ಗದಗ ೩೦ : ದಿನಾಂಕ ೦೧-೦೭-೨೦೨೫ ರಂದು ಸಂಜೆ ೭-೦೦ ಗಂಟೆಗೆ ನಗರದ ಶ್ರೀ ವೀರನಾರಾಯಣ ಕಲ್ಯಾಣ ಮಂಟಪದಲ್ಲಿ ಶ್ರೀ ಸಿದ್ಧಿ ವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಹಟ್ಟಿಯಂಗಡಿ ಇವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಕವಿ ಬೇಳೂರು ವಿಷ್ಣುಮೂರ್ತಿ ನಾಯಕ್ ವಿರಚಿತ ಸಿರಿಸಿಂಗಾರಿ ಭಾಗ್ಯದಂಬಾರಿ ಎಂಬ ಯಕ್ಷಗಾನವನ್ನು ವಿ.ಆ. ವೀರಚಂದ್ರಹಾಸ ಚಲನಚಿತ್ರದ ಕಥಾನಾಯಕ ಶಿಥಿಲ್ ಶೆಟ್ಟಿ, ನಾಯಕ ನಟಿ ನಾಗಶ್ರೀ ಜಿ.ಎಸ್. ಭಾಗವಹಿಸಲಿದ್ದಾರೆ. ಆದ್ದರಿಂದ ತಾವೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಕ್ಷಗಾನ ಕಲೆಯನ್ನು ಪ್ರೋತ್ಸಾಹಿಸಬೇಕೆಂದು ಹೋಟೆಲ್ ಒಡೆಯರ ಸಂಘ ಹಾಗೂ ಯಕ್ಷಗಾನ ಅಭಿಮಾನಿ ಬಳಗ ಮತ್ತು ಹೊಟೇಲ್ ಒಡೆಯರ ಸಂಘದ ಗದಗ ಜಿಲ್ಲಾ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ ಹಾಗೂ ಸುಧಾಕರ ಶೆಟ್ಟಿಯವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.