13.1 C
New York
Tuesday, October 14, 2025

Buy now

spot_img

ಗದಗ : ಆರೋಗ್ಯ ಮತ್ತು ನೆಮ್ಮದಿ ಮನುಷ್ಯನ ನಿಜವಾದ ಸಂಪತ್ತುಗಳು

ಗದಗ  ಸೆಪ್ಟೆಂಬರ್ 23 : ಆರೋಗ್ಯ ಮತ್ತು ನೆಮ್ಮದಿ ಮನುಷ್ಯನ ನಿಜವಾದ ಸಂಪತ್ತುಗಳಾಗಿವೆ. ಆಯುರ್ವೇದ ಎಂದರೆ ಆರೋಗ್ಯದಿಂದಿರುವುದು ಎಂದರ್ಥವಾಗಿದೆ. ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ನಮ್ಮ ಪೂರ್ವಿಕರು ಆರೋಗ್ಯ ಕಾಪಾಡಿಕೊಳ್ಳುವುದಕ್ಕೋಸ್ಕರ ಒಳ್ಳೆಯ ಆಹಾರ, ವಿಹಾರ ಪದ್ಧತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುತ್ತಿದ್ದರು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಕೇಂದ್ರ ಹಾಗೂ ರಾಜ್ಯ ಸರ್ಕಾರ, ಆಯುಷ್ ಇಲಾಖೆ,ಬೆಂಗಳೂರು, ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ ಎಂಬ ಘೋಷವಾಕ್ಯದಡಿ ‘ ಶ್ರೀ ಧನ್ವಂತರಿ ಜಯಂತಿ’ 10ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆ-2025 ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಮ್ಮ ಹಿರಿಯರು ನಿತ್ಯ ಕರ್ಮದಲ್ಲಿ ಏನು ಮಾಡಬೇಕು , ಏನು ಮಾಡಬಾರದು ಎಂದು ತಿಳಿದು ಆರೋಗ್ಯ ಕಾಪಾಡಿಕೊಳ್ಳುತ್ತಿದ್ದರು. ಆರೋಗ್ಯದ ಹಿತದೃಷ್ಟಿಯಿಂದ ಯಾವ ಋತುಗಳಿಗೆ ಏನು ತಿನ್ನಬೇಕು ಎಂದು ತಿಳಿದುಕೊಳ್ಳುತ್ತಿದ್ದರು. ಆಯುರ್ವೇದದಿಂದ ಆರೋಗ್ಯಕರ ಸಮಾಜ ನಿರ್ಮಿಸಬಹುದಾಗಿದೆ. ಮನುಷ್ಯನು ಉತ್ಸಾಹದಿಂದಿರಲು ದೈಹಿಕ ಹಾಗೂ ಮಾನಸಿಕ ಆರೋಗ್ಯ ಎರಡೂ ಅಮೂಲ್ಯವಾಗಿವೆ. ಆದಕಾರಣ ಆಯುರ್ವೇದ ಪದ್ಧತಿ ಪ್ರಕಾರ ಪ್ರತಿಯೊಬ್ಬರೂ ಉತ್ತಮ ಆಹಾರ ಪದ್ಧತಿ, ಯೋಗ, ಧ್ಯಾನ ಅಳವಡಿಸಿಕೊಂಡು ಆರೋಗ್ಯಕರ ಜೀವನ ನಡೆಸಬಹುದಾಗಿದೆ ಎಂದರು.

ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯ ಆಯುಷ್ ಇಲಾಖೆಯ ವೈದ್ಯರುಗಳು ಕೈಗೊಂಡ ನಿಸ್ವಾರ್ಥ ಸೇವೆಯನ್ನು ಸ್ಮರಿಸಿಕೊಂಡರು ಹಾಗೂ ಪ್ರತಿಯೊಬ್ಬರೂ ಆಯುರ್ವೇದ ಔಷಧಗಳ ಸದ್ಭಳಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ಮಾತನಾಡಿ ರೋಗಿಗಳಿಗೆ ಆಯುರ್ವೇದ ಚಿಕಿತ್ಸೆ ಶ್ರೇಷ್ಠ ಚಿಕಿತ್ಸೆಯಾಗಿದೆ. ಇಂದಿನ ದಿನಮಾನಗಳಲ್ಲಿ ಕಲಬೆರಕೆ ಆಹಾರದಿಂದ, ನಿಗದಿತ ಸಮಯದಲ್ಲಿ ಊಟ ಮಾಡದೇ ಇರುವುದರಿಂದ, ರೋಗ ರುಜಿನಗಳನ್ನು ನಾವೇ ಬರಮಾಡಿಕೊಳ್ಳುತ್ತಿದ್ದೇವೆ. ಆಯುರ್ವೇದ ಚಿಕಿತ್ಸೆಯಲ್ಲಿ ವಿಶೇಷ ಶಕ್ತಿಯಿದೆ. ಆಯುರ್ವೇದ ಚಿಕಿತ್ಸೆಗಳು ಪ್ರಾಚೀನ ಚಿಕಿತ್ಸೆಗಳಾಗಿದ್ದು ರೋಗಗಳನ್ನು ಯಾವುದೇ ದುಷ್ಪರಿಣಾಮ ಇಲ್ಲದೇ ಗುಣಪಡಿಸುವ ಶಕ್ತಿ ಇದಕ್ಕಿದೆ ಎಂದು ತಿಳಿಸಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ಜಯಪಾಲಸಿಂಗ್ ಸಮೋರೇಕರ್ ಪ್ರಾಸ್ತಾವಿಕವಾಗಿ ಮಾತನಾಡಿ ನಾವು 10ನೇ ರಾಷ್ಟಿçÃಯ ಆಯುರ್ವೇದ ದಿನಾಚರಣೆಯನ್ನು ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ ಎಂಬ ಘೋಷವಾಕ್ಯದಡಿ ಆಚರಿಸುತ್ತಿದ್ದೇವೆ. ಆಯುರ್ವೇದ ಚಿಕಿತ್ಸೆಯಿಂದ ರೋಗಿಗಳು ಯಾವುದೇ ದುಷ್ಪರಿಣಾಮ ಇಲ್ಲದೇ ಗುಣಮುಖ ಹೊಂದಿ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಆಯುಷ್ ಇಲಾಖೆಯ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಪಾಪನಾಶಿ ಹಾಗೂ ಅಂತೂರು- ಬೆಂತೂರು ಆಯುಷ್ಮಾನ್ ಆರೋಗ್ಯ ಮಂದಿರದ ಯೋಗ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ಜರುಗಿತು.

ಡಾ. ಮಹೇಶ ಹಿರೇಮಠ ಅವರು ಅನಾರೋಗ್ಯದಿಂದ ಆರೋಗ್ಯದ ಕಡೆಗೆ ವಿಷಯದ ಕುರಿತಾಗಿ ಉಪನ್ಯಾಸ ನೀಡಿದರು. ಡಾ.ಪ್ರವೀಣ ಸರ್ವದೆ ಬೊಜ್ಜು ನಿವಾರಣೆಯಲ್ಲಿ ಆಹಾರದ ಪಾತ್ರ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಆಯುಷ್ ವೈದ್ಯಾಧಿಕಾರಿಗಳು, ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್, ಜಿಲ್ಲಾ ಘಟಕದವರು, ನರ್ಸಿಂಗ್ ವಿದ್ಯಾರ್ಥಿಗಳು, ವೈದ್ಯಾಧಿಕಾರಿಗಳು, ಎಸ್.ಸಿ.ತೋಟಗಂಟಿಮಠ ಕಾಲೇಜಿನ ವಿದ್ಯಾರ್ಥಿಗಳು, ಗಾವಾ ನರ್ಸಿಂಗ್ ಇನ್ಸಟಿಟ್ಯೂಟ್ ವಿದ್ಯಾರ್ಥಿಗಳು, ಆಯುಷ್ ಇಲಾಖೆಯವರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಡಾ.ಬಿ.ಎಂ.ಲೋಕಾಪುರ ಸ್ವಾಗತಿಸಿದರು. ಡಾ,ಅಶೋಕ ಮತ್ತಿಗಟ್ಟಿ ಧ್ವನಂತರಿ ಸ್ತೋತ್ರವನ್ನು ಪಠಿಸಿದರು. ಡಾ. ನೇತ್ರಾವತಿ ರಾಯ್ಕರ್ ಪ್ರಾರ್ಥಿಸಿದರು. ಡಾ.ಕಮಲಾಕರ ಅರಳೆ ವಂದಿಸಿದರು. ಡಾ.ಸಂಜೀವ ನಾರಪ್ಪನವರ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಕಲಿಯುಗದ ಕುಡುಕ” ರಾಜು ತಾಳಿಕೋಟಿ ಇನ್ನಿಲ್ಲ…. ಗದಗ  :  ನಶಾಮುಕ್ತ  ಗದಗ ಜಿಲ್ಲೆಯನ್ನು ನಿರ್ಮಿಸೋಣ: ಸಚಿವ ಎಚ್. ಕೆ. ಪಾಟೀಲ್ ಗದಗ : ಪೋಷಣ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಗದಗ : ಜಿಲ್ಲೆಯಲ್ಲಿ 123 ಪ್ರಕರಣಗಳು ಮಧ್ಯಸ್ಥಿಕೆಯಲ್ಲಿ ಇತ್ಯರ್ಥ ಗದಗ : ಕುಟುಂಬ ಕಲಹ : ಹೆಂಡತಿಯನ್ನು ಕೊಲೆಗೈದ ಗಂಡ..! ಗದಗ : ಗ್ರಾಮಾಭಿವೃದ್ಧಿಗೆ ಕೆಳಹಂತದ ವಾರ್ಷಿಕ ಯೋಜನೆ ಅತ್ಯಂತ ಸಹಕಾರಿ : ಡಾ.‌ ಯತೀಂದ್ರ ಸಿದ್ಧರಾಮಯ್ಯ ಗದಗ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರಿಂದ ಅರ್ಥಪೂರ್ಣ ದಸರಾ ಆಚರಣೆ ಗದಗ : ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಗದಗ : ಅಲ್ಪಸಂಖ್ಯಾತರ ಇಲಾಖಾ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಿ : ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯು ಆಶ್ರಮದ ಶಾಲೆಯಂತಿದೆ : ಪರಮಪೂಜ್ಯ ಮೃಡಗಿರಿಯ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶ...