13.1 C
New York
Tuesday, October 14, 2025

Buy now

spot_img

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಜಯ 9 ನೇ ಬಾರಿಗೆ ಏಷ್ಯಾಕಪ್ ಗೆದ್ದ ಭಾರತ ಚಾಂಪಿಯನ್

ದುಬೈ : ಟಾರ್ಗೆಟ್ ಕಡಿಮೆ  ಆಗಿದ್ದರು ಆರಂಭದಲ್ಲೇ ವಿಕೆಟ್ ಕಳೆದುಕೊಂಡ ಟೀಂ ಇಂಡಿಯಾ ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಒಂದು ಹಂತದಲ್ಲಿ ಭಾರತ ಗೆಲ್ಲೋದೆ ಕಷ್ಟ ಅನ್ನೋ ವಾತಾವರಣ ನಿರ್ಮಾಣವಾಗಿತ್ತು. ಪ್ರತಿ ಎಸೆತದ ಬಳಿಕ ಭಾರತ ಮೇಲೆ ಒತ್ತಡ ತೀವ್ರಗೊಳ್ಳುತ್ತಿತ್ತು.

ತಿಲಕ್ ವರ್ಮಾ ನೀಡಿದ ಹೋರಾಟದಿಂದ ಭಾರತ ಏಷ್ಯಾಕಪ್ ಟ್ರೋಫಿ ಗೆದ್ದುಕೊಂಡಿದೆ. ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿನ ಬದಲಾವಣೆ, ಮತ್ತೊಂದೆಡೆ ಲೆಕ್ಕಾಚಾರ ಉಲ್ಟಾ ಆಗಿತ್ತು. ಸುಲಭ ಟಾರ್ಗೆಟ್ ಕೂಡ ಕಠಿಣವಾಗಿತ್ತು. ಭಾರತ ಆರಂಭದಲ್ಲೇ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲಿಕಿತ್ತು. ಅಭಿಶೇಕ್ ಶರ್ಮಾ ಕೇವಲ 5 ರನ್, ನಾಯಕ ಸೂರ್ಯಕುಮಾರ್ ಯಾದವ್ 1, ಶುಬಮನ್ ಗಿಲ್ 12 ರನ್ ಸಿಡಿಸಿ ಔಟಾಗಿದ್ದರು.

ತಿಲಕ್ ವರ್ಮಾ ಹಾಗೂ ಸಂಜು ಸ್ಯಾಮ್ಸನ್ ಜೊತೆಯಾಟ ಭಾರತ ತಂಡಕ್ಕೆ ಉಸಿರಾಟ ನೀಡಿತ್ತು. ಆದರೆ ಸಂಜು ಆಟ 24 ರನ್‌ಗೆ ಅಂತ್ಯವಾಗುವ ಮೂಲಕ ಆತಂಕ ಹೆಚ್ಚಾಗಿತ್ತು., ಭಾರತ ನಾಲ್ಕು ವಿಕೆಟ್ ಕಳೆದುಕೊಂಡಿತ್ತು. ಒಂದೆಡೆ ರನ್ ರೇಟ್ ಹೆಚ್ಚಾಗುತ್ತಿದ್ದರೆ, ಮತ್ತೊಂದೆಡೆ ಒತ್ತಡವೂ ಅಧಿಕವಾಗುತ್ತಿತ್ತು.

ತಿಲಕ್ ವರ್ಮಾ ಹೋರಾಟ ನೀಡಿದರು. ಭಾರತಕ್ಕೆ ದಿಟ್ಟ ಜೊತೆಯಾಟದ ಅವಶ್ಯಕತೆ ಇತ್ತು. ತಿಲಕ್ ವರ್ಮಾ ಹೋರಾಟ ಟೀಂ ಇಂಡಿಯಾಗೆ ನೆರವಾಗಿತ್ತು. ಎಚ್ಚರಿಕೆ ಆಟವಾಡಿದ ತಿಲಕ್ ವರ್ಮಾ ಹಾಫ್ ಸೆಂಚುರಿ ಸಿಡಿಸಿದರು. ಆದರೆ ಭಾರತದ ಟಾರ್ಗೆಟ್ ಅಲ್ಪವಾಗಿದ್ದರೂ ರನ್ ಗಳಿಕೆ ವೇಗ ಕಡಿಮೆಯಾಗಿತ್ತು. ಹೀಗಾಗಿ ಅಂತಿಮ ಹಂತ ತಲುಪುತ್ತಿದ್ದಂತೆ ಒತ್ತಡ ತೀವ್ರಗೊಂಡಿತ್ತು.

