21.3 C
New York
Sunday, September 14, 2025

Buy now

spot_img

ಗದಗ : ಅಕ್ರಮ ಗಣಿಗಾರಿಕೆ ಸಂಪತ್ತು ವಸೂಲಾತಿ ಆಯುಕ್ತರ ನೇಮಕಕ್ಕೆ ಸರ್ಕಾರ ಗೆಜೆಟ್ : ಸಚಿವ ಎಚ್ ಕೆ ಪಾಟೀಲ

ಗದಗ : ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದ ಉತ್ಪತ್ತಿಯಾದ ಅಂದಾಜು 78 ಸಾವಿರ ಕೋಟಿ ಮೊತ್ತವನ್ನು ವಸೂಲಿ ಮಾಡಲು ರಾಜ್ಯ ಸರ್ಕಾರ ಸೆ.9 ರಂದು ಗೆಜೆಟ್ ಹೊರಡಿಸಿದೆ. ಸರ್ಕಾರದ ಕಾರ್ಯದರ್ಶಿ ಸಮಾನಾಂತರ ಅಧಿಕಾರಿಯನ್ನು ಆಯುಕ್ತರಾಗಿ ನೇಮಕ ಮಾಡಲಾಗುವುದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಗದಗ ನಗರದಲ್ಲಿ ಬುಧವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಮತ್ತು ಅಪರಾಧ ಉತ್ಪತ್ತಿಯಿಂದ ಸ್ವತ್ತು ವಸೂಲಾತಿ ಮತ್ತು ಜಪ್ತಿಗೆ ಆಯುಕ್ತರ ನೇಮಕದ ಕುರಿತು ಗೆಜೆಟ್ ಹೊರಡಿಸಲಾಗಿದೆ. ಆಯುಕ್ತರ ನೇಮಕ ಕುರಿತು ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಮಸೂದೆ ಮಂಡನೆ ಆಗಿತ್ತು. ಸೆ.9 ರಂದು ಮಂಗಳವಾರ ರಾಜ್ಯಪಾಲರು ಮಸೂದೆ ಕರಡು ಪ್ರತಿಗೆ ಅಂಕಿತ ಹಾಕಿದ್ದಾರೆ. ತದ ನಂತರ ಸರ್ಕಾರ ಶ್ರೀಘ್ರದಲ್ಲಿ ಗೆಜೆಟ್ ಹೊರಡಿಸಿದೆ. ಈ ಕಾನೂನಿಂದ ಆಥಿರ್ಕ ಶಿಸ್ತು ಪಾಲನೆ ಮಾಡಿದಂತೆ ಆಗುತ್ತದೆ ಎಂದರು.

ರಾಜ್ಯದಲ್ಲಿ 2009 – 10ರ ಅವಧಿಯಲ್ಲಿ 12000 ಕೋಟಿ ರೂ. ಮೊತ್ತದ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ಅಂದಾಜಿಸಲಾಗಿತ್ತು. ಪ್ರಸ್ತುತ ಅಕ್ರಮ ಗಣಿ ಸಂಪತ್ತಿನ ಬೆಲೆ 78000 ಕೋಟಿ ರೂ. ಆಗಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ಅಂದಾಜಿಸಲಾಗಿತ್ತು. ಈಗ ಒಂದು ಲಕ್ಷ ಕೋಟಿಗೂ ಅಧಿಕ ಸಂಪತ್ತು ಲೂಟಿ ಆಗಿದೆ ಎಂದು ಆರೋಪಿಸಿದರು.

ಅಕ್ರಮ ಗಣಿ ಸಂಪತ್ತು ವಸೂಲಾತಿಗಾಗಿ ಕಳೆದ ಜು. 5 ರಂದು ಸಚಿವ ಸಂಪುಟದ ಉಪ ಸಮಿತಿ ಅಧ್ಯಕ್ಷನಾಗಿ ನನ್ನನ್ನು ನೇಮಕ ಮಾಡಲಾಗಿತ್ತು. ಅದರ ಭಾಗವಾಗಿ ಆ. 8 ರಂದು ಸಮಿತಿಯು ವರದಿ ರ್ಪೂಣ ಗೊಳಿಸಿ ಆ. 12ಕ್ಕೆ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಯಿತು. ಆ.14 ರಂದು ಸಚಿವ ಸಂಪುಟ ಸಭೆಯಲ್ಲಿ ವರದಿ ಯಥಾವತ್ತಾಗಿ ಸ್ವೀಕರಿಸಲಾಯಿತು. ಮುಂದುವರಿದು ಈಗ ಗೆಜೆಟ್ ಪ್ರಕಟನೆಗೊಂಡು ಕಾನೂನು ಜಾರಿ ಆಗಿದೆ ಎಂದರು.

ಈ ವೇಳೆ ಇಂಧನ ಸಚಿವ ಕೆ.ಜೆ. ಜಾರ್ಜ, ಶಾಸಕ ಜಿ.ಎಸ್. ಪಾಟೀಲ, ಮಾಜಿ ಶಾಸಕ ಡಿ ಆರ್ ಪಾಟೀಲ, ಬಿ.ಬಿ. ಅಸೂಟಿ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
ಗದಗ : ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ತರಬೇತಿ ಗದಗ : ಅರಣ್ಯ ಸಂರಕ್ಷಕರು ನಾಡಿನ ಹಸಿರಿನ ಹರಿಕಾರರು : ನ್ಯಾ. ಗಂಗಾಧರ ಎಂ.ಸಿ ಗದಗ : ರೈತರಿಗೆ ಹಗಲು ಹೊತ್ತಿನಲ್ಲೇ ಏಳು ಗಂಟೆ ವಿದ್ಯುತ್‌: ಸಚಿವ ಕೆ.ಜೆ ಜಾರ್ಜ್‌ ಗದಗ : ಜಿಲ್ಲಾ ಮಟ್ಟದ ಮ್ಯಾರಾಥಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ಗದಗ : ಅಕ್ರಮ ಗಣಿಗಾರಿಕೆ ಸಂಪತ್ತು ವಸೂಲಾತಿ ಆಯುಕ್ತರ ನೇಮಕಕ್ಕೆ ಸರ್ಕಾರ ಗೆಜೆಟ್ : ಸಚಿವ ಎಚ್ ಕೆ ಪಾಟೀಲ ಗದಗ : ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಪೂರ್ವ ಮುಂಗಾರು: ಅತೀ ವೃಷ್ಟಿಯಿಂದಾದ ಬೆಳೆ ಹಾನಿ ಕುರಿತು ಜಂಟಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ, ವರದಿ ಸಲ್ಲಿಸಲು ಸೂಚನೆ ಗದಗ : ಸೆಪ್ಟೆಂಬರ್ 13 ರಂದು  ರಾಷ್ಟ್ರೀಯ ಲೋಕ ಅದಾಲತ್ : ಪ್ರಕರಣಗಳ ಇತ್ಯರ್ಥಕ್ಕೆ ಸುವರ್ಣಾವಕಾಶ ಗದಗ : ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ನೂತನ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಪದಗ್ರಹಣ ಸಮಾರಂಭ ಗದಗ : ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ: ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