ಹುಬ್ಬಳ್ಳಿ : ರಾಷ್ಟ್ರೀಯ ಹೆದ್ದಾರಿಯಲ್ಲಿ 63ರಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಯಾವುದೋ ಕಾರ್ಯದ ನಿಮಿತ್ತ ಹುಬ್ಬಳ್ಳಿಗೆ ತೆರಳುತ್ತಿದ್ದ ವೇಳೆ ಅತಿ ವೇಗವಾಗಿ ಕಾರು ಚಾಲನೆ ಮಾಡುತ್ತಿದ್ದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಮೃತರ ಗುರುತು ಪತ್ತೆ ಹಚ್ಚಲಾಗುತ್ತಿದೆ. ಇನ್ನು ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.