18ನೇ ಓವರ್‌ನ ಅಂತಿಮ ಎಸೆತದಲ್ಲಿ ಶಿವಂ ದುಬೆ ಸಿಕ್ಸರ್ ಸಿಡಿಸಿ ಪಂದ್ಯಕ್ಕೆ ತಿರುವು ನೀಡಿದರು. ಈ ಸಿಕ್ಸರ್ ಪಾಕಿಸ್ತಾನದ ಮೇಲೆ ಒತ್ತಡ ಹೆಚ್ಚಿಸುವಂತೆ ಮಾಡಿತ್ತು. ಇದರಿಂದ ಅಂತಿಮ 12 ಎಸೆತದಲ್ಲಿ ಭಾರತದ ಗೆಲುವಿಗೆ 17 ರನ್ ಅವಶ್ಯಕತೆ ಇತ್ತು. 18ನೇ ಓವರ್‌ನ ಕೊನೆಯ ಎಸೆತದಲ್ಲಿ ಭಾರತ ಮೇಲುಗೈ ಸಾಧಿಸಿದರೆ, 19ನೇ ಓವರ್‌ನ ಆರಂಭಿಕ ಮೂರು ಎಸೆತದಲ್ಲಿ ನಿರೀಕ್ಷಿತ ರನ್ ಬರಲಿಲ್ಲ. ಆದರೆ ನಾಲ್ಕನೇ ಎಸೆತದ ಬೌಂಡರಿ ಕೊಂಚ ನಿರಾಳರನ್ನಾಗಿ ಮಾಡಿತ್ತು. ಆದರೆ ಶಿವಂ ದುಬೆ 33 ರನ್ ಸಿಡಿಸಿ ಔಟಾದರು.

ಕೊನೆಯ 6 ಎಸೆತದಲ್ಲಿ ಭಾರತದ ಗೆಲುವಿಗೆ 10 ರನ್ ಬೇಕಿತ್ತು. ಎರಡನೇ ಎಸೆತದಲ್ಲಿ ತಿಲಕ್ ವರ್ಮಾ ಭರ್ಜರಿ ಸಿಕ್ಸರ್ ಪಂದ್ಯದ ಗತಿ ಬದಲಿಸಿತ್ತು. ಬಳಿಕ 4 ಎಸೆತದಲ್ಲಿ ಭಾರತದ ಗೆಲುವಿಗೆ 2 ರನ್ ಅವಶ್ಯಕತೆ ಇತ್ತು. ರಿಂಕು ಸಿಂಗ್ ಬೌಂಡರಿ ಮೂಲಕ ಭಾರತ 5 ವಿಕೆಟ್ ಗೆಲುವು ಸಾಧಿಸಿತು.ಭಾರತ ಚಾಂಪಿಯನ್ ಆಗಿ ಹೊರಹೊಮ್ಮಿದೆ.

 

Related Articles

LEAVE A REPLY

Please enter your comment!
Please enter your name here

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles

Latest news
“ಕಲಿಯುಗದ ಕುಡುಕ” ರಾಜು ತಾಳಿಕೋಟಿ ಇನ್ನಿಲ್ಲ…. ಗದಗ  :  ನಶಾಮುಕ್ತ  ಗದಗ ಜಿಲ್ಲೆಯನ್ನು ನಿರ್ಮಿಸೋಣ: ಸಚಿವ ಎಚ್. ಕೆ. ಪಾಟೀಲ್ ಗದಗ : ಪೋಷಣ ಮಾಸಾಚರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಗದಗ : ಜಿಲ್ಲೆಯಲ್ಲಿ 123 ಪ್ರಕರಣಗಳು ಮಧ್ಯಸ್ಥಿಕೆಯಲ್ಲಿ ಇತ್ಯರ್ಥ ಗದಗ : ಕುಟುಂಬ ಕಲಹ : ಹೆಂಡತಿಯನ್ನು ಕೊಲೆಗೈದ ಗಂಡ..! ಗದಗ : ಗ್ರಾಮಾಭಿವೃದ್ಧಿಗೆ ಕೆಳಹಂತದ ವಾರ್ಷಿಕ ಯೋಜನೆ ಅತ್ಯಂತ ಸಹಕಾರಿ : ಡಾ.‌ ಯತೀಂದ್ರ ಸಿದ್ಧರಾಮಯ್ಯ ಗದಗ : ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರಿಂದ ಅರ್ಥಪೂರ್ಣ ದಸರಾ ಆಚರಣೆ ಗದಗ : ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅವಕಾಶ ಗದಗ : ಅಲ್ಪಸಂಖ್ಯಾತರ ಇಲಾಖಾ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಿ : ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಚಿಕ್ಕಟ್ಟಿ ಶಿಕ್ಷಣ ಸಂಸ್ಥೆಯು ಆಶ್ರಮದ ಶಾಲೆಯಂತಿದೆ : ಪರಮಪೂಜ್ಯ ಮೃಡಗಿರಿಯ ಜಗದ್ಗುರು ನಾಡೋಜ ಡಾ. ಅನ್ನದಾನೀಶ್ವರ ಮಹಾಶ...