ಅರ್ಜಿ ಆಹ್ವಾನ
ಗದಗ ಜೂನ್ 16: ಗದಗ ಜಿಲ್ಲೆಯ ಸಮನ್ವಯ ಶಿಕ್ಷಣ ಸಂಪನ್ಮೂಲ ಶಿಕ್ಷಕರಾಗಿ ಕಾರ್ಯನಿರ್ವಹಿಸಲು ಪ್ರತಿ ಬ್ಲಾಕ್ ಹಂತದ ಸಂಪನ್ಮೂಲ ಕೇಂದ್ರಗಳಿಗೆ ವಿಶೇಷ ಶಿಕ್ಷಣದಲ್ಲಿ ಡಿ.ಇಡಿ / ವಿಶೇಷ ಬಿ.ಇಡಿ ಮತ್ತು ಆರ್.ಸಿ.ಐ ನಿಗದಿತ ವಿದ್ಯಾರ್ಹತೆ ಹೊಂದಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಕರಿಂದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ತಾತ್ಕಾಲಿಕವಾಗಿ ನೇರಗುತ್ತಿಗೆಯಡಿ ಬಿ.ಐ.ಇ.ಆರ್.ಟಿ ಶಿಕ್ಷಕರ ( ವಿಶೇಷ ಶಿಕ್ಷಣ ಶಿಕ್ಷಕರು) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದ್ದು ಅರ್ಜಿಯನ್ನು ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಗದಗ ಈ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ , ಗದಗ ಈ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗದಗ- ಜೂನ್ 16: ಗದಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಡಿಯಲ್ಲಿ ಸ್ಥಾಪಿಸಿದ ಕಾನೂನು ನೆರವು ಅಭಿರಕ್ಷಕರ ಕಛೇರಿಯಲ್ಲಿ ಖಾಲಿ ಇರುವ ‘ಮುಖ್ಯ ಕಾನೂನು ನೆರವು ಅಭಿರಕ್ಷಕರ’-01, ‘ಉಪ ಕಾನೂನು ನೆರವು ಅಭಿರಕ್ಷಕರ’-01, ಹಾಗೂ ‘ಸಹಾಯಕ ಕಾನೂನು ನೆರವು ಅಭಿರಕ್ಷಕರ’-01 ಒಟ್ಟು 03 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಕೀಲರು ಈ ಕೆಳಗಿನ ದಿನಾಂಕದ ಒಳಗಾಗಿ ನಿಗದಿತ ನಮೂನೆಯಲ್ಲಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ವಕೀಲರು ತಮ್ಮ ಸ್ವಂತ ಪ್ರಕರಣಗಳನ್ನು ನಡೆಸುವಂತಿಲ್ಲ.
ಸೇವೆ ಸಲ್ಲಿಸಲು ಇಚ್ಛಿಸುವ ಆಸಕ್ತ ವಕೀಲರು ಕಚೇರಿಯಲ್ಲಿ ಲಭ್ಯ ಇರುವ ಅಥವಾ ಗದಗ ಜಿಲ್ಲಾ ನ್ಯಾಯಾಲಯ ವೆಬ್ಸೈಟ್ನ ಮೂಲಕ ಅರ್ಜಿಯನ್ನು ಪಡೆದುಕೊಂಡು ಅರ್ಜಿ ಭರ್ತಿ ಮಾಡಿ ಅವಶ್ಯಕ ದಾಖಲೆಗಳನ್ನು ಸ್ವತಃ ದೃಢೀಕರಿಸಿ ಲಗತ್ತಿಸಿ ನೋಂದಾಯಿತ ಅಂಚೆ ಮೂಲಕ ಅಥವಾ ಮುಚ್ಚಿದ ಲಕೋಟಿಯಲ್ಲಿ ಖುದ್ದಾಗಿ ಜೂನ್ 19 ರ ಸಂಜೆ 5 ಗಂಟೆಯೊಳಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯದ ಸಂಕೀರ್ಣ, ಗದಗ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆ ಮತ್ತು ಸೇವಾನುಭವ ಹಾಗೂ ಇನ್ನಿತರ ಮಾಹಿತಿಗಾಗಿ ಗೌರವಾನ್ವಿತ ಗದಗ ಜಿಲ್ಲಾ ನ್ಯಾಯಾಲಯದ ವೆಬ್ಸೈಟ್: https://gadag.dcourts.gov.in ಮೂಲಕ ಅಥವಾ ಗದಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಅರ್ಜಿ ಆಹ್ವಾನ
ಗದಗ ಜೂನ್ 16: 2025-26 ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಕರ್ನಾಟಕ ಹಜ್ ಭವನ ಇಲ್ಲಿ 03 ತಿಂಗಳ ವಸತಿ ಸಹಿತ ಐಎಎಸ್/ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮುಖ್ಯ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತಿದ್ದು ಸದರಿ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪರ್ಶಿಯನ್) ವಿದ್ಯಾರ್ಥಿಗಳು ಸೇವಾ ಸಿಂಧು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 21 ಕೊನೆಯ ದಿನವಾಗಿದ್ದುಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 8277799990 ಸಂಪರ್ಕಿಸಬಹುದಾಗಿದೆ ಎಂದು ಗದಗ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.