪಿನ್ ಚಿಕ್ಕಟ್ಟಿ ಲಿಟಲ್ ಮಿಲೇನಿಯಮ್ ಪ್ರಿ-ಸ್ಕೂಲ್ ಪದವಿ ಪ್ರಧಾನ ಸಮಾರಂಭ ೨೦೨೫ ಗದಗ : ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಗದಗ : ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ಎಪ್ರೀಲ್-೧ ರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭ ಗದಗ : ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗದಗ : ತೆರಿಗೆ ವಸೂಲಿಯಲ್ಲಿ ಜಿಲ್ಲೆಗೆ ಲಕ್ಷ್ಮೇಶ್ವರ ಫಸ್ಟ್ ಗದಗ : ಒಂಟಿ ಮಹಿಳೆ ಇರುವ ಮನೆಯಲ್ಲಿ ದರೋಡೆ ಪ್ರಕರಣ : ಕೊಲೆಗೈದ ಆರೋಪಿತರಿಗೆ ಜೀವಾವಧಿ ಶಿಕ್ಷೆ  ಗದಗ : ಅಪಘಾತ: ಕಾರ್ ಗೆ ಬೈಕ್ ಡಿಕ್ಕಿ ಹೊಡೆದು ಬಸ್ ಚಕ್ರದಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು‌! ಗದಗ : ನರೇಗಲ್ಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮಹಿಳೆ ಕಾಣೆ