18.2 C
New York
Saturday, June 28, 2025

Buy now

spot_img

ತುಂಗಾಭದ್ರಾ ನದಿಯಲ್ಲಿ ಓರ್ವನ ಶವ ಪತ್ತೆ, ಇಬ್ಬರಿಗಾಗಿ ಮುಂದುವರಿದ ಶೋಧ ಕಾರ್ಯ

ತುಂಗಭ್ರದಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಪೈಕಿ ಓರ್ವನ ಶವ ಪತ್ತೆಯಾಗಿದೆ. ನಿನ್ನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಸೇತುವೆ ಬಳಿ ಈಜಲು ಹೋದಾಗ  ನೀರು ಪಾಲಾಗಿರುವ ದುರ್ಘಟನೆ ನಡೆದಿತ್ತು. ಮದಲಗಟ್ಟಿ ಆಂಜನೇಯನ ದರ್ಶನ ಪಡೆದು ತುಂಗಭದ್ರಾ ನದಿಗೆ ಈಜಲು ತೆರಳಿದಾಗ ನೀರುಪಾಲಾದ ಈ‌ ದುರ್ಘಟನೆ ಸಂಭವಿಸಿದೆ.

ಇಂದು ಮಹೇಶ್ ಬಡಿಗೇರ್ ಅವರ ಶವ ಪತ್ತೆಯಾಗಿದೆ. ಶರಣಪ್ಪ ಬಡಿಗೇರ್ (34) ಗುರುನಾಥ್ ಬಡಿಗೇರ್ (38) ಎನ್ನುವರ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಸದ್ಯ ನದಿಯಲ್ಲಿ ನಾಪತ್ತೆಯಾಗಿರುವ ಮೂವರ ಪೈಕಿ ಓರ್ವನ ಶವ ಪತ್ತೆಯಾಗಿದೆ. ಇಬ್ಬರಿಗಾಗಿ ಹುಡುಕಾಟ‌ ನಡೆಸಲಾಗುತ್ತಿದ್ದು, ಸ್ಥಳೀಯ ಮೀನುಗಾರರ ಸಹಾಯದೊಂದಿಗೆ ನದಿಯಲ್ಲಿ ಶೋಧ ಕಾರ್ಯ ಮುಂದುವರಿದಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news