27.3 C
New York
Wednesday, June 18, 2025

Buy now

spot_img

ಗದಗ : ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ; ರಾಜೀ ಸಂಧಾನದ ಮೂಲಕ ತ್ವರಿತ ಇತ್ಯರ್ಥಕ್ಕೆ ಅವಕಾಶ

ಗದಗ ಜೂನ್ 18 : ಜಿಲ್ಲೆಯಲ್ಲಿ ಜುಲೈ 12 ರಂದು ರಾಷ್ಟಿçÃಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಶ್ರೀಮತಿ ನಾಗವೇಣಿ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬುಧವಾರ ( ಜೂನ್ 18 ) ರಾಷ್ಟಿçÃಯ ಲೋಕ ಅದಾಲತ್ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮತ್ತು ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು ಹಾಗೂ ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂದsವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.

ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನAತೆ ಒಟ್ಟು 15 ಬೆಂಚಗಳನ್ನು ರಚಿಸಿದ್ದು ಗದಗ ಜಿಲ್ಲೆಯಲ್ಲಿ ಒಟ್ಟು 20411 ವಿವಿಧ ಚಾಲ್ತಿ ಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 2280 ಪ್ರಕರಣಗಳನ್ನು ಗುರುತಿಸಿದ್ದು ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬAಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ¨ÀsÆಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌAಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿರುತ್ತದೆ ಎಂದರು.

ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಕಳೆದ ಮಾರ್ಚ್-2025 ರಂದು ಜರುಗಿದ ಲೋಕ ಅದಾಲತ್‌ನಲ್ಲಿ 3749 ಚಾಲ್ತಿ ಪ್ರಕರಣಗಳನ್ನು ಹಾಗೂ 29199 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು 32948 ಪ್ರಕರಣಗಳ್ನು ರಾಜೀ ಮೂಲಕ ಇತ್ಯರ್ಥಪಡಿಸಿದೆ. ಇದರಲ್ಲಿ ವಿಶೇಷವಾಗಿ 09 ಕೌಟುಂಬಿಕ ಪ್ರಕರಣಗಳನ್ನು ಪುನಃ ಒಂದು ಗೂಡಿಸಿ ಕಳುಹಿಸಲಾಗಿದೆ ಎಂದರು.

ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂದಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು, ಪ್ರಕರಣಗಳಿಗೆ ಸಂಬಂದsಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿದs ಇಲಾಖೆಗಳಿಗೆ ಸಂಬಂದsಪಟ್ಟ ಅಧಿಕಾರಿಗಳು, ಇಲಾಖೆಗಳವರು ಜುಲೈ 12 ರಂದು ಜರಗುವ ರಾಷ್ಟಿçÃಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಶ್ರಿಮತಿ ನಾಗವೇಣಿ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ ಮಾತನಾಡಿ ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಜೂ.21 ರಂದು ಅಂಚೆ ಕಚೇರಿ ಸೇವೆ ಸ್ಥಗಿತ : ಅಂಚೆ ಅಧೀಕ್ಷಕ ರಮೇಶ ಮಡಿವಾಳರ ಗದಗ : ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ; ರಾಜೀ ಸಂಧಾನದ ಮೂಲಕ ತ್ವರಿತ ಇತ್ಯರ್ಥಕ್ಕೆ ಅವಕಾಶ ಗದಗ: ಜೂನ್‌ 30ರ ಒಳಗಾಗಿ ಪಡಿತರ ಚೀಟಿ- ಕೆವೈಸಿ ಕಡ್ಡಾಯ ಗದಗ  : ಅಂಚೆ ಇಲಾಖೆ ಸೇವೆ ಸಮಾಜದ ಕಡೆಯ ವ್ಯಕ್ತಿಗೂ ಲಭಿಸಲಿದೆ : ರಮೇಶ ಮಡಿವಾಳರ ಗದಗ : ವಿವಿಧ ಅರ್ಜಿಗಳ ಆಹ್ವಾನ ಗದಗ : ಪಡಿತರ ಅಂಗಡಿಗಳ ಮುಂದೆ ಪಂಚಗ್ಯಾರಂಟಿ ಯೋಜನೆಗಳ ಮಾಹಿತಿ ಒಳಗೊಂಡ ಬ್ಯಾನರ್ ಅಳವಡಿಸಬೇಕು : ಬಿ.ಬಿ.ಅಸೂಟಿ ಗದಗ : ಪ್ರವಾಹದಿಂದ ಹಾನಿಗೀಡಾದ ಪ್ರದೇಶ‌‌‌ ವೀಕ್ಷಿಸಿದ ಸಚಿವ ಎಚ್ ಕೆ ಪಾಟೀಲ ಕೇದಾರ್‌ ನಾಥ್‌ ಬಳಿ ಹೆಲಿಕ್ಯಾಪ್ಟರ್ ಪತನ - ಐವರು ಯಾತ್ರಿಕರ ಸಾವು! ಗದಗ : ಜಿ.ಪಂ. ಸಿಇಓ ಭರತ್ ಎಸ್ ಅವರಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಗದಗ : ನೀರಲಗಿ ಉಪ ಕೇಂದ್ರದಲ್ಲಿ ಡೆಂಗ್ಯು ವಿರೋಧಿ ಮಾಸಾಚರಣೆ